Homeಮುಖಪುಟಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ (ಜ.13) ಪ್ರಕಟಿಸಿದೆ. ಈ ಪಟ್ಟಿ ಜನರ ಗಮನ ಸೆಳೆಯುತ್ತಿದೆ. ಶೇಕಡಾ 40 ರಷ್ಟು ಮಹಿಳೆಯರು ಮತ್ತು ಶೇಕಡಾ 40 ಯುವಜನತೆ ಪಟ್ಟಿಯಲ್ಲಿ ತುಂಬಿದ್ದಾರೆ. ಆಶಾ ಕಾರ್ಯಕರ್ತೆ, ಸಿಎಎ ಹೋರಾಟಗಾರ್ತಿಯರು, ಅತ್ಯಾಚಾರ ಸಂತ್ರಸ್ತೆಯ ತಾಯಿ, ಬುಡಕಟ್ಟು ಹೋರಾಟಗಾರರು ಈ ಬಾರಿಯ ಯುಪಿ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ.

ಚುನಾವಣೆ ಪಟ್ಟಿ ಬಿಡುಗಡೆಗೆ ಮೊದಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದಂತೆ, ಪಕ್ಷವು 40 % ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ 50 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ ಹೆಚ್ಚಿನವರು ಮೊದಲ ಬಾರಿಗೆ ಅಭ್ಯರ್ಥಿಗಳಾಗಿ ಚುನಾವಣೆ ಎದುರಿಸುತ್ತಿದ್ದಾರೆ. ಅವರಲ್ಲಿ ಕೆಲವರ ವಿವರ ಇಲ್ಲಿದೆ.

ಆಶಾ ಸಿಂಗ್, ಉನ್ನಾವೋ ಕ್ಷೇತ್ರ

ಆಶಾ ಸಿಂಗ್, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ. ಉನ್ನಾವೋ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅತ್ಯಾಚಾರ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ ಸೆಂಗಾರ್‌ಗೆ ಶಿಕ್ಷೆ ವಿಧಿಸಲಾಗಿದೆ. 2017 ರ ಈ ದುರ್ಘಟನೆಗೂ ಮುನ್ನ ಆಶಾ ಸಿಂಗ್ ಮನೆಯಿಂದ ಹೊರ ಬಂದವರಲಲ. ಆದರೆ, ಈಗ ತನ್ನ ಮಗಳಿಗೆ ನ್ಯಾಯಕ್ಕಾಗಿ ನಡೆದ ಹೋರಾಟ ತನ್ನ ಜೀವನವನ್ನು ಬದಲಾಯಿಸಿದೆ ಎಂದು ಹೇಳುತ್ತಾರೆ. ನ್ಯಾಯಕ್ಕಾಗಿ ನಡೆಯುತ್ತಿರುವ ತನ್ನ ಅಭಿಯಾನವನ್ನು ಹೆಚ್ಚಿಸಲು ಉನ್ನಾವೊ ಕ್ಷೇತ್ರದಿಂದ ಚುನಾವಣೆ ಎದುರಿಸಲು ಸಿದ್ಧ ಎಂದು ಆಶಾ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ನಟ ಸೋನು ಸೂದ್‌ ಸಹೋದರಿ ಮಾಳವಿಕಾ ಕಾಂಗ್ರೆಸ್ ಸೇರ್ಪಡೆ

ಪೂನಂ ಪಾಂಡೆ, ಶಹಜಹಾನ್‌ಪುರ ಕ್ಷೇತ್ರ

ಪೂನಂ ಪಾಂಡೆ ಒಬ್ಬ ಆಶಾ ಕಾರ್ಯಕರ್ತೆ. ಕಳೆದ ವರ್ಷ ತಮ್ಮ ಗೌರವಧನವನ್ನು ಹೆಚ್ಚಿಸುವಂತೆ ಒತ್ತಾಯಿಸಿ, ಪೂನಂ ಮತ್ತು ಇತರ ಆಶಾ ಕಾರ್ಯಕರ್ತೆಯರು ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದಾಗ ಪೊಲೀಸರು ಅವರ ಮೇಲೆ ಹಲ್ಲೇ ಮಾಡಿದ್ದರು. ಆಗ ಘಟನೆಯ ವಿಡಿಯೋ ವೈರಲ್ ಆಗಿತ್ತು. ನಂತರ, ಮುಖದ ಮೇಲೆ ಗಾಯದ ಗುರುತುಗಳು ಮತ್ತು ಬಲಗೈಗೆ ಪ್ಲ್ಯಾಸ್ಟೆಡ್ ಮಾಡಿದ ಪೂನಂ, ಇತರ ಆಶಾ ಕಾರ್ಯಕರ್ತೆಯರೊಂದಿಗೆ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಈಗ ಅವರನ್ನು ಶಹಜಾನ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಸದಾಫ್ ಜಾಫರ್, ಲಕ್ನೋ ಕೇಂದ್ರ

ನಟಿ, ಹೋರಾಟಗಾರ್ತಿ ಆಗಿರುವ ಸದಾಫ್ ಜಾಫರ್ ಅವರನ್ನು ಡಿಸೆಂಬರ್ 19, 2019 ರಂದು ಲಕ್ನೋದಲ್ಲಿ CAA-NRC ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಫೇಸ್‌ಬುಕ್ ಲೈವ್ ಮಾಡುತ್ತಿದ್ದಾಗ ಬಂಧಿಸಲಾಗಿತ್ತು. ಕೊಲೆಯ ಯತ್ನ, ಗಲಭೆ, ಕ್ರಿಮಿನಲ್ ಪಿತೂರಿ, ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಇತ್ಯಾದಿ ಆರೋಪಗಳ ಮೇಲೆ ಆಕೆಯನ್ನು ದಾಖಲಿಸಲಾಗಿತ್ತು. ಈಗ ಲಕ್ನೋ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ರಿತು ಸಿಂಗ್, ಮುಹಮ್ಮದಿ ಸ್ಥಾನ, ಲಖಿಂಪುರ ಖೇರಿ

ರಿತು ಸಿಂಗ್ ಮಾಜಿ ಸಮಾಜವಾದಿ ಪಕ್ಷದ ಕಾರ್ಯಕರ್ತೆ. ಅವರು ಪಾಸ್ಗಾವಾನ್ ಬ್ಲಾಕ್‌ನ ಬ್ಲಾಕ್ ಮುಖ್ಯಸ್ಥರ ಹುದ್ದೆಗೆ ಎಸ್‌ಪಿ ಬೆಂಬಲಿತ ಅಭ್ಯರ್ಥಿಯಾಗಿದ್ದರು. ಕಳೆದ ವರ್ಷ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಸುವ ತನ್ನ ಪ್ರಯತ್ನವನ್ನು ವಿಫಲಗೊಳಿಸಲು ಕೆಲವು ಬಿಜೆಒಇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ, ಬಟ್ಟೆ ಹರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಲಕ್ನೋದಲ್ಲಿ ತನ್ನ ಕುಟುಂಬದೊಂದಿಗೆ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನಂತರ ಅವರು ಕಾಂಗ್ರೆಸ್ ಸೇರಿದರು.

’ಒಂದು ವೇಳೆ ನಾಮಪತ್ರ ಸಲ್ಲಿಸಲು ಹೋದರೆ ಗೂಂಡಾಗಳಿಂದ ಥಳಿಸುತ್ತಾರೆ ಎಂಬ ಭಯ ನನಗಿತ್ತು, ಆದರೆ ಈಗ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

ಪಂಖೂರಿ ಪಾಠಕ್, ಗೌತಮ್ ಬುದ್ಧ ನಗರ

ಉತ್ತರಾಖಂಡದವರಾದ ಪಂಖೂರಿ ಪಾಠಕ್ ದೆಹಲಿಯಲ್ಲಿ ಬೆಳೆದವರು. ಆಕೆಯ ಪೋಷಕರು ವೈದ್ಯರು. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಅವರು ಬಳಿಕ ಹಂಸರಾಜ್ ಕಾಲೇಜಿನಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು. ಅಲ್ಲಿಂದ ಸಮಾಜವಾದಿ ಪಕ್ಷಕ್ಕೆ ಸೇರಿ ಅದರ ಯುವ ಸಂಘಟನೆಗಾಗಿ ಕೆಲಸ ಮಾಡಿದರು. 2016 ರಲ್ಲಿ, ಅವರು ಪಕ್ಷದ ಮೊದಲ ಮಹಿಳಾ ವಕ್ತಾರರಾದರು, ಆದರೆ 2019 ರ ಆರಂಭದಲ್ಲಿ, ಪಕ್ಷದ ಇತರ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳ ನಂತರ ಕಾಂಗ್ರೆಸ್‌ಗೆ ಸೇರಿದ್ದಾರೆ. ಅವರ ಪತಿ, ಮಾಜಿ ಎಸ್‌ಪಿ ವಕ್ತಾರ ಅನಿಲ್ ಯಾದವ್ ಕೂಡ ಕಳೆದ ವರ್ಷ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರಿದ್ದರು. ಪಂಖೂರಿ ಪ್ರಸ್ತುತ ಕಾಂಗ್ರೆಸ್‌ನ ಯುಪಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾಗಿದ್ದಾರೆ.

ನಿದಾ ಅಹ್ಮದ್, ಸಂಭಾಲ್

ಕಾಂಗ್ರೆಸ್‌ ಪಕ್ಷದ ಸಂಭಾಲ್ ಕುಟುಂಬದಲ್ಲಿ ಜನಿಸಿದ 36 ವರ್ಷದ ನಿದಾ ಅಹ್ಮದ್ ಸುಮಾರು 12 ವರ್ಷಗಳ ಹಿಂದೆ ದೆಹಲಿಯಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದರು. ಟಿವಿ ನಿರೂಪಕಿ, ನಿದಾ ಅವರು ಆಜ್ ತಕ್ ಗ್ರೂಪ್, ಝೀ ಮೀಡಿಯಾ, ನ್ಯೂಸ್ ಇಂಡಿಯಾ 24×7 ಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಈ ವಾರದ ಆರಂಭದಲ್ಲಿ ಅವರು ಕಾಂಗ್ರೆಸ್ ಸೇರಿದ್ದರು.

ಅರ್ಚನಾ ಗೌತಮ್, ಹಸ್ತಿನಾಪುರ

ಮೀರತ್‌ನ ಹಸ್ತಿನಾಪುರ ಕ್ಷೇತ್ರದಿಂದ (SC-ಮೀಸಲು) ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ 26 ವರ್ಷ ವಯಸ್ಸಿನ ನಟಿ ಮತ್ತು ರೂಪದರ್ಶಿ ಅರ್ಚನಾ ಗೌತಮ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಹಿಂದಿ ಮತ್ತು ತಮಿಳು ಚಿತ್ರಗಳಲ್ಲಿ ಪರಿಚಿತ ಮುಖ. ಮೀರತ್‌ನ ಐಐಎಂಟಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಪಡೆದಿದ್ದಾರೆ. ಕಳೆದ ವರ್ಷ ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಕಾಂಗ್ರೆಸ್ ಸೇರಿದ್ದರು. ಗೌತಮ್ 2014 ರಲ್ಲಿ ಐಐಎಂಟಿಯಲ್ಲಿ ಓದುತ್ತಿದ್ದಾಗ ಮಿಸ್ ಯುಪಿ ಪ್ರಶಸ್ತಿಯನ್ನು ಗೆದ್ದಿದ್ದರು. ಅವರು 2018 ರಲ್ಲಿ ಮಿಸ್ ಬಿಕಿನಿ ಇಂಡಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...