Homeಮುಖಪುಟಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

ಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ರಾಜೀನಾಮೆ ಪರ್ವ ಮುಂದುವರೆದಿರುವ ಬೆನ್ನಲ್ಲೇ ಮುಂಬರುವ ವಿಧಾನಸಭಾ ಚುನಾವಣೆಯ ಸೀಟುಗಳಲ್ಲಿ ತಮ್ಮ ಪಾಲನ್ನು ಹೆಚ್ಚಿಸಲು ಬಿಜೆಪಿಯ ಮಿತ್ರಪಕ್ಷಗಳು ಪ್ರಯತ್ನಿಸುತ್ತಿವೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮಿತ್ರಪಕ್ಷಗಳಾದ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಮತ್ತು ಸಂಜಯ್ ನಿಶಾದ್ ನೇತೃತ್ವದ ನಿಶಾದ್ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸೀಟು ನೀಡಬೇಕು ಎಂದು ಪ್ರಸ್ತಾವನೆ ನೀಡಿವೆ.

ಪ್ರಧಾನಿ ಮೋದಿ ಸಂಪುಟದ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್, ಬಿಜೆಪಿ ನಾಯಕ ಸಂಜಯ್ ನಿಶಾದ್ ತಮ್ಮ ಪುತ್ರ ಸಂತ ಕಬೀರ್ ನಗರದ ಬಿಜೆಪಿ ಸಂಸದ ಪ್ರವೀಣ್ ನಿಶಾದ್ ಅವರೊಂದಿಗೆ ಬುಧವಾರ ಸಂಜೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ಯುಪಿ ಬಿಜೆಪಿಗೆ ಮತ್ತೊಂದು ಆಘಾತ: ಮತ್ತೊಬ್ಬ ಒಬಿಸಿ ನಾಯಕ ಮುಖೇಶ್ ವರ್ಮಾ ರಾಜೀನಾಮೆ

ಸಚಿವೆ ಅನುಪ್ರಿಯಾ ಪಟೇಲ್ ಈ ಬಾರಿ ಮತ್ತೆ ಹನ್ನೆರಡು ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅವುಗಳಲ್ಲಿ ತಮ್ಮ ಪಕ್ಷದ ಪ್ರಭಾವವಿರುವ ಪೂರ್ವ ಯುಪಿಯಿಂದ ಅರ್ಧದಷ್ಟು ಮತ್ತು ಬುಂದೇಲ್‌ಖಂಡ್ ಪ್ರದೇಶಗಳಿಗೆ ನೀಡಬೇಕು ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಲ್ಲಿ ಗಮನಿಸಬೇಕಾದದ್ದು, 2017 ರ ವಿಧಾನಸಭಾ ಚುನಾವಣೆಯಲ್ಲಿ ಬುಂದೇಲ್‌ಖಂಡ್ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಜೊತೆಗೆ 2019ರ ಲೋಕಸಭೆ ಚುನಾವಣೆಯಲ್ಲೂ ಪಕ್ಷವು ಈ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿತ್ತು.

“ಈಗ ಅಪ್ನಾ ದಳ (ಎಸ್) ಬೇಡಿಕೆಗೆ ಬಿಜೆಪಿ ಒಪ್ಪಿಗೆ ನೀಡಿದರೇ, ಈ ಬುಂದೇಲ್‌ಖಂಡ್ ಪ್ರದೇಶದಲ್ಲಿ ಇರುವ ತಮ್ಮದೆ ಹಾಲಿ ಶಾಸಕರಿಗೆ ಹೇಗೆ ಅವಕಾಶ ಕಲ್ಪಿಸುತ್ತದೆ” ಎಂದು ಹಿರಿಯ ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಪ್ರಶ್ನಿಸುತ್ತಾರೆ.

ಇತ್ತ, ನಿಶಾದ್ ಪಕ್ಷ, ರಾಮ್ ದಾಸ್ ಅಠಾವಾಳೆ ನೇತೃತ್ವದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮತ್ತು ಜನತಾ ದಳ (ಯು) ಸೇರಿದಂತೆ ಇತರ NDA ಮಿತ್ರ ಪಕ್ಷಗಳು ಸಹ ಬಿಜೆಪಿ ಮೇಲೆ ಸೀಟು ಹಂಚಿಕೆ ವಿಚಾರವಾಗಿ ಒತ್ತಡವನ್ನು ಹೆಚ್ಚಿಸುತ್ತಿವೆ.

ಇದನ್ನೂ ಓದಿ: ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

2017 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ ಅಪ್ನಾ ದಳ (ಎಸ್) ಗೆ 11 ಸ್ಥಾನಗಳನ್ನು ನೀಡಿತ್ತು. ಇವುಗಳ ಹೊರತಾಗಿ, ಅವಧ್ ಪ್ರದೇಶದಾದ್ಯಂತ ಅಪ್ನಾ ದಳವು ಸುಮಾರು ಹನ್ನೆರಡು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ. “ಪ್ರತಿಯೊಂದು ಪಕ್ಷವೂ ತನ್ನ ರೆಕ್ಕೆಗಳನ್ನು ಚಾಚಲು ಬಯಸುತ್ತದೆ. ನಮ್ಮ ಬೇಡಿಕೆಯನ್ನು ಬಿಜೆಪಿ ಮುಂದೆ ಇಟ್ಟಿದ್ದೇವೆ. ಈಗ ಚೆಂಡು ಅವರ ಅಂಗಳದಲ್ಲಿದೆ” ಎಂದು ಅನುಪ್ರಿಯಾ ಅವರ ಪತಿ ಮತ್ತು ಅಪ್ನಾ ದಳ (ಎಸ್) ಕಾರ್ಯಾಧ್ಯಕ್ಷ ಆಶಿಶ್ ಪಟೇಲ್ ಹೇಳಿದ್ದಾರೆ.

ಇನ್ನು ನಿಶಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಶಾದ್ ಎರಡಂಕಿಯ ಸೀಟುಗಳನ್ನು ಕೇಳಿದ್ದಾರೆ. “ನಾವು ನಮ್ಮ ಬೇಡಿಕೆಯನ್ನು ಬಿಜೆಪಿಗೆ ರವಾನಿಸಿದ್ದೇವೆ. ನಾವು ಎರಡಂಕಿಯಲ್ಲಿ ಸೀಟುಗಳನ್ನು ಪಡೆಯುತ್ತೇವೆ ಎಂದು ನಂಬಿದ್ದೇವೆ. ಸೀಟು ಹಂಚಿಕೆಯು ಒಂದೆರೆಡು ದಿನದಲ್ಲಿ ಅಂತಿಮಗೊಳ್ಳಲಿದೆ ಎಂದು ನನಗೆ ವಿಶ್ವಾಸವಿದೆ” ಎಂದಿದ್ದಾರೆ.

ಅಠಾವಳೆ ಅವರ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕನಿಷ್ಠ 10 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜನತಾ ದಳ (ಯು) 3 ರಿಂದ 4 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಯೋಗಿ ಆದಿತ್ಯನಾಥ್ ಸಂಪುಟದ ಮೂರನೇ ಸಚಿವ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...