Homeಮುಖಪುಟಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

ಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

- Advertisement -
- Advertisement -

ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಜೀವ ಬೆದರಿಕೆಯಿದೆ ಎಂದಿದ್ದ, ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆ ಮೂಲದ ಟಿವಿ ಪತ್ರಕರ್ತರೊಬ್ಬರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಪೊಲೀಸರು ಪತ್ರಕರ್ತರ ಸಾವನ್ನು “ಬೈಕ್ ಅಪಘಾತ” ಎಂದು ಕರೆದಿದ್ದಾರೆ.

ಎಬಿಪಿ ನ್ಯೂಸ್ ಮತ್ತು ಅದರ ಪ್ರಾದೇಶಿಕ ವಿಭಾಗವಾದ ಎಬಿಪಿ ಗಂಗಾ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸುಲಭ್ ಶ್ರೀವಾಸ್ತವ, ಶನಿವಾರವಷ್ಟೇ ತಮಗೆ ಜೀವ ಬೆದರಿಕೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಪ್ರತಾಪಗಢ ಜಿಲ್ಲೆಯಲ್ಲಿ ಇತ್ತೀಚೆಗೆ ಮದ್ಯ ಮಾಫಿಯಾಗಳ ವರದಿಯ ಮೇಲೆ ಪತ್ರಕರ್ತ ಸುಲಭ್ ಬೆಳಕು ಚೆಲ್ಲಿದ್ದರು. ನಂತರ ತನಗೆ ಬೆದರಿಕೆಯಿದೆ ಎಂದು ಹೇಳಿದ್ದರು.

“ಸುಲಭ್ ಶ್ರೀವಾಸ್ತವ ಅವರು ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಕೆಲಸದ ನಂತರ ತಮ್ಮ ಮೋಟಾರ್‌ ಸೈಕಲ್‌ನಲ್ಲಿ ಹಿಂದಿರುಗುತ್ತಿದ್ದರು. ಇಟ್ಟಿಗೆ ಗೂಡು ಬಳಿ ಅಪಘಾತಕ್ಕೆ ಈಡಾಗಿ ಬಿದ್ದಿದ್ದಾರೆ. ಕೆಲವು ಕಾರ್ಮಿಕರು ನೋಡಿ, ಅವರ ಸ್ನೇಹಿತರರಿಗೆ ಕರೆ ಮಾಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸುಲಭ್ ಶ್ರೀವಾಸ್ತವ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ” ಎಂದು ಪ್ರತಾಪಗಢದ ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ದ್ವಿವೇದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

“ಪ್ರಾಥಮಿಕ ತನಿಖೆಯಲ್ಲಿ ಅವರು ಒಬ್ಬರೇ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ರಸ್ತೆಯ ಹ್ಯಾಂಡ್‌ಪಂಪ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಾವು ಇತರ ಕೋನಗಳಲ್ಲಿಯೂ ಸಹ ತನಿಖೆ ನಡೆಸುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ದ್ವಿವೇದಿ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ತೆಗೆದಿರುವ ಪತ್ರಕರ್ತ ಸುಲಭ್ ಅವರ ಮೃತದೇಹದ ಛಾಯಾಚಿತ್ರದಲ್ಲಿ, ಪತ್ರಕರ್ತ ನೆಲದ ಮೇಲೆ ಬಿದ್ದಿರುವುದು, ಅವರ ಮುಖಕ್ಕೆ ತೀವ್ರ ಗಾಯಗಳಾಗಿರುವುದು, ಅವರು ತೊಟ್ಟಿರುವ ಬಟ್ಟೆಗಳನ್ನು ತೆಗೆದಿರುವ ರೀತಿಯಲ್ಲಿದೆ. ಶರ್ಟ್ ಸಂಪೂರ್ಣವಾಗಿ ತೆಗೆಯಲಾಗಿದ್ದು, ಪ್ಯಾಂಟ್ ಬಿಚ್ಚಿ ಕೆಳಕ್ಕೆ ಎಳೆದಿರುವುದನ್ನು ಛಾಯಾಚಿತ್ರದಲ್ಲಿ ನೋಡಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೃತ ಪತ್ರಕರ್ತ ಶನಿವಾರ ತಮಗೆ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಮಾಜಿ ಚಾನೆಲ್‌ನ ಹಿರಿಯ ಪತ್ರಕರ್ತರು ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

udhsc538

“ಜೂನ್ 9 ರಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಮದ್ಯ ಮಾಫಿಯಾ ಕುರಿತ ನನ್ನ ವರದಿಯು ನನ್ನ ಚಾನೆಲ್ ನಡೆಸುತ್ತಿರುವ ನ್ಯೂಸ್ ಪೋರ್ಟಲ್‌ನಲ್ಲಿ ವರದಿಯಾಗಿದೆ. ಅಂದಿನಿಂದ ಈ ವರದಿಯ ಬಗ್ಗೆ ಸಾಕಷ್ಟು ಚರ್ಚೆಗಳಿವೆ. ನಾನು ನನ್ನ ಮನೆಯಿಂದ ಹೊರಬಂದಾಗ ಯಾರೋ ನನ್ನನ್ನು ಹಿಂಬಾಲಿಸುವಂತೆ ಅನಿಸುತ್ತಿದೆ.  ನನ್ನ ವರದಿಯ ಬಗ್ಗೆ ಮದ್ಯ ಮಾಫಿಯಾ ಅತೃಪ್ತಿ ಹೊಂದಿದೆ. ನನಗೆ ತೊಂದರೆಯಾಗಬಹುದು ಎಂದು ನನ್ನ ಮೂಲಗಳು ತಿಳಿಸಿವೆ. ಇದರಿಂದ ನನ್ನ ಕುಟುಂಬವೂ ತುಂಬಾ ಆತಂಕಕ್ಕೊಳಗಾಗಿದೆ “ಎಂದು ಸುಲಭ್ ಶ್ರೀವಾಸ್ತವ ಪತ್ರದಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರೇಮ್ ಪ್ರಕಾಶ್ ಅವರು ಎಬಿಪಿ ನ್ಯೂಸ್‌ಗೆ ಫೋನ್-ಇನ್ ಸಂದರ್ಶನದಲ್ಲಿ ಪತ್ರದ ಬಗ್ಗೆ ಮಾತನಾಡಿದ್ದು, ಬೆದರಿಕೆ ಬಗ್ಗೆ ತನಿಖೆ ನಡೆಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸುಲಭ್ ಶ್ರೀವಾಸ್ತವ ಸಾವಿಗೆ ಪ್ರತಿಪಕ್ಷದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, “ಸತ್ಯವನ್ನು ಬಹಿರಂಗಪಡಿಸಲು ಪತ್ರಕರ್ತರು ಅಪಾಯಕಾರಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸರ್ಕಾರ ನಿದ್ರಿಸುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೊಡಗು: ಪೊಲೀಸರ ದೌರ್ಜನ್ಯಕ್ಕೆ ಮಾನಸಿಕ ಅಸ್ವಸ್ಥ ಬಲಿ: ಎಂಟು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...