Homeಮುಖಪುಟಯುಪಿ ಚುನಾವಣೆ ಮೊದಲ ಹಂತ: ಇಂದು 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ

ಯುಪಿ ಚುನಾವಣೆ ಮೊದಲ ಹಂತ: ಇಂದು 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ

2017ರಲ್ಲಿ ಬಿಜೆಪಿ ಈ 58 ಸ್ಥಾನಗಳಲ್ಲಿ 53 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿತ್ತು. ಈ ಬಾರಿ ರೈತರು ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದಾರೆ.

- Advertisement -
- Advertisement -

ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಆರಂಭವಾಗಿದೆ. ಗುರುವಾರ (ಫೆ.10) ಮೊದಲ ಹಂತದ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾದ ಮತದಾನದಲ್ಲಿ, ಚುನಾವಣಾ ಆಯೋಗದ ಪ್ರಕಾರ ಬೆಳಗ್ಗೆ 9:30 ರ ವರೆಗೆ ಶೇ.7.95 ರಷ್ಟು ಮತದಾನವಾಗಿದೆ.

ಮೊದಲ ಹಂತದ ಚುನಾವಣೆಯು ಜಾಟ್ ಪ್ರಾಬಲ್ಯದ ಪಶ್ಚಿಮ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ. ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಘಾಜಿಯಾಬಾದ್, ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಬುಲಂದ್‌ಶಹರ್, ಅಲಿಗಢ, ಆಗ್ರಾ ಮತ್ತು ಮಥುರಾ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಬೆಳಗ್ಗೆ 9:30 ರ ವರೆಗೆ ಮಥುರಾ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 8.23 ​​ರಷ್ಟು, ಆಗ್ರಾದಲ್ಲಿ ಶೇಕಡಾ 7.64 ರಷ್ಟು ಮತ್ತು ಬಾಗ್ಪತ್ ಕ್ಷೇತ್ರದಲ್ಲಿ ಶೇಕಡಾ 8.93 ರಷ್ಟು ಮತದಾನವಾಗಿದೆ. ಅಲಿಗಢ ಕ್ಷೇತ್ರದಲ್ಲಿ ಶೇ.8.39ರಷ್ಟು ಮತದಾನವಾಗಿದ್ದರೆ, ಗೌತಮ್ ಬುದ್ಧ ನಗರದಲ್ಲಿ ಶೇ.8.07ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ಇಂದು ಚುನಾವಣೆ ನಡೆಯುತ್ತಿರುವ 58 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದು, 2.28 ಕೋಟಿಗೂ ಹೆಚ್ಚು ಮತದಾರರು ಅವರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. 25,849 ಮತಗಟ್ಟೆಗಳು ಮತ್ತು 10,766 ಮತಗಟ್ಟೆ ಕೇಂದ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ರಾಜ್ಯದ ಗಡಿಯನ್ನು ಪೊಲೀಸರು ಸೀಲ್ ಮಾಡಿದ್ದು, ಚುನಾವಣೆ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಶಾಂತಿ ಕಾಪಾಡಲು ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.

ಅಭ್ಯರ್ಥಿಗಳಲ್ಲಿ ರಾಜ್ಯ ಸಚಿವರಾದ ಶ್ರೀಕಾಂತ್ ಶರ್ಮಾ, ಸಂದೀಪ್ ಸಿಂಗ್, ಸುರೇಶ್ ರಾಣಾ, ಕಪಿಲ್ ದೇವ್ ಅಗರ್ವಾಲ್, ಅತುಲ್ ಗರ್ಗ್ ಮತ್ತು ಚೌಧರಿ ಲಕ್ಷ್ಮಿ ನಾರಾಯಣ್ ಸೇರಿದ್ದಾರೆ. ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ ಮೈತ್ರಿಕೂಟದ ಪ್ರಮುಖ ಅಭ್ಯರ್ಥಿಗಳೆಂದರೆ ಕೈರಾನಾದಿಂದ ನಹಿದ್ ಹಸನ್ ಮತ್ತು ಮುಜಾಫರ್‌ನಗರದಿಂದ ಸೌರಭ್ ಸ್ವರೂಪ್.

ಇದನ್ನೂ ಓದಿ: ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ನೋಯ್ಡಾದಿಂದ ಮತ್ತು ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶ ಜಾಟ್ ಪ್ರಾಬಲ್ಯದ ಕ್ಷೇತ್ರವಾಗಿದೆ. ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಪ್ರಮುಖ ಕೇಂದ್ರ ಕೂಡ ಇದಾಗಿತ್ತು. ಕಾನೂನುಗಳನ್ನು ಈಗ ರದ್ದುಗೊಳಿಸಲಾಗಿದೆ. ಆದರೆ, ಬಿಜೆಪಿಗೆ ಮತ ಹಾಕದಂತೆ ರೈತ ನಾಯಕರು ಜನರನ್ನು ಒತ್ತಾಯಿಸಿದ್ದಾರೆ.

ಈ ಭಾಗದ ಕಬ್ಬು ಬೆಳೆಗಾರರು ತಮ್ಮ ಬಾಕಿ ಪಾವತಿ ವಿಳಂಬ ಮತ್ತು ವಿದ್ಯುತ್ ಬಿಲ್‌ಗಳ ಹೆಚ್ಚಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2017ರ ಚುನಾವಣೆಯಲ್ಲಿ ಬಿಜೆಪಿ ಈ 58 ಸ್ಥಾನಗಳಲ್ಲಿ 53 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿತ್ತು.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...