Homeಮುಖಪುಟಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ಚುನಾವಣಾ ಕಣ ದಿನ ದಿನಕ್ಕೂ ರಂಗೇರುತ್ತಿದ್ದು, ಪಕ್ಷದ ಪರ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ಶಾಸಕರನ್ನು ಅವರ ಸ್ವಂತ ಕ್ಷೇತ್ರ ಮುಜಾಫರ್‌ನಗರದ ಗ್ರಾಮಸ್ಥರು ಓಡಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬಿಜೆಪಿ ಶಾಸಕ ಮತ್ತು ಮುಜಾಫರ್‌ನಗರದ ಖತೌಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಕ್ರಮ್ ಸೈನಿ ಅವರು ತಮ್ಮ ಪ್ರದೇಶದ ಮಾನವ್‌ವರ್‌ಪುರ ಗ್ರಾಮದಲ್ಲಿ ಸಭೆಗೆ ಆಗಮಿಸಿದ್ದರು. ಈ ವೇಳೆ ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದ ಗ್ರಾಮಸ್ಥರು, ಶಾಸಕರನ್ನು ಇಲ್ಲಿಂದ ಹೊರಟು ಹೋಗುವಂತೆ ಎಚ್ಚರಿಸಿ ಬೆನ್ನಟ್ಟಿ ಓಡಿಸಿದ್ದಾರೆ.

ವೈರಲ್ ವೀಡಿಯೊದಲ್ಲಿ, ಗ್ರಾಮಸ್ಥರ ಗುಂಪು ಶಾಸಕ ವಿಕ್ರಮ್ ಸಿಂಗ್ ಸೈನಿಯನ್ನು ಅವರ ಕಾರಿನವರೆಗೆ ಹಿಂಬಾಲಿಸುತ್ತದೆ. ಅವರು ಕಾರು ಹತ್ತುತ್ತಿದ್ದಂತೆ ಗ್ರಾಮಸ್ಥರು ಶಾಸಕರ ವಿರುದ್ಧ ಘೋಷಣೆ ಕೂಗುತ್ತಿರುವುದು ಕೇಳಿಬರುತ್ತಿದೆ. ಜೊತೆಗೆ ಇಲ್ಲಿಂದ ಹೊರಟು ಹೋಗುವಂತೆ ಘೋಷಣೆ ಮತ್ತು ಸನ್ನೆಗಳ ಮೂಲಕ ತಿಳಿಸುತ್ತದೆ.

ಇದನ್ನೂ ಓದಿ: ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಕಳೆದ ವರ್ಷ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆದ ರೈತರ ಒಂದು ವರ್ಷದ ಪ್ರತಿಭಟನೆಯ ಕಿಚ್ಚು ಇನ್ನು ರೈತರಲ್ಲಿ ಆರಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಶಾಸಕ ಸೈನಿ ಅವರು ತಮ್ಮ ಕೈಗಳನ್ನು ಮುಗಿದು ರೈತರ ಬಳಿ ಕ್ಷಮೆ ಕೇಳಿ ಕಾರಿನಲ್ಲಿ ಹೊರಟು ಹೋಗಿದ್ದಾರೆ.

ಶಾಸಕ ವಿಕ್ರಮ್ ಸೈನಿ ಹಲವು ಬಾರಿ ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ. 2019 ರಲ್ಲಿ, ಭಾರತದಲ್ಲಿ ಅಸುರಕ್ಷಿತ ಎಂದು ಭಾವಿಸುವವರಿಗೆ “ಬಾಂಬ್” ಹಾಕುವುದಾಗಿ ಬೆದರಿಕೆ ಹಾಕಿದ್ದರು. ಅದಕ್ಕೂ ಹಿಂದೆ “ನಮ್ಮ ದೇಶವನ್ನು ಹಿಂದೂಸ್ತಾನ್ ಎಂದು ಕರೆಯಲಾಗುತ್ತದೆ, ಅಂದರೆ ಹಿಂದೂಗಳ ರಾಷ್ಟ್ರ” ಎಂದು ಹೇಳಿದ್ದರು. ಗೋಹತ್ಯೆ ಮಾಡುವವರ ಕೈಕಾಲು ಮುರಿಯುವುದಾಗಿಯೂ ಬೆದರಿಕೆ ಹಾಕಿದ್ದಾರೆ.

ಚುನಾವಣೆಗೂ ಮುನ್ನವೇ ಅಭ್ಯರ್ಥಿಗಳು ಹಾಗೂ ಮುಖಂಡರಿಗೆ ಮತದಾರರು ವಿರೋಧ ವ್ಯಕ್ತಪಡಿಸುತ್ತಿರುವ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಇತ್ತೀಚೆಗೆ, ಬಿಜೆಪಿ ಪಕ್ಷದ 200 ಬೂತ್ ಅಧ್ಯಕ್ಷರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪಕ್ಷವನ್ನು ತೊರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಏಕಾಂಗಿ ಸ್ಪರ್ಧೆ ಎಂದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....