Homeಮುಖಪುಟಹೋಟೆಲ್ ಮಾಲೀಕರು ಹೆಸರು ಪ್ರದರ್ಶಿಸಿ : ಮತ್ತೊಮ್ಮೆ ಆದೇಶಿಸಿದ ಯೋಗಿ ಸರ್ಕಾರ

ಹೋಟೆಲ್ ಮಾಲೀಕರು ಹೆಸರು ಪ್ರದರ್ಶಿಸಿ : ಮತ್ತೊಮ್ಮೆ ಆದೇಶಿಸಿದ ಯೋಗಿ ಸರ್ಕಾರ

- Advertisement -
- Advertisement -

ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಆಹಾರ ಮಳಿಗೆಗಳ ಮಾಲೀಕರು, ನಿರ್ವಾಹಕರು ತಮ್ಮ ಹೆಸರು ಪ್ರದರ್ಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಬಾಣಸಿಗರು ಮತ್ತು ಸರ್ವರ್‌ಗಳು ಮಾಸ್ಕ್ ಮತ್ತು ಕೈಗವಸುಗಳನ್ನು ಧರಿಸಬೇಕು. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದೂ ಸರ್ಕಾರ ಆದೇಶಿಸಿರುವುದಾಗಿ ವರದಿ ತಿಳಿಸಿದೆ.

ತಿನಿಸುಗಳಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಆದರೆ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸರ್ಕಾರಗಳು ಎರಡು ತಿಂಗಳ ಹಿಂದೆ ನೀಡಿದ್ದ ಇದೇ ರೀತಿಯ ಆದೇಶ ವಿವಾದಕ್ಕೆ ಕಾರಣವಾಗಿತ್ತು. ಪ್ರಸ್ತುತ ಆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯನ್ನೂ ನೀಡಿದೆ.

ಈ ವರ್ಷದ ಕನ್ವರ್ ಯಾತ್ರೆಯ ಸಂದರ್ಭ, ಯಾತ್ರೆ ಸಾಗುವ ಮಾರ್ಗದ ಎಲ್ಲಾ ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸುವಂತೆ ಸರ್ಕಾರ ಸೂಚಿಸಿತ್ತು. ಆದರೆ, ಇದು ಧರ್ಮದ ಆಧಾರದಲ್ಲಿ ಹೋಟೆಲ್‌ಗಳನ್ನು ಗುರುತಿಸಿ ಒಂದು ಸಮುದಾಯದ ವ್ಯಾಪಾರ ಬಹಿಷ್ಕರಿಸುವ ಹುನ್ನಾರ ಎಂದು ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು.

ಸರ್ಕಾರದ ಆದೇಶ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ಉಂಟು ಮಾಡುತ್ತದೆ ಎಂದು ಹಲವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 22 ರಂದು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮಂಗಳವಾರ ಹೊಸ ಆದೇಶ ನೀಡಿರುವ ಸಿಎಂ ಆದಿತ್ಯನಾಥ್, ಸಹರಾನ್‌ಪುರದಲ್ಲಿ ಬಾಲಕರು ರೊಟ್ಟಿ ಮೇಲೆ ಉಗುಳಿದ್ದಾರೆ ಮತ್ತು ಗಾಝಿಯಾಬಾದ್‌ನಲ್ಲಿ ಮಾರಾಟಗಾರರೊಬ್ಬರು ಗ್ರಾಹಕರಿಗೆ ಮೂತ್ರದೊಂದಿಗೆ ಹಣ್ಣಿನ ರಸ ಬೆರೆಸಿ ಕೊಟ್ಟಿದ್ದಾರೆ ಎಂದು ಆರೋಪಿಸಿರುವ ವಿಡಿಯೋಗಳ ಕುರಿತು ಉಲ್ಲೇಖಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜ್ಯೂಸ್, ದಾಲ್ ಮತ್ತು ರೊಟ್ಟಿಯಂತಹ ಆಹಾರ ಪದಾರ್ಥಗಳಿಗೆ ಮಾನವ ತ್ಯಾಜ್ಯ, ತಿನ್ನಲಾಗದ ಅಥವಾ ಕೊಳಕು ಪದಾರ್ಥಗಳನ್ನು ಕಲಬೆರಕೆ ಮಾಡುವ ಘಟನೆಗಳು ದೇಶದ ವಿವಿಧ ಭಾಗಗಳಿಂದ ವರದಿಯಾಗುತ್ತಿದೆ. ಈ ಕೃತ್ಯಗಳು ಕ್ರೂರವಾಗಿದ್ದು, ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತವೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹೋಟೆಲ್, ರೆಸ್ಟೋರೆಂಟ್ ಮಾಲೀಕರು, ಸಿಬ್ಬಂದಿ ಆಹಾರಕ್ಕೆ ಕಲಬೆರಕೆ ಅಥವಾ ಕೊಳಕು ಪದಾರ್ಥ ಬೆರೆಸಿದರೆ ಅವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಹೆಸರು ಪ್ರದರ್ಶಿಸುವ ಅವಶ್ಯಕತೆ ಏನಿದೆ? ಹೆಸರು ಪ್ರದರ್ಶಿಸುವುದರಿಂದ ಸಮಸ್ಯೆಗಳು ಪರಿಹಾರವಾಗುತ್ತದಾ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಹೆಸರಿಗೆ ಸ್ವಚ್ಛತೆಯ ಕಾರಣ ನೀಡಿದರೂ, ಸರ್ಕಾರದ ಆದೇಶದ ಹಿಂದೆ ಯಾರನ್ನೋ ಗುರಿಯಾಗಿಸುವ ಉದ್ದೇಶ ಇದೆ ಎಂಬ ಚರ್ಚೆಗಳು ಸಾಮಾಜಿಕ ಜಾತಾಣಗಳಲ್ಲಿ ನಡೆಯುತ್ತಿದೆ.

ಇದನ್ನೂ ಓದಿ : 3 ಕೃಷಿ ಕಾನೂನುಗಳನ್ನು ವಾಪಾಸು ತರಬೇಕು: ಬಿಜೆಪಿ ಸಂಸದೆ ಕಂಗನಾ ರಣಾವತ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...