Homeಮುಖಪುಟಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ (ಜ.13) ಪ್ರಕಟಿಸಿದೆ. ಈ ಪಟ್ಟಿ ಜನರ ಗಮನ ಸೆಳೆಯುತ್ತಿದೆ. ಶೇಕಡಾ 40 ರಷ್ಟು ಮಹಿಳೆಯರು ಮತ್ತು ಶೇಕಡಾ 40 ಯುವಜನತೆ ಪಟ್ಟಿಯಲ್ಲಿ ತುಂಬಿದ್ದಾರೆ. ಆಶಾ ಕಾರ್ಯಕರ್ತೆ, ಸಿಎಎ ಹೋರಾಟಗಾರ್ತಿಯರು, ಅತ್ಯಾಚಾರ ಸಂತ್ರಸ್ತೆಯ ತಾಯಿ, ಬುಡಕಟ್ಟು ಹೋರಾಟಗಾರರು ಈ ಬಾರಿಯ ಯುಪಿ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ.

ಚುನಾವಣೆ ಪಟ್ಟಿ ಬಿಡುಗಡೆಗೆ ಮೊದಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದಂತೆ, ಪಕ್ಷವು 40 % ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ 50 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ ಹೆಚ್ಚಿನವರು ಮೊದಲ ಬಾರಿಗೆ ಅಭ್ಯರ್ಥಿಗಳಾಗಿ ಚುನಾವಣೆ ಎದುರಿಸುತ್ತಿದ್ದಾರೆ. ಅವರಲ್ಲಿ ಕೆಲವರ ವಿವರ ಇಲ್ಲಿದೆ.

ಆಶಾ ಸಿಂಗ್, ಉನ್ನಾವೋ ಕ್ಷೇತ್ರ

ಆಶಾ ಸಿಂಗ್, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ. ಉನ್ನಾವೋ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅತ್ಯಾಚಾರ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ ಸೆಂಗಾರ್‌ಗೆ ಶಿಕ್ಷೆ ವಿಧಿಸಲಾಗಿದೆ. 2017 ರ ಈ ದುರ್ಘಟನೆಗೂ ಮುನ್ನ ಆಶಾ ಸಿಂಗ್ ಮನೆಯಿಂದ ಹೊರ ಬಂದವರಲಲ. ಆದರೆ, ಈಗ ತನ್ನ ಮಗಳಿಗೆ ನ್ಯಾಯಕ್ಕಾಗಿ ನಡೆದ ಹೋರಾಟ ತನ್ನ ಜೀವನವನ್ನು ಬದಲಾಯಿಸಿದೆ ಎಂದು ಹೇಳುತ್ತಾರೆ. ನ್ಯಾಯಕ್ಕಾಗಿ ನಡೆಯುತ್ತಿರುವ ತನ್ನ ಅಭಿಯಾನವನ್ನು ಹೆಚ್ಚಿಸಲು ಉನ್ನಾವೊ ಕ್ಷೇತ್ರದಿಂದ ಚುನಾವಣೆ ಎದುರಿಸಲು ಸಿದ್ಧ ಎಂದು ಆಶಾ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ನಟ ಸೋನು ಸೂದ್‌ ಸಹೋದರಿ ಮಾಳವಿಕಾ ಕಾಂಗ್ರೆಸ್ ಸೇರ್ಪಡೆ

ಪೂನಂ ಪಾಂಡೆ, ಶಹಜಹಾನ್‌ಪುರ ಕ್ಷೇತ್ರ

ಪೂನಂ ಪಾಂಡೆ ಒಬ್ಬ ಆಶಾ ಕಾರ್ಯಕರ್ತೆ. ಕಳೆದ ವರ್ಷ ತಮ್ಮ ಗೌರವಧನವನ್ನು ಹೆಚ್ಚಿಸುವಂತೆ ಒತ್ತಾಯಿಸಿ, ಪೂನಂ ಮತ್ತು ಇತರ ಆಶಾ ಕಾರ್ಯಕರ್ತೆಯರು ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದಾಗ ಪೊಲೀಸರು ಅವರ ಮೇಲೆ ಹಲ್ಲೇ ಮಾಡಿದ್ದರು. ಆಗ ಘಟನೆಯ ವಿಡಿಯೋ ವೈರಲ್ ಆಗಿತ್ತು. ನಂತರ, ಮುಖದ ಮೇಲೆ ಗಾಯದ ಗುರುತುಗಳು ಮತ್ತು ಬಲಗೈಗೆ ಪ್ಲ್ಯಾಸ್ಟೆಡ್ ಮಾಡಿದ ಪೂನಂ, ಇತರ ಆಶಾ ಕಾರ್ಯಕರ್ತೆಯರೊಂದಿಗೆ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಈಗ ಅವರನ್ನು ಶಹಜಾನ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಸದಾಫ್ ಜಾಫರ್, ಲಕ್ನೋ ಕೇಂದ್ರ

ನಟಿ, ಹೋರಾಟಗಾರ್ತಿ ಆಗಿರುವ ಸದಾಫ್ ಜಾಫರ್ ಅವರನ್ನು ಡಿಸೆಂಬರ್ 19, 2019 ರಂದು ಲಕ್ನೋದಲ್ಲಿ CAA-NRC ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಫೇಸ್‌ಬುಕ್ ಲೈವ್ ಮಾಡುತ್ತಿದ್ದಾಗ ಬಂಧಿಸಲಾಗಿತ್ತು. ಕೊಲೆಯ ಯತ್ನ, ಗಲಭೆ, ಕ್ರಿಮಿನಲ್ ಪಿತೂರಿ, ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಇತ್ಯಾದಿ ಆರೋಪಗಳ ಮೇಲೆ ಆಕೆಯನ್ನು ದಾಖಲಿಸಲಾಗಿತ್ತು. ಈಗ ಲಕ್ನೋ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ರಿತು ಸಿಂಗ್, ಮುಹಮ್ಮದಿ ಸ್ಥಾನ, ಲಖಿಂಪುರ ಖೇರಿ

ರಿತು ಸಿಂಗ್ ಮಾಜಿ ಸಮಾಜವಾದಿ ಪಕ್ಷದ ಕಾರ್ಯಕರ್ತೆ. ಅವರು ಪಾಸ್ಗಾವಾನ್ ಬ್ಲಾಕ್‌ನ ಬ್ಲಾಕ್ ಮುಖ್ಯಸ್ಥರ ಹುದ್ದೆಗೆ ಎಸ್‌ಪಿ ಬೆಂಬಲಿತ ಅಭ್ಯರ್ಥಿಯಾಗಿದ್ದರು. ಕಳೆದ ವರ್ಷ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಸುವ ತನ್ನ ಪ್ರಯತ್ನವನ್ನು ವಿಫಲಗೊಳಿಸಲು ಕೆಲವು ಬಿಜೆಒಇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ, ಬಟ್ಟೆ ಹರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಲಕ್ನೋದಲ್ಲಿ ತನ್ನ ಕುಟುಂಬದೊಂದಿಗೆ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನಂತರ ಅವರು ಕಾಂಗ್ರೆಸ್ ಸೇರಿದರು.

’ಒಂದು ವೇಳೆ ನಾಮಪತ್ರ ಸಲ್ಲಿಸಲು ಹೋದರೆ ಗೂಂಡಾಗಳಿಂದ ಥಳಿಸುತ್ತಾರೆ ಎಂಬ ಭಯ ನನಗಿತ್ತು, ಆದರೆ ಈಗ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

ಪಂಖೂರಿ ಪಾಠಕ್, ಗೌತಮ್ ಬುದ್ಧ ನಗರ

ಉತ್ತರಾಖಂಡದವರಾದ ಪಂಖೂರಿ ಪಾಠಕ್ ದೆಹಲಿಯಲ್ಲಿ ಬೆಳೆದವರು. ಆಕೆಯ ಪೋಷಕರು ವೈದ್ಯರು. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಅವರು ಬಳಿಕ ಹಂಸರಾಜ್ ಕಾಲೇಜಿನಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು. ಅಲ್ಲಿಂದ ಸಮಾಜವಾದಿ ಪಕ್ಷಕ್ಕೆ ಸೇರಿ ಅದರ ಯುವ ಸಂಘಟನೆಗಾಗಿ ಕೆಲಸ ಮಾಡಿದರು. 2016 ರಲ್ಲಿ, ಅವರು ಪಕ್ಷದ ಮೊದಲ ಮಹಿಳಾ ವಕ್ತಾರರಾದರು, ಆದರೆ 2019 ರ ಆರಂಭದಲ್ಲಿ, ಪಕ್ಷದ ಇತರ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳ ನಂತರ ಕಾಂಗ್ರೆಸ್‌ಗೆ ಸೇರಿದ್ದಾರೆ. ಅವರ ಪತಿ, ಮಾಜಿ ಎಸ್‌ಪಿ ವಕ್ತಾರ ಅನಿಲ್ ಯಾದವ್ ಕೂಡ ಕಳೆದ ವರ್ಷ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರಿದ್ದರು. ಪಂಖೂರಿ ಪ್ರಸ್ತುತ ಕಾಂಗ್ರೆಸ್‌ನ ಯುಪಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾಗಿದ್ದಾರೆ.

ನಿದಾ ಅಹ್ಮದ್, ಸಂಭಾಲ್

ಕಾಂಗ್ರೆಸ್‌ ಪಕ್ಷದ ಸಂಭಾಲ್ ಕುಟುಂಬದಲ್ಲಿ ಜನಿಸಿದ 36 ವರ್ಷದ ನಿದಾ ಅಹ್ಮದ್ ಸುಮಾರು 12 ವರ್ಷಗಳ ಹಿಂದೆ ದೆಹಲಿಯಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದರು. ಟಿವಿ ನಿರೂಪಕಿ, ನಿದಾ ಅವರು ಆಜ್ ತಕ್ ಗ್ರೂಪ್, ಝೀ ಮೀಡಿಯಾ, ನ್ಯೂಸ್ ಇಂಡಿಯಾ 24×7 ಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಈ ವಾರದ ಆರಂಭದಲ್ಲಿ ಅವರು ಕಾಂಗ್ರೆಸ್ ಸೇರಿದ್ದರು.

ಅರ್ಚನಾ ಗೌತಮ್, ಹಸ್ತಿನಾಪುರ

ಮೀರತ್‌ನ ಹಸ್ತಿನಾಪುರ ಕ್ಷೇತ್ರದಿಂದ (SC-ಮೀಸಲು) ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ 26 ವರ್ಷ ವಯಸ್ಸಿನ ನಟಿ ಮತ್ತು ರೂಪದರ್ಶಿ ಅರ್ಚನಾ ಗೌತಮ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಹಿಂದಿ ಮತ್ತು ತಮಿಳು ಚಿತ್ರಗಳಲ್ಲಿ ಪರಿಚಿತ ಮುಖ. ಮೀರತ್‌ನ ಐಐಎಂಟಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಪಡೆದಿದ್ದಾರೆ. ಕಳೆದ ವರ್ಷ ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಕಾಂಗ್ರೆಸ್ ಸೇರಿದ್ದರು. ಗೌತಮ್ 2014 ರಲ್ಲಿ ಐಐಎಂಟಿಯಲ್ಲಿ ಓದುತ್ತಿದ್ದಾಗ ಮಿಸ್ ಯುಪಿ ಪ್ರಶಸ್ತಿಯನ್ನು ಗೆದ್ದಿದ್ದರು. ಅವರು 2018 ರಲ್ಲಿ ಮಿಸ್ ಬಿಕಿನಿ ಇಂಡಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...