Homeಮುಖಪುಟಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

ಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ರಾಜೀನಾಮೆ ಪರ್ವ ಮುಂದುವರೆದಿರುವ ಬೆನ್ನಲ್ಲೇ ಮುಂಬರುವ ವಿಧಾನಸಭಾ ಚುನಾವಣೆಯ ಸೀಟುಗಳಲ್ಲಿ ತಮ್ಮ ಪಾಲನ್ನು ಹೆಚ್ಚಿಸಲು ಬಿಜೆಪಿಯ ಮಿತ್ರಪಕ್ಷಗಳು ಪ್ರಯತ್ನಿಸುತ್ತಿವೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮಿತ್ರಪಕ್ಷಗಳಾದ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಮತ್ತು ಸಂಜಯ್ ನಿಶಾದ್ ನೇತೃತ್ವದ ನಿಶಾದ್ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸೀಟು ನೀಡಬೇಕು ಎಂದು ಪ್ರಸ್ತಾವನೆ ನೀಡಿವೆ.

ಪ್ರಧಾನಿ ಮೋದಿ ಸಂಪುಟದ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್, ಬಿಜೆಪಿ ನಾಯಕ ಸಂಜಯ್ ನಿಶಾದ್ ತಮ್ಮ ಪುತ್ರ ಸಂತ ಕಬೀರ್ ನಗರದ ಬಿಜೆಪಿ ಸಂಸದ ಪ್ರವೀಣ್ ನಿಶಾದ್ ಅವರೊಂದಿಗೆ ಬುಧವಾರ ಸಂಜೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ಯುಪಿ ಬಿಜೆಪಿಗೆ ಮತ್ತೊಂದು ಆಘಾತ: ಮತ್ತೊಬ್ಬ ಒಬಿಸಿ ನಾಯಕ ಮುಖೇಶ್ ವರ್ಮಾ ರಾಜೀನಾಮೆ

ಸಚಿವೆ ಅನುಪ್ರಿಯಾ ಪಟೇಲ್ ಈ ಬಾರಿ ಮತ್ತೆ ಹನ್ನೆರಡು ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅವುಗಳಲ್ಲಿ ತಮ್ಮ ಪಕ್ಷದ ಪ್ರಭಾವವಿರುವ ಪೂರ್ವ ಯುಪಿಯಿಂದ ಅರ್ಧದಷ್ಟು ಮತ್ತು ಬುಂದೇಲ್‌ಖಂಡ್ ಪ್ರದೇಶಗಳಿಗೆ ನೀಡಬೇಕು ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಲ್ಲಿ ಗಮನಿಸಬೇಕಾದದ್ದು, 2017 ರ ವಿಧಾನಸಭಾ ಚುನಾವಣೆಯಲ್ಲಿ ಬುಂದೇಲ್‌ಖಂಡ್ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಜೊತೆಗೆ 2019ರ ಲೋಕಸಭೆ ಚುನಾವಣೆಯಲ್ಲೂ ಪಕ್ಷವು ಈ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿತ್ತು.

“ಈಗ ಅಪ್ನಾ ದಳ (ಎಸ್) ಬೇಡಿಕೆಗೆ ಬಿಜೆಪಿ ಒಪ್ಪಿಗೆ ನೀಡಿದರೇ, ಈ ಬುಂದೇಲ್‌ಖಂಡ್ ಪ್ರದೇಶದಲ್ಲಿ ಇರುವ ತಮ್ಮದೆ ಹಾಲಿ ಶಾಸಕರಿಗೆ ಹೇಗೆ ಅವಕಾಶ ಕಲ್ಪಿಸುತ್ತದೆ” ಎಂದು ಹಿರಿಯ ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಪ್ರಶ್ನಿಸುತ್ತಾರೆ.

ಇತ್ತ, ನಿಶಾದ್ ಪಕ್ಷ, ರಾಮ್ ದಾಸ್ ಅಠಾವಾಳೆ ನೇತೃತ್ವದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮತ್ತು ಜನತಾ ದಳ (ಯು) ಸೇರಿದಂತೆ ಇತರ NDA ಮಿತ್ರ ಪಕ್ಷಗಳು ಸಹ ಬಿಜೆಪಿ ಮೇಲೆ ಸೀಟು ಹಂಚಿಕೆ ವಿಚಾರವಾಗಿ ಒತ್ತಡವನ್ನು ಹೆಚ್ಚಿಸುತ್ತಿವೆ.

ಇದನ್ನೂ ಓದಿ: ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

2017 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ ಅಪ್ನಾ ದಳ (ಎಸ್) ಗೆ 11 ಸ್ಥಾನಗಳನ್ನು ನೀಡಿತ್ತು. ಇವುಗಳ ಹೊರತಾಗಿ, ಅವಧ್ ಪ್ರದೇಶದಾದ್ಯಂತ ಅಪ್ನಾ ದಳವು ಸುಮಾರು ಹನ್ನೆರಡು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ. “ಪ್ರತಿಯೊಂದು ಪಕ್ಷವೂ ತನ್ನ ರೆಕ್ಕೆಗಳನ್ನು ಚಾಚಲು ಬಯಸುತ್ತದೆ. ನಮ್ಮ ಬೇಡಿಕೆಯನ್ನು ಬಿಜೆಪಿ ಮುಂದೆ ಇಟ್ಟಿದ್ದೇವೆ. ಈಗ ಚೆಂಡು ಅವರ ಅಂಗಳದಲ್ಲಿದೆ” ಎಂದು ಅನುಪ್ರಿಯಾ ಅವರ ಪತಿ ಮತ್ತು ಅಪ್ನಾ ದಳ (ಎಸ್) ಕಾರ್ಯಾಧ್ಯಕ್ಷ ಆಶಿಶ್ ಪಟೇಲ್ ಹೇಳಿದ್ದಾರೆ.

ಇನ್ನು ನಿಶಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಶಾದ್ ಎರಡಂಕಿಯ ಸೀಟುಗಳನ್ನು ಕೇಳಿದ್ದಾರೆ. “ನಾವು ನಮ್ಮ ಬೇಡಿಕೆಯನ್ನು ಬಿಜೆಪಿಗೆ ರವಾನಿಸಿದ್ದೇವೆ. ನಾವು ಎರಡಂಕಿಯಲ್ಲಿ ಸೀಟುಗಳನ್ನು ಪಡೆಯುತ್ತೇವೆ ಎಂದು ನಂಬಿದ್ದೇವೆ. ಸೀಟು ಹಂಚಿಕೆಯು ಒಂದೆರೆಡು ದಿನದಲ್ಲಿ ಅಂತಿಮಗೊಳ್ಳಲಿದೆ ಎಂದು ನನಗೆ ವಿಶ್ವಾಸವಿದೆ” ಎಂದಿದ್ದಾರೆ.

ಅಠಾವಳೆ ಅವರ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕನಿಷ್ಠ 10 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜನತಾ ದಳ (ಯು) 3 ರಿಂದ 4 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಯೋಗಿ ಆದಿತ್ಯನಾಥ್ ಸಂಪುಟದ ಮೂರನೇ ಸಚಿವ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....