Homeಮುಖಪುಟಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

ಹಳೆಯ ಪ್ರಕರಣಗಳನ್ನು ಈ ಕಾಯ್ದೆಯಡಿ ತಂದು ಜನರನ್ನು ಪೊಲೀಸರು ಮತ್ತು ಬಜರಂಗದಳದ ಕಾರ್ಯಕರ್ತರು ಬಲಿಪಶು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾದಾಗಿನಿಂದ ಪ್ರತಿದಿನ ಒಂದಲ್ಲ ಒಂದು ಪ್ರಕರಣವನ್ನು ಯುಪಿ ಪೊಲೀಸರು ದಾಖಲಿಸುತ್ತಿದ್ದಾರೆ. ಈಗ ಇಂತಹದ್ದೇ ಮತ್ತೊಂದು ಪ್ರಕರಣ ದಾಖಲಿಸಿರುವ ಪೊಲೀಸರು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಿಜ್ನೋರ್‌ನಲ್ಲಿ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು  ತಿಳಿಸಿದ್ದಾರೆ. ಆರೋಪಿ ಸಾಕಿಬ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ಆಕೆಯನ್ನು ಮತಾಂತರಗೊಳಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.

“ಕಳೆದ ಕೆಲವು ದಿನಗಳಿಂದ ಧಂಪೂರಿನ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಆದರೆ ಸಾಕಿಬ್ ಎಂಬ ಮುಸ್ಲಿಂ ವ್ಯಕ್ತಿ ಬಾಲಕಿಯನ್ನು ಅಪಹರಿಸಿದ್ದಾನೆ. ಪೊಲೀಸರು ಮತ್ತು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವಿಚಾರಣೆಯ ನಂತರ, ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ತನ್ನ ಧರ್ಮಕ್ಕೆ ಮತಾಂತರಗೊಳಿಸಿದ್ದಾನೆ. ಹಾಗಾಗಿ ಆ ವ್ಯಕ್ತಿಯನ್ನು ಬಂಧಿಸಲಾಗಿದೆ” ಎಂದು ಕುಮಾರ್ ತಿಳಿಸಿದರು.

ಇದನ್ನೂ ಓದಿ: ಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

ಆರೋಪಿ ಸಾಕಿಬ್ ತನ್ನ ನಿಜವಾದ ಗುರುತನ್ನು ಮರೆಮಾಚಿ, ತನ್ನನ್ನು ಸೋನು ಎಂದು ಬಾಲಕಿಗೆ ಪರಿಚಯ ಮಾಡಿಕೊಂಡಿದ್ದನು. ನಂತರ ಅಕೆಯನ್ನು ಅಪಹರಿಸಿ ಮತಾಂತರಗೊಳಿಸಲು ಒತ್ತಾಯಿಸಿದ್ದಾನೆ. ಆರೋಪಿ ಮೇಲೆ ಕಾನೂನುಬಾಹಿರ ಧಾರ್ಮಿಕ ಮತಾಂತರ ಮತ್ತು ಎಸ್‌ಸಿ / ಎಸ್‌ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಕಾನೂನುಬಾಹಿರವಾಗಿ ಧರ್ಮ ಪರಿವರ್ತನೆ ನಿಷೇಧ ಸುಗ್ರೀವಾಜ್ಞೆ 2020 ಜಾರಿಗೆ ತಂದಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಿ, ಹಲವರನ್ನು ಜೈಲಿಗೆ ಕಳುಹಿಸಲಾಗಿದೆ. ಹಳೆಯ ಪ್ರಕರಣಗಳನ್ನು ಈ ಕಾಯ್ದೆಯಡಿ ತಂದು ಜನರನ್ನು ಪೊಲೀಸರು ಮತ್ತು ಬಜರಂಗದಳದ ಕಾರ್ಯಕರ್ತರು ಬಲಿಪಶು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹೊಸ ಕಾನೂನಿನ ಪ್ರಕಾರ ಬಲವಂತದ ಮತಾಂತರಗಳನ್ನು ನಡೆಸಿದ ಆರೋಪದಲ್ಲಿ ಒಂದರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 15,000 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗುತ್ತದೆ.


ಇದನ್ನೂ ಓದಿ: PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...