Homeಮುಖಪುಟಉತ್ತರ ಪ್ರದೇಶ | ವಿಕಲಾಂಗ ಮಹಿಳೆಯನ್ನು ಥಳಿಸಿ ಕೊಂದ ಗುಂಪು

ಉತ್ತರ ಪ್ರದೇಶ | ವಿಕಲಾಂಗ ಮಹಿಳೆಯನ್ನು ಥಳಿಸಿ ಕೊಂದ ಗುಂಪು

- Advertisement -
- Advertisement -

ತಮ್ಮ ತೋಟದಿಂದ ಹಣ್ಣುಗಳನ್ನು ಕಿತ್ತಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆಯರ ಗುಂಪಿನಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದ 30 ವರ್ಷದ ವಿಶೇಷ ಚೇತನ ಮಹಿಳೆಯೊಬ್ಬರು ಒಂದು ದಿನದ ನಂತರ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಪ್ರಕರಣವನ್ನು ನಿಭಾಯಿಸುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಂಗಳವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ

ನವೆಂಬರ್ 9 ರಂದು ಸುನೀತಾ ದೇವಿ ಮತ್ತು ಅವರ ಪತಿ ಓಂಕಾರ್ ಅವರು ಪಾಪ್ರಿ ಗ್ರಾಮದ ಕೆರೆಯಿಂದ ಚೆಸ್ಟ್‌ನಟ್‌ ಹಣ್ಣುಗಳನ್ನು ಸಂಗ್ರಹಿಸಿ ಮನೆಗೆ ಮರಳುತ್ತಿದ್ದರು. ದಾರಿ ಮಧ್ಯೆ ಸುನೀತಾ ಮತ್ತು ಗ್ರಾಮದ ಸ್ಥಳೀಯ ಮಹಿಳೆಯರ ಗುಂಪಿನ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಮಹಿಳೆಯರು ಸುನೀತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಿಕಾರ್ಪುರ ಸರ್ಕಲ್ ಅಧಿಕಾರಿ ವಿಕಾಸ್ ಪ್ರತಾಪ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಲ್ಲೆ ನಡೆಸುವ ವೇಳೆ ಅವರ ಪತಿ ಓಂಕಾರ್ ಮಧ್ಯಪ್ರವೇಶಿಸಿ ತನ್ನ ಹೆಂಡತಿಯನ್ನು ಸ್ಥಳದಿಂದ ದೂರ ಕರೆದೊಯ್ದಿದ್ದರು. ಆದರೆ ಮರುದಿನ ಅವರು ಹಲ್ಲೆಯ ವೇಳೆ ಆಗಿದ್ದ ಗಾಯಗಳ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಇಬ್ಬರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಚೌಹಾಣ್ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಯ ಕುಟುಂಬವು ನವೆಂಬರ್ 9 ರಂದು ಅಹಮದ್‌ಗಢ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲ್ಲ ಎಂದು ಆರೋಪಿಸಲಾಗಿದೆ.

“ಮಹಿಳೆಗೆ ಥಳಿಸಿದ ಮಂಜು ದೇವಿ (40) ಮತ್ತು ಆಕೆಯ ಸೊಸೆ ಕೀರ್ತಿ ಕುಮಾರ್ (21) ವಿರುದ್ಧ BNS ಸೆಕ್ಷನ್ 103 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಮಂಜು ಅವರ ಸೋದರಳಿಯ ಅಪ್ರಾಪ್ತ” ಎಂದು ಶಿಕಾರ್ಪುರ ಸರ್ಕಲ್ ಅಧಿಕಾರಿ ವಿಕಾಸ್ ಪ್ರತಾಪ್ ಸಿಂಗ್ ಚೌಹಾಣ್ ಹೇಳಿದ್ದಾರೆ.

“ಮಹಿಳೆಯರ ಗುಂಪು ಸುನಿತಾ ಅವರ ಮೇಲೆ ದೊಣ್ಣೆಯಿಂದ ಥಳಿಸಿದೆ. ಹಾಗಾಗಿ ಅವರು ತಲೆಗೆ ಗಂಭೀರ ಗಾಯಗಳಾಗಿತ್ತು. ಗಾಯಗೊಂಡಿದ್ದ ಪತ್ನಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದಾಗ ಅಧಿಕಾರಿಗಳು ನಮ್ಮನ್ನು ನಿರ್ಲಕ್ಷಿಸಿದ್ದಾರೆ” ಎಂದು ಮಹಿಳೆಯ ಪತಿ ಓಂಕಾರ್ ಹೇಳಿದ್ದಾರೆ.

ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಹಂತದ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸೌರವ್ ಕುಮಾರ್ ಮತ್ತು ಕಾನ್ ಸ್ಟೇಬಲ್ ಅಶು ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಚೌಹಾಣ್ ಹೇಳಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...