Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

ಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೋರಖ್‌ಪುರದ ನಂತರ ಅಯೋಧ್ಯೆ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವಾಗಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಯೋಧ್ಯೆಯಿಂದ ಹಿಂದೆ ಸರಿದಿದ್ದಾರೆ. ಇದೇ ವೇಳೆ ಸಮಾಜವಾದಿ ಪಾರ್ಟಿ 2012ರಲ್ಲಿ ಅಯೋಧ್ಯೆಯಿಂದ ಜಯಗಳಿಸಿದ್ದ ಪವನ್ ಪಾಂಡೆ ಅವರನ್ನು ಕಣಕ್ಕಿಳಿಸಿದೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ತೇಜ್ ನಾರಾಯಣ ಪಾಂಡೆ ಅಲಿಯಾಸ್ ಪವನ್ ಪಾಂಡೆ ಅವರನ್ನು ತನ್ನ ಅಭ್ಯರ್ಥಿ ಎಂದು ಸಮಾಜವಾದಿ ಪಕ್ಷ ಘೋಷಿಸಿದ್ದು, ಪವನ್ ಪಾಂಡೆ ವಿರುದ್ಧ ಬಿಜೆಪಿ ತನ್ನ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಕೆರಳಿಸಿದೆ.

ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದಗಿನಿಂದ ಅಯೋಧ್ಯೆಯಲ್ಲಿ ಬಿಜೆಪಿ ವಿರುದ್ಧ ಜನರಲ್ಲಿ ಆಕ್ರೋಶವಿದೆ. ಸರ್ಕಾರ ತಮ್ಮ ಮನೆ, ಅಂಗಡಿಗಳನ್ನು ಕಸಿದುಕೊಂಡಿದೆ ಎಂಬ ಟೀಕೆಗಳು ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿಯ ಅಭ್ಯರ್ಥಿ ಆಯ್ಕೆಗೆ ಒತ್ತಡ ಕೂಡ ಇದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಪಾಂಡೆ ಅವರು 2012 ರಲ್ಲಿ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. 2017 ರವರೆಗೆ ಎಸ್‌ಪಿ ಸರ್ಕಾರದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2017ರ ವಿಧಾನಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಬಿಜೆಪಿಯ ವೇದಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು.

ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಕೂಡ ಅಯೋಧ್ಯೆಯಲ್ಲಿ ಪವನ್ ಪಾಂಡೆ ಪ್ರಬಲ ಅಭ್ಯರ್ಥಿ ಎಂದಿದ್ದಾರೆ. ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದರು.

ಸದ್ಯ ಬಿಜೆಪಿಯ ಶಾಸಕ ವೇದಪ್ರಕಾಶ್ ಗುಪ್ತಾ ಮತ್ತೆ ಇಲ್ಲಿಂದ ಕಣಕ್ಕಿಳಿಯುವ ಸಾಧ್ಯತೆಯನ್ನು ಬೆಂಬಲಿಗರು ಹೇಳುತ್ತಾರೆ. ಆದರೆ, ಅವರ ಬಗ್ಗೆಯೂ ಅಯೋಧ್ಯೆಯಲ್ಲಿ ಉತ್ತಮ ಅಭಿಪ್ರಾಯವಿಲ್ಲ ಎನ್ನಲಾಗುತ್ತದೆ. ಎಲ್ಲದಕ್ಕೂ ಸರ್ಕಾರ ಭೂ ಹಗರಣ ಮತ್ತು ಜನರ ನೆಲೆಯನ್ನು ಕಸಿದುಕೊಂಡಿದ್ದು ಕಾರಣ ಎನ್ನಲಾಗಿದೆ.

ಅಯೋಧ್ಯೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಕೂಡ ತಮ್ಮ ಅಭ್ಯರ್ಥಿಯನ್ನು ಘೋಷಿಸಿಲ್ಲ. ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಾದ ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿವೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...