Homeಮುಖಪುಟಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಬಿಜೆಪಿ ನೇತೃತ್ವದ ಎನ್‌ಡಿಎ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷಗಳ ನಡುವಿನ ಸ್ಪರ್ಧೆಯಾಗಿದೆ. ಮಾಯಾವತಿಯವರ ಬಿಎಸ್‌ಪಿ ಪಕ್ಷ ಈ ಬಾರಿ ಇದ್ದು ಇಲ್ಲದಂತಾಗಿದೆ.

ಬಿಜೆಪಿಯ ಹಲವು ಹಾಲಿ ಶಾಸಕ, ಸಚಿವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷದೆಡೆಗೆ ಮುಖ ಮಾಡಿದ್ದಾರೆ. ಇದು ಸಮಾಜವಾದಿ ಪಕ್ಷವು ಯುಪಿಯಲ್ಲಿ ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯನ್ನು ಹುಟ್ಟುಹಾಕಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಒಂದು ಕಾಲದಲ್ಲಿ ಪ್ರಬಲ ಪಕ್ಷವಾಗಿದ್ದ ಕಾಂಗ್ರೆಸ್‌ ಈಗ ಉತ್ತರ ಪ್ರದೇಶದಲ್ಲಿ ತನ್ನ ಪ್ರಬಲ್ಯವನ್ನು ಕಳೆದುಕೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ತನ್ನ ನೆಲೆಯನ್ನು ಮರುಸೃಷ್ಟಿಸಿಕೊಳ್ಳಲು ಕಾಂಗ್ರೆಸ್‌ ಭಾರೀ ಪ್ರಯತ್ನ ಮಾಡುತ್ತಿದೆ. ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಯುಪಿ ಚುನಾವಣೆಯನ್ನು ಎದುರಿಸುತ್ತಿರುವ ಕಾಂಗ್ರೆಸ್‌, ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ.

ಪ್ರಬಲ ಮಹಿಳಾ ರಾಜಕಾರಣಿಗಳು ದೇಶಕ್ಕೆ ಹೊಸದೇನಲ್ಲ. ಪ್ರಿಯಾಂಕಾ ಗಾಂಧಿ ಅವರ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ದಶಕಗಳ ಕಾಲ ದೇಶದ ರಾಜಕೀಯದ ಮೇಲೆ ಪ್ರಭಾವ ಬೀರಿದ್ದಾರೆ.

ಹೀಗಾಗಿ, ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿದ್ದ ಸಿಎಎ ಕಾನೂನಿನ ವಿರುದ್ದ ಪ್ರತಿಭಟಿಸಿ ಜೈಲು ಸೇರಿದ್ದ ನಟಿ ಸದಾಫ್ ಜಾಫರ್, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಹಾಗೂ ಸೌಂದರ್ಯ ಸ್ಪರ್ಧೆಯ ವಿಜೇತೆ ಸೇರಿದಂತೆ ಯುಪಿಯ ಒಟ್ಟು ಸೀಟುಗಳ ಪೈಕಿ ಶೇ.40 ರಷ್ಟು ಸ್ಥಾನಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಕಣಕ್ಕಿಳಿಸುತ್ತಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ನೆಚ್ಚಿಕೊಂಡಿದ್ದರೂ, ಹೆಚ್ಚಿನ ಸಂಖ್ಯೆಯ ಮಹಿಳಾ ಶಾಸಕರನ್ನು ಯಾವುದೇ ರಾಜ್ಯವೂ ಇದೂವರೆಗೂ ಹೊಂದಲು ಸಾಧ್ಯವಾಗಿಲ್ಲ. ಇಂಟರ್ ಪಾರ್ಲಿಮೆಂಟರಿ ಯೂನಿಯನ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಲೋಕಸಭೆಯಲ್ಲಿ ಮಹಿಳೆಯರ ಶೇಕಡಾವಾರು ಪ್ರಮಾಣದಲ್ಲಿ ಭಾರತವು ಕಳೆದ ವರ್ಷ 193 ರಾಷ್ಟ್ರಗಳ ಪೈಕಿ 147 ನೇ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಅದರ ಪ್ರಮುಖ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಗಳು ಕಾಂಗ್ರೆಸ್‌ ಅನ್ನು ಗಂಭೀರ ಎದುರಾಳಿಯಾಗಿ ಪರಿಗಣಿಸುತ್ತವೆಯೇ ಎಂದು ನೋಡಬೇಕಾಗಿದೆ. ಇಲ್ಲಿಯವರೆಗೆ ಬಿಜೆಪಿ ತನ್ನ 107 ಅಭ್ಯರ್ಥಿಗಳ ಪೈಕಿ 10 ಮಹಿಳೆಯರನ್ನು ಕಣಕ್ಕಿಳಿಸಿದ್ದರೆ, ಸಮಾಜವಾದಿ ಪಕ್ಷವು ಪ್ರಾದೇಶಿಕ ಪಕ್ಷದೊಂದಿಗಿನ ಮೈತ್ರಿಯಿಂದ ಒಬ್ಬ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

“ಕಾಂಗ್ರೆಸ್ ಪಕ್ಷವು ಸಂಘಟನಾ ರಚನೆಯನ್ನು ಹೊಂದಿಲ್ಲ ಮತ್ತು ತಳಮಟ್ಟದಲ್ಲಿ ಕಾರ್ಯಕರ್ತರನ್ನು ಹೊಂದಿಲ್ಲ ಎಂಬ ಅಂಶವನ್ನು ತೆಗೆದುಹಾಕಲು ಸಾಧ್ಯವಿಲ್ಲ. ಪಕ್ಷವು ಮಹಿಳೆಯರಿಗೆ ಹೆಚ್ಚಿನ ಆಧ್ಯತೆ ನೀಡುತ್ತಿರುವುದು ಪಕ್ಷವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ ಎಂಬುದು ಪ್ರಶ್ನಾರ್ಹವಾಗಿದೆ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ರಾಜಕೀಯ ಅಧ್ಯಯನ ಕೇಂದ್ರದ ಪ್ರಾಧ್ಯಾಪಕಿ ಸುಧಾ ಪೈ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ‘ಲಡ್ಕಿ ಹು, ಲಾಡ್ ಸಕ್ತಿ ಹೂ’ (ನಾನು ಹುಡುಗಿ, ನಾನು ಹೋರಾಡಬಲ್ಲೆ)’ ಪ್ರಚಾರದ ಮುಖವಾಗಿರುವ ಪ್ರಿಯಾಂಕಾ ಮೌರ್ಯ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಲು ನಿರಾಕರಿಸಲಾಗಿದೆ ಎಂದು ಹೇಳಲಾಗಿದ್ದು, ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಅಲ್ಲದೆ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರಿದ್ದಾರೆ. ಹಲವು ಬಿಜೆಪಿ ನಾಯಕರು, ಶಾಸಕ, ಸಚಿವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಡಿ ನಡ್ಡಾ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಪ್ನಾ ದಳ (ಎಸ್) ಮತ್ತು ನಿಶಾದ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದೆ ಎಂದು ಘೋಷಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...