Homeಮುಖಪುಟಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ (ಜ.13) ಪ್ರಕಟಿಸಿದೆ. ಈ ಪಟ್ಟಿ ಜನರ ಗಮನ ಸೆಳೆಯುತ್ತಿದೆ. ಶೇಕಡಾ 40 ರಷ್ಟು ಮಹಿಳೆಯರು ಮತ್ತು ಶೇಕಡಾ 40 ಯುವಜನತೆ ಪಟ್ಟಿಯಲ್ಲಿ ತುಂಬಿದ್ದಾರೆ. ಆಶಾ ಕಾರ್ಯಕರ್ತೆ, ಸಿಎಎ ಹೋರಾಟಗಾರ್ತಿಯರು, ಅತ್ಯಾಚಾರ ಸಂತ್ರಸ್ತೆಯ ತಾಯಿ, ಬುಡಕಟ್ಟು ಹೋರಾಟಗಾರರು ಈ ಬಾರಿಯ ಯುಪಿ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ.

ಚುನಾವಣೆ ಪಟ್ಟಿ ಬಿಡುಗಡೆಗೆ ಮೊದಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದಂತೆ, ಪಕ್ಷವು 40 % ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ 50 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ ಹೆಚ್ಚಿನವರು ಮೊದಲ ಬಾರಿಗೆ ಅಭ್ಯರ್ಥಿಗಳಾಗಿ ಚುನಾವಣೆ ಎದುರಿಸುತ್ತಿದ್ದಾರೆ. ಅವರಲ್ಲಿ ಕೆಲವರ ವಿವರ ಇಲ್ಲಿದೆ.

ಆಶಾ ಸಿಂಗ್, ಉನ್ನಾವೋ ಕ್ಷೇತ್ರ

ಆಶಾ ಸಿಂಗ್, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ. ಉನ್ನಾವೋ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅತ್ಯಾಚಾರ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ ಸೆಂಗಾರ್‌ಗೆ ಶಿಕ್ಷೆ ವಿಧಿಸಲಾಗಿದೆ. 2017 ರ ಈ ದುರ್ಘಟನೆಗೂ ಮುನ್ನ ಆಶಾ ಸಿಂಗ್ ಮನೆಯಿಂದ ಹೊರ ಬಂದವರಲಲ. ಆದರೆ, ಈಗ ತನ್ನ ಮಗಳಿಗೆ ನ್ಯಾಯಕ್ಕಾಗಿ ನಡೆದ ಹೋರಾಟ ತನ್ನ ಜೀವನವನ್ನು ಬದಲಾಯಿಸಿದೆ ಎಂದು ಹೇಳುತ್ತಾರೆ. ನ್ಯಾಯಕ್ಕಾಗಿ ನಡೆಯುತ್ತಿರುವ ತನ್ನ ಅಭಿಯಾನವನ್ನು ಹೆಚ್ಚಿಸಲು ಉನ್ನಾವೊ ಕ್ಷೇತ್ರದಿಂದ ಚುನಾವಣೆ ಎದುರಿಸಲು ಸಿದ್ಧ ಎಂದು ಆಶಾ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ನಟ ಸೋನು ಸೂದ್‌ ಸಹೋದರಿ ಮಾಳವಿಕಾ ಕಾಂಗ್ರೆಸ್ ಸೇರ್ಪಡೆ

ಪೂನಂ ಪಾಂಡೆ, ಶಹಜಹಾನ್‌ಪುರ ಕ್ಷೇತ್ರ

ಪೂನಂ ಪಾಂಡೆ ಒಬ್ಬ ಆಶಾ ಕಾರ್ಯಕರ್ತೆ. ಕಳೆದ ವರ್ಷ ತಮ್ಮ ಗೌರವಧನವನ್ನು ಹೆಚ್ಚಿಸುವಂತೆ ಒತ್ತಾಯಿಸಿ, ಪೂನಂ ಮತ್ತು ಇತರ ಆಶಾ ಕಾರ್ಯಕರ್ತೆಯರು ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದಾಗ ಪೊಲೀಸರು ಅವರ ಮೇಲೆ ಹಲ್ಲೇ ಮಾಡಿದ್ದರು. ಆಗ ಘಟನೆಯ ವಿಡಿಯೋ ವೈರಲ್ ಆಗಿತ್ತು. ನಂತರ, ಮುಖದ ಮೇಲೆ ಗಾಯದ ಗುರುತುಗಳು ಮತ್ತು ಬಲಗೈಗೆ ಪ್ಲ್ಯಾಸ್ಟೆಡ್ ಮಾಡಿದ ಪೂನಂ, ಇತರ ಆಶಾ ಕಾರ್ಯಕರ್ತೆಯರೊಂದಿಗೆ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಈಗ ಅವರನ್ನು ಶಹಜಾನ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಸದಾಫ್ ಜಾಫರ್, ಲಕ್ನೋ ಕೇಂದ್ರ

ನಟಿ, ಹೋರಾಟಗಾರ್ತಿ ಆಗಿರುವ ಸದಾಫ್ ಜಾಫರ್ ಅವರನ್ನು ಡಿಸೆಂಬರ್ 19, 2019 ರಂದು ಲಕ್ನೋದಲ್ಲಿ CAA-NRC ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಫೇಸ್‌ಬುಕ್ ಲೈವ್ ಮಾಡುತ್ತಿದ್ದಾಗ ಬಂಧಿಸಲಾಗಿತ್ತು. ಕೊಲೆಯ ಯತ್ನ, ಗಲಭೆ, ಕ್ರಿಮಿನಲ್ ಪಿತೂರಿ, ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಇತ್ಯಾದಿ ಆರೋಪಗಳ ಮೇಲೆ ಆಕೆಯನ್ನು ದಾಖಲಿಸಲಾಗಿತ್ತು. ಈಗ ಲಕ್ನೋ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ರಿತು ಸಿಂಗ್, ಮುಹಮ್ಮದಿ ಸ್ಥಾನ, ಲಖಿಂಪುರ ಖೇರಿ

ರಿತು ಸಿಂಗ್ ಮಾಜಿ ಸಮಾಜವಾದಿ ಪಕ್ಷದ ಕಾರ್ಯಕರ್ತೆ. ಅವರು ಪಾಸ್ಗಾವಾನ್ ಬ್ಲಾಕ್‌ನ ಬ್ಲಾಕ್ ಮುಖ್ಯಸ್ಥರ ಹುದ್ದೆಗೆ ಎಸ್‌ಪಿ ಬೆಂಬಲಿತ ಅಭ್ಯರ್ಥಿಯಾಗಿದ್ದರು. ಕಳೆದ ವರ್ಷ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಸುವ ತನ್ನ ಪ್ರಯತ್ನವನ್ನು ವಿಫಲಗೊಳಿಸಲು ಕೆಲವು ಬಿಜೆಒಇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ, ಬಟ್ಟೆ ಹರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಲಕ್ನೋದಲ್ಲಿ ತನ್ನ ಕುಟುಂಬದೊಂದಿಗೆ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನಂತರ ಅವರು ಕಾಂಗ್ರೆಸ್ ಸೇರಿದರು.

’ಒಂದು ವೇಳೆ ನಾಮಪತ್ರ ಸಲ್ಲಿಸಲು ಹೋದರೆ ಗೂಂಡಾಗಳಿಂದ ಥಳಿಸುತ್ತಾರೆ ಎಂಬ ಭಯ ನನಗಿತ್ತು, ಆದರೆ ಈಗ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

ಪಂಖೂರಿ ಪಾಠಕ್, ಗೌತಮ್ ಬುದ್ಧ ನಗರ

ಉತ್ತರಾಖಂಡದವರಾದ ಪಂಖೂರಿ ಪಾಠಕ್ ದೆಹಲಿಯಲ್ಲಿ ಬೆಳೆದವರು. ಆಕೆಯ ಪೋಷಕರು ವೈದ್ಯರು. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಅವರು ಬಳಿಕ ಹಂಸರಾಜ್ ಕಾಲೇಜಿನಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು. ಅಲ್ಲಿಂದ ಸಮಾಜವಾದಿ ಪಕ್ಷಕ್ಕೆ ಸೇರಿ ಅದರ ಯುವ ಸಂಘಟನೆಗಾಗಿ ಕೆಲಸ ಮಾಡಿದರು. 2016 ರಲ್ಲಿ, ಅವರು ಪಕ್ಷದ ಮೊದಲ ಮಹಿಳಾ ವಕ್ತಾರರಾದರು, ಆದರೆ 2019 ರ ಆರಂಭದಲ್ಲಿ, ಪಕ್ಷದ ಇತರ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳ ನಂತರ ಕಾಂಗ್ರೆಸ್‌ಗೆ ಸೇರಿದ್ದಾರೆ. ಅವರ ಪತಿ, ಮಾಜಿ ಎಸ್‌ಪಿ ವಕ್ತಾರ ಅನಿಲ್ ಯಾದವ್ ಕೂಡ ಕಳೆದ ವರ್ಷ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರಿದ್ದರು. ಪಂಖೂರಿ ಪ್ರಸ್ತುತ ಕಾಂಗ್ರೆಸ್‌ನ ಯುಪಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾಗಿದ್ದಾರೆ.

ನಿದಾ ಅಹ್ಮದ್, ಸಂಭಾಲ್

ಕಾಂಗ್ರೆಸ್‌ ಪಕ್ಷದ ಸಂಭಾಲ್ ಕುಟುಂಬದಲ್ಲಿ ಜನಿಸಿದ 36 ವರ್ಷದ ನಿದಾ ಅಹ್ಮದ್ ಸುಮಾರು 12 ವರ್ಷಗಳ ಹಿಂದೆ ದೆಹಲಿಯಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದರು. ಟಿವಿ ನಿರೂಪಕಿ, ನಿದಾ ಅವರು ಆಜ್ ತಕ್ ಗ್ರೂಪ್, ಝೀ ಮೀಡಿಯಾ, ನ್ಯೂಸ್ ಇಂಡಿಯಾ 24×7 ಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಈ ವಾರದ ಆರಂಭದಲ್ಲಿ ಅವರು ಕಾಂಗ್ರೆಸ್ ಸೇರಿದ್ದರು.

ಅರ್ಚನಾ ಗೌತಮ್, ಹಸ್ತಿನಾಪುರ

ಮೀರತ್‌ನ ಹಸ್ತಿನಾಪುರ ಕ್ಷೇತ್ರದಿಂದ (SC-ಮೀಸಲು) ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ 26 ವರ್ಷ ವಯಸ್ಸಿನ ನಟಿ ಮತ್ತು ರೂಪದರ್ಶಿ ಅರ್ಚನಾ ಗೌತಮ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಹಿಂದಿ ಮತ್ತು ತಮಿಳು ಚಿತ್ರಗಳಲ್ಲಿ ಪರಿಚಿತ ಮುಖ. ಮೀರತ್‌ನ ಐಐಎಂಟಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಪಡೆದಿದ್ದಾರೆ. ಕಳೆದ ವರ್ಷ ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಕಾಂಗ್ರೆಸ್ ಸೇರಿದ್ದರು. ಗೌತಮ್ 2014 ರಲ್ಲಿ ಐಐಎಂಟಿಯಲ್ಲಿ ಓದುತ್ತಿದ್ದಾಗ ಮಿಸ್ ಯುಪಿ ಪ್ರಶಸ್ತಿಯನ್ನು ಗೆದ್ದಿದ್ದರು. ಅವರು 2018 ರಲ್ಲಿ ಮಿಸ್ ಬಿಕಿನಿ ಇಂಡಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...