ಉತ್ತರ ಪ್ರದೇಶದಲ್ಲಿ ಗಣರಾಜ್ಯೋತ್ಸವದಂದು ಪ್ರಾಂಶುಪಾಲರು ಮತ್ತು ಶಿಕ್ಷಕರ ಸೂಚನೆ ಮೇರೆಗೆ ಶಾಲಾ ಮಕ್ಕಳು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿ ಘೋಷಣೆ ಕೂಗಿದ್ದರು. ಈ ಘಟನೆ ಸಂಬಂಧ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
ಸಿದ್ಧಾರ್ಥನಗರ ಜಿಲ್ಲೆಯ ಸೊಹ್ರತ್ಗಢ್ ಬ್ಲಾಕ್ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದಂದು ನಡೆದ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ವೀಡಿಯೋದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆಯನ್ನು ಹಾಡಿದ ನಂತರ ಶಿಕ್ಷಕರ ನಿರ್ದೇಶನದ ಮೇರೆಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರ ಹೆಸರಿನಲ್ಲಿ, ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಘೋಷಣೆಗಳನ್ನು ಕೂಗಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿನಿಯ ಸಾವು ಬಳಸಿಕೊಂಡು ದ್ವೇಷ ರಾಜಕೀಯದ ಆರೋಪ: ಅಣ್ಣಾಮಲೈ ಬಂಧನಕ್ಕೆ ಆಗ್ರಹ
ಇದು ಪ್ರಸ್ತುತ ಚುನಾವಣಾಗೆ ಸಿದ್ಧವಾಗಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.
ಘಟನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ದೀಪಕ್ ಮೀನಾ, ಸಾಮಾಜಿಕ ಜಾಲತಾಣಗಳ ಮೂಲಕ ವಿಡಿಯೋ ಬಗ್ಗೆ ತಿಳಿದಿದೆ ಎಂದಿದ್ದಾರೆ.
“ನಮಗೆ ಘಟನೆ ಬಗ್ಗೆ ತಿಳಿದು ಬಂದಿದೆ. ಅದರ ಬಗ್ಗೆ ತನಿಖೆ ನಡೆಸಲು ಪ್ರಾಥಮಿಕ ಶಿಕ್ಷಣ ಅಧಿಕಾರಿಗೆ (ಬಿಎಸ್ಎ) ನಿರ್ದೇಶನ ನೀಡಿದ್ದೇವೆ. ಯಾರೇ ತಪ್ಪಿತಸ್ಥರೆಂದು ಕಂಡುಬಂದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ವರ್ಗಾವಣೆ