Homeಮುಖಪುಟಯುಪಿ ಚುನಾವಣೆ ಮೊದಲ ಹಂತ: ಇಂದು 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ

ಯುಪಿ ಚುನಾವಣೆ ಮೊದಲ ಹಂತ: ಇಂದು 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ

2017ರಲ್ಲಿ ಬಿಜೆಪಿ ಈ 58 ಸ್ಥಾನಗಳಲ್ಲಿ 53 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿತ್ತು. ಈ ಬಾರಿ ರೈತರು ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದಾರೆ.

- Advertisement -
- Advertisement -

ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಆರಂಭವಾಗಿದೆ. ಗುರುವಾರ (ಫೆ.10) ಮೊದಲ ಹಂತದ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾದ ಮತದಾನದಲ್ಲಿ, ಚುನಾವಣಾ ಆಯೋಗದ ಪ್ರಕಾರ ಬೆಳಗ್ಗೆ 9:30 ರ ವರೆಗೆ ಶೇ.7.95 ರಷ್ಟು ಮತದಾನವಾಗಿದೆ.

ಮೊದಲ ಹಂತದ ಚುನಾವಣೆಯು ಜಾಟ್ ಪ್ರಾಬಲ್ಯದ ಪಶ್ಚಿಮ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ. ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಘಾಜಿಯಾಬಾದ್, ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಬುಲಂದ್‌ಶಹರ್, ಅಲಿಗಢ, ಆಗ್ರಾ ಮತ್ತು ಮಥುರಾ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಬೆಳಗ್ಗೆ 9:30 ರ ವರೆಗೆ ಮಥುರಾ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 8.23 ​​ರಷ್ಟು, ಆಗ್ರಾದಲ್ಲಿ ಶೇಕಡಾ 7.64 ರಷ್ಟು ಮತ್ತು ಬಾಗ್ಪತ್ ಕ್ಷೇತ್ರದಲ್ಲಿ ಶೇಕಡಾ 8.93 ರಷ್ಟು ಮತದಾನವಾಗಿದೆ. ಅಲಿಗಢ ಕ್ಷೇತ್ರದಲ್ಲಿ ಶೇ.8.39ರಷ್ಟು ಮತದಾನವಾಗಿದ್ದರೆ, ಗೌತಮ್ ಬುದ್ಧ ನಗರದಲ್ಲಿ ಶೇ.8.07ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ಇಂದು ಚುನಾವಣೆ ನಡೆಯುತ್ತಿರುವ 58 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದು, 2.28 ಕೋಟಿಗೂ ಹೆಚ್ಚು ಮತದಾರರು ಅವರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. 25,849 ಮತಗಟ್ಟೆಗಳು ಮತ್ತು 10,766 ಮತಗಟ್ಟೆ ಕೇಂದ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ರಾಜ್ಯದ ಗಡಿಯನ್ನು ಪೊಲೀಸರು ಸೀಲ್ ಮಾಡಿದ್ದು, ಚುನಾವಣೆ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಶಾಂತಿ ಕಾಪಾಡಲು ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.

ಅಭ್ಯರ್ಥಿಗಳಲ್ಲಿ ರಾಜ್ಯ ಸಚಿವರಾದ ಶ್ರೀಕಾಂತ್ ಶರ್ಮಾ, ಸಂದೀಪ್ ಸಿಂಗ್, ಸುರೇಶ್ ರಾಣಾ, ಕಪಿಲ್ ದೇವ್ ಅಗರ್ವಾಲ್, ಅತುಲ್ ಗರ್ಗ್ ಮತ್ತು ಚೌಧರಿ ಲಕ್ಷ್ಮಿ ನಾರಾಯಣ್ ಸೇರಿದ್ದಾರೆ. ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ ಮೈತ್ರಿಕೂಟದ ಪ್ರಮುಖ ಅಭ್ಯರ್ಥಿಗಳೆಂದರೆ ಕೈರಾನಾದಿಂದ ನಹಿದ್ ಹಸನ್ ಮತ್ತು ಮುಜಾಫರ್‌ನಗರದಿಂದ ಸೌರಭ್ ಸ್ವರೂಪ್.

ಇದನ್ನೂ ಓದಿ: ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ನೋಯ್ಡಾದಿಂದ ಮತ್ತು ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶ ಜಾಟ್ ಪ್ರಾಬಲ್ಯದ ಕ್ಷೇತ್ರವಾಗಿದೆ. ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಪ್ರಮುಖ ಕೇಂದ್ರ ಕೂಡ ಇದಾಗಿತ್ತು. ಕಾನೂನುಗಳನ್ನು ಈಗ ರದ್ದುಗೊಳಿಸಲಾಗಿದೆ. ಆದರೆ, ಬಿಜೆಪಿಗೆ ಮತ ಹಾಕದಂತೆ ರೈತ ನಾಯಕರು ಜನರನ್ನು ಒತ್ತಾಯಿಸಿದ್ದಾರೆ.

ಈ ಭಾಗದ ಕಬ್ಬು ಬೆಳೆಗಾರರು ತಮ್ಮ ಬಾಕಿ ಪಾವತಿ ವಿಳಂಬ ಮತ್ತು ವಿದ್ಯುತ್ ಬಿಲ್‌ಗಳ ಹೆಚ್ಚಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2017ರ ಚುನಾವಣೆಯಲ್ಲಿ ಬಿಜೆಪಿ ಈ 58 ಸ್ಥಾನಗಳಲ್ಲಿ 53 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿತ್ತು.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...