Homeಮುಖಪುಟಹೋಟೆಲ್ ಮಾಲೀಕರು ಹೆಸರು ಪ್ರದರ್ಶಿಸಿ : ಮತ್ತೊಮ್ಮೆ ಆದೇಶಿಸಿದ ಯೋಗಿ ಸರ್ಕಾರ

ಹೋಟೆಲ್ ಮಾಲೀಕರು ಹೆಸರು ಪ್ರದರ್ಶಿಸಿ : ಮತ್ತೊಮ್ಮೆ ಆದೇಶಿಸಿದ ಯೋಗಿ ಸರ್ಕಾರ

- Advertisement -
- Advertisement -

ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಆಹಾರ ಮಳಿಗೆಗಳ ಮಾಲೀಕರು, ನಿರ್ವಾಹಕರು ತಮ್ಮ ಹೆಸರು ಪ್ರದರ್ಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಬಾಣಸಿಗರು ಮತ್ತು ಸರ್ವರ್‌ಗಳು ಮಾಸ್ಕ್ ಮತ್ತು ಕೈಗವಸುಗಳನ್ನು ಧರಿಸಬೇಕು. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದೂ ಸರ್ಕಾರ ಆದೇಶಿಸಿರುವುದಾಗಿ ವರದಿ ತಿಳಿಸಿದೆ.

ತಿನಿಸುಗಳಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಆದರೆ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸರ್ಕಾರಗಳು ಎರಡು ತಿಂಗಳ ಹಿಂದೆ ನೀಡಿದ್ದ ಇದೇ ರೀತಿಯ ಆದೇಶ ವಿವಾದಕ್ಕೆ ಕಾರಣವಾಗಿತ್ತು. ಪ್ರಸ್ತುತ ಆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯನ್ನೂ ನೀಡಿದೆ.

ಈ ವರ್ಷದ ಕನ್ವರ್ ಯಾತ್ರೆಯ ಸಂದರ್ಭ, ಯಾತ್ರೆ ಸಾಗುವ ಮಾರ್ಗದ ಎಲ್ಲಾ ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸುವಂತೆ ಸರ್ಕಾರ ಸೂಚಿಸಿತ್ತು. ಆದರೆ, ಇದು ಧರ್ಮದ ಆಧಾರದಲ್ಲಿ ಹೋಟೆಲ್‌ಗಳನ್ನು ಗುರುತಿಸಿ ಒಂದು ಸಮುದಾಯದ ವ್ಯಾಪಾರ ಬಹಿಷ್ಕರಿಸುವ ಹುನ್ನಾರ ಎಂದು ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು.

ಸರ್ಕಾರದ ಆದೇಶ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ಉಂಟು ಮಾಡುತ್ತದೆ ಎಂದು ಹಲವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 22 ರಂದು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮಂಗಳವಾರ ಹೊಸ ಆದೇಶ ನೀಡಿರುವ ಸಿಎಂ ಆದಿತ್ಯನಾಥ್, ಸಹರಾನ್‌ಪುರದಲ್ಲಿ ಬಾಲಕರು ರೊಟ್ಟಿ ಮೇಲೆ ಉಗುಳಿದ್ದಾರೆ ಮತ್ತು ಗಾಝಿಯಾಬಾದ್‌ನಲ್ಲಿ ಮಾರಾಟಗಾರರೊಬ್ಬರು ಗ್ರಾಹಕರಿಗೆ ಮೂತ್ರದೊಂದಿಗೆ ಹಣ್ಣಿನ ರಸ ಬೆರೆಸಿ ಕೊಟ್ಟಿದ್ದಾರೆ ಎಂದು ಆರೋಪಿಸಿರುವ ವಿಡಿಯೋಗಳ ಕುರಿತು ಉಲ್ಲೇಖಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜ್ಯೂಸ್, ದಾಲ್ ಮತ್ತು ರೊಟ್ಟಿಯಂತಹ ಆಹಾರ ಪದಾರ್ಥಗಳಿಗೆ ಮಾನವ ತ್ಯಾಜ್ಯ, ತಿನ್ನಲಾಗದ ಅಥವಾ ಕೊಳಕು ಪದಾರ್ಥಗಳನ್ನು ಕಲಬೆರಕೆ ಮಾಡುವ ಘಟನೆಗಳು ದೇಶದ ವಿವಿಧ ಭಾಗಗಳಿಂದ ವರದಿಯಾಗುತ್ತಿದೆ. ಈ ಕೃತ್ಯಗಳು ಕ್ರೂರವಾಗಿದ್ದು, ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತವೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹೋಟೆಲ್, ರೆಸ್ಟೋರೆಂಟ್ ಮಾಲೀಕರು, ಸಿಬ್ಬಂದಿ ಆಹಾರಕ್ಕೆ ಕಲಬೆರಕೆ ಅಥವಾ ಕೊಳಕು ಪದಾರ್ಥ ಬೆರೆಸಿದರೆ ಅವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಹೆಸರು ಪ್ರದರ್ಶಿಸುವ ಅವಶ್ಯಕತೆ ಏನಿದೆ? ಹೆಸರು ಪ್ರದರ್ಶಿಸುವುದರಿಂದ ಸಮಸ್ಯೆಗಳು ಪರಿಹಾರವಾಗುತ್ತದಾ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಹೆಸರಿಗೆ ಸ್ವಚ್ಛತೆಯ ಕಾರಣ ನೀಡಿದರೂ, ಸರ್ಕಾರದ ಆದೇಶದ ಹಿಂದೆ ಯಾರನ್ನೋ ಗುರಿಯಾಗಿಸುವ ಉದ್ದೇಶ ಇದೆ ಎಂಬ ಚರ್ಚೆಗಳು ಸಾಮಾಜಿಕ ಜಾತಾಣಗಳಲ್ಲಿ ನಡೆಯುತ್ತಿದೆ.

ಇದನ್ನೂ ಓದಿ : 3 ಕೃಷಿ ಕಾನೂನುಗಳನ್ನು ವಾಪಾಸು ತರಬೇಕು: ಬಿಜೆಪಿ ಸಂಸದೆ ಕಂಗನಾ ರಣಾವತ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...