Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

ಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೋರಖ್‌ಪುರದ ನಂತರ ಅಯೋಧ್ಯೆ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವಾಗಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಯೋಧ್ಯೆಯಿಂದ ಹಿಂದೆ ಸರಿದಿದ್ದಾರೆ. ಇದೇ ವೇಳೆ ಸಮಾಜವಾದಿ ಪಾರ್ಟಿ 2012ರಲ್ಲಿ ಅಯೋಧ್ಯೆಯಿಂದ ಜಯಗಳಿಸಿದ್ದ ಪವನ್ ಪಾಂಡೆ ಅವರನ್ನು ಕಣಕ್ಕಿಳಿಸಿದೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ತೇಜ್ ನಾರಾಯಣ ಪಾಂಡೆ ಅಲಿಯಾಸ್ ಪವನ್ ಪಾಂಡೆ ಅವರನ್ನು ತನ್ನ ಅಭ್ಯರ್ಥಿ ಎಂದು ಸಮಾಜವಾದಿ ಪಕ್ಷ ಘೋಷಿಸಿದ್ದು, ಪವನ್ ಪಾಂಡೆ ವಿರುದ್ಧ ಬಿಜೆಪಿ ತನ್ನ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಕೆರಳಿಸಿದೆ.

ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದಗಿನಿಂದ ಅಯೋಧ್ಯೆಯಲ್ಲಿ ಬಿಜೆಪಿ ವಿರುದ್ಧ ಜನರಲ್ಲಿ ಆಕ್ರೋಶವಿದೆ. ಸರ್ಕಾರ ತಮ್ಮ ಮನೆ, ಅಂಗಡಿಗಳನ್ನು ಕಸಿದುಕೊಂಡಿದೆ ಎಂಬ ಟೀಕೆಗಳು ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿಯ ಅಭ್ಯರ್ಥಿ ಆಯ್ಕೆಗೆ ಒತ್ತಡ ಕೂಡ ಇದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಪಾಂಡೆ ಅವರು 2012 ರಲ್ಲಿ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. 2017 ರವರೆಗೆ ಎಸ್‌ಪಿ ಸರ್ಕಾರದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2017ರ ವಿಧಾನಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಬಿಜೆಪಿಯ ವೇದಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು.

ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಕೂಡ ಅಯೋಧ್ಯೆಯಲ್ಲಿ ಪವನ್ ಪಾಂಡೆ ಪ್ರಬಲ ಅಭ್ಯರ್ಥಿ ಎಂದಿದ್ದಾರೆ. ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದರು.

ಸದ್ಯ ಬಿಜೆಪಿಯ ಶಾಸಕ ವೇದಪ್ರಕಾಶ್ ಗುಪ್ತಾ ಮತ್ತೆ ಇಲ್ಲಿಂದ ಕಣಕ್ಕಿಳಿಯುವ ಸಾಧ್ಯತೆಯನ್ನು ಬೆಂಬಲಿಗರು ಹೇಳುತ್ತಾರೆ. ಆದರೆ, ಅವರ ಬಗ್ಗೆಯೂ ಅಯೋಧ್ಯೆಯಲ್ಲಿ ಉತ್ತಮ ಅಭಿಪ್ರಾಯವಿಲ್ಲ ಎನ್ನಲಾಗುತ್ತದೆ. ಎಲ್ಲದಕ್ಕೂ ಸರ್ಕಾರ ಭೂ ಹಗರಣ ಮತ್ತು ಜನರ ನೆಲೆಯನ್ನು ಕಸಿದುಕೊಂಡಿದ್ದು ಕಾರಣ ಎನ್ನಲಾಗಿದೆ.

ಅಯೋಧ್ಯೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಕೂಡ ತಮ್ಮ ಅಭ್ಯರ್ಥಿಯನ್ನು ಘೋಷಿಸಿಲ್ಲ. ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಾದ ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿವೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...