Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

ಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೋರಖ್‌ಪುರದ ನಂತರ ಅಯೋಧ್ಯೆ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವಾಗಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಯೋಧ್ಯೆಯಿಂದ ಹಿಂದೆ ಸರಿದಿದ್ದಾರೆ. ಇದೇ ವೇಳೆ ಸಮಾಜವಾದಿ ಪಾರ್ಟಿ 2012ರಲ್ಲಿ ಅಯೋಧ್ಯೆಯಿಂದ ಜಯಗಳಿಸಿದ್ದ ಪವನ್ ಪಾಂಡೆ ಅವರನ್ನು ಕಣಕ್ಕಿಳಿಸಿದೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ತೇಜ್ ನಾರಾಯಣ ಪಾಂಡೆ ಅಲಿಯಾಸ್ ಪವನ್ ಪಾಂಡೆ ಅವರನ್ನು ತನ್ನ ಅಭ್ಯರ್ಥಿ ಎಂದು ಸಮಾಜವಾದಿ ಪಕ್ಷ ಘೋಷಿಸಿದ್ದು, ಪವನ್ ಪಾಂಡೆ ವಿರುದ್ಧ ಬಿಜೆಪಿ ತನ್ನ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಕೆರಳಿಸಿದೆ.

ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದಗಿನಿಂದ ಅಯೋಧ್ಯೆಯಲ್ಲಿ ಬಿಜೆಪಿ ವಿರುದ್ಧ ಜನರಲ್ಲಿ ಆಕ್ರೋಶವಿದೆ. ಸರ್ಕಾರ ತಮ್ಮ ಮನೆ, ಅಂಗಡಿಗಳನ್ನು ಕಸಿದುಕೊಂಡಿದೆ ಎಂಬ ಟೀಕೆಗಳು ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿಯ ಅಭ್ಯರ್ಥಿ ಆಯ್ಕೆಗೆ ಒತ್ತಡ ಕೂಡ ಇದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಪಾಂಡೆ ಅವರು 2012 ರಲ್ಲಿ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. 2017 ರವರೆಗೆ ಎಸ್‌ಪಿ ಸರ್ಕಾರದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2017ರ ವಿಧಾನಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಬಿಜೆಪಿಯ ವೇದಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು.

ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಕೂಡ ಅಯೋಧ್ಯೆಯಲ್ಲಿ ಪವನ್ ಪಾಂಡೆ ಪ್ರಬಲ ಅಭ್ಯರ್ಥಿ ಎಂದಿದ್ದಾರೆ. ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದರು.

ಸದ್ಯ ಬಿಜೆಪಿಯ ಶಾಸಕ ವೇದಪ್ರಕಾಶ್ ಗುಪ್ತಾ ಮತ್ತೆ ಇಲ್ಲಿಂದ ಕಣಕ್ಕಿಳಿಯುವ ಸಾಧ್ಯತೆಯನ್ನು ಬೆಂಬಲಿಗರು ಹೇಳುತ್ತಾರೆ. ಆದರೆ, ಅವರ ಬಗ್ಗೆಯೂ ಅಯೋಧ್ಯೆಯಲ್ಲಿ ಉತ್ತಮ ಅಭಿಪ್ರಾಯವಿಲ್ಲ ಎನ್ನಲಾಗುತ್ತದೆ. ಎಲ್ಲದಕ್ಕೂ ಸರ್ಕಾರ ಭೂ ಹಗರಣ ಮತ್ತು ಜನರ ನೆಲೆಯನ್ನು ಕಸಿದುಕೊಂಡಿದ್ದು ಕಾರಣ ಎನ್ನಲಾಗಿದೆ.

ಅಯೋಧ್ಯೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಕೂಡ ತಮ್ಮ ಅಭ್ಯರ್ಥಿಯನ್ನು ಘೋಷಿಸಿಲ್ಲ. ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಾದ ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿವೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...