Homeಮುಖಪುಟಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಬಿಜೆಪಿ ನೇತೃತ್ವದ ಎನ್‌ಡಿಎ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷಗಳ ನಡುವಿನ ಸ್ಪರ್ಧೆಯಾಗಿದೆ. ಮಾಯಾವತಿಯವರ ಬಿಎಸ್‌ಪಿ ಪಕ್ಷ ಈ ಬಾರಿ ಇದ್ದು ಇಲ್ಲದಂತಾಗಿದೆ.

ಬಿಜೆಪಿಯ ಹಲವು ಹಾಲಿ ಶಾಸಕ, ಸಚಿವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷದೆಡೆಗೆ ಮುಖ ಮಾಡಿದ್ದಾರೆ. ಇದು ಸಮಾಜವಾದಿ ಪಕ್ಷವು ಯುಪಿಯಲ್ಲಿ ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯನ್ನು ಹುಟ್ಟುಹಾಕಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಒಂದು ಕಾಲದಲ್ಲಿ ಪ್ರಬಲ ಪಕ್ಷವಾಗಿದ್ದ ಕಾಂಗ್ರೆಸ್‌ ಈಗ ಉತ್ತರ ಪ್ರದೇಶದಲ್ಲಿ ತನ್ನ ಪ್ರಬಲ್ಯವನ್ನು ಕಳೆದುಕೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ತನ್ನ ನೆಲೆಯನ್ನು ಮರುಸೃಷ್ಟಿಸಿಕೊಳ್ಳಲು ಕಾಂಗ್ರೆಸ್‌ ಭಾರೀ ಪ್ರಯತ್ನ ಮಾಡುತ್ತಿದೆ. ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಯುಪಿ ಚುನಾವಣೆಯನ್ನು ಎದುರಿಸುತ್ತಿರುವ ಕಾಂಗ್ರೆಸ್‌, ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ.

ಪ್ರಬಲ ಮಹಿಳಾ ರಾಜಕಾರಣಿಗಳು ದೇಶಕ್ಕೆ ಹೊಸದೇನಲ್ಲ. ಪ್ರಿಯಾಂಕಾ ಗಾಂಧಿ ಅವರ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ದಶಕಗಳ ಕಾಲ ದೇಶದ ರಾಜಕೀಯದ ಮೇಲೆ ಪ್ರಭಾವ ಬೀರಿದ್ದಾರೆ.

ಹೀಗಾಗಿ, ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿದ್ದ ಸಿಎಎ ಕಾನೂನಿನ ವಿರುದ್ದ ಪ್ರತಿಭಟಿಸಿ ಜೈಲು ಸೇರಿದ್ದ ನಟಿ ಸದಾಫ್ ಜಾಫರ್, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಹಾಗೂ ಸೌಂದರ್ಯ ಸ್ಪರ್ಧೆಯ ವಿಜೇತೆ ಸೇರಿದಂತೆ ಯುಪಿಯ ಒಟ್ಟು ಸೀಟುಗಳ ಪೈಕಿ ಶೇ.40 ರಷ್ಟು ಸ್ಥಾನಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಕಣಕ್ಕಿಳಿಸುತ್ತಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ನೆಚ್ಚಿಕೊಂಡಿದ್ದರೂ, ಹೆಚ್ಚಿನ ಸಂಖ್ಯೆಯ ಮಹಿಳಾ ಶಾಸಕರನ್ನು ಯಾವುದೇ ರಾಜ್ಯವೂ ಇದೂವರೆಗೂ ಹೊಂದಲು ಸಾಧ್ಯವಾಗಿಲ್ಲ. ಇಂಟರ್ ಪಾರ್ಲಿಮೆಂಟರಿ ಯೂನಿಯನ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಲೋಕಸಭೆಯಲ್ಲಿ ಮಹಿಳೆಯರ ಶೇಕಡಾವಾರು ಪ್ರಮಾಣದಲ್ಲಿ ಭಾರತವು ಕಳೆದ ವರ್ಷ 193 ರಾಷ್ಟ್ರಗಳ ಪೈಕಿ 147 ನೇ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಅದರ ಪ್ರಮುಖ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಗಳು ಕಾಂಗ್ರೆಸ್‌ ಅನ್ನು ಗಂಭೀರ ಎದುರಾಳಿಯಾಗಿ ಪರಿಗಣಿಸುತ್ತವೆಯೇ ಎಂದು ನೋಡಬೇಕಾಗಿದೆ. ಇಲ್ಲಿಯವರೆಗೆ ಬಿಜೆಪಿ ತನ್ನ 107 ಅಭ್ಯರ್ಥಿಗಳ ಪೈಕಿ 10 ಮಹಿಳೆಯರನ್ನು ಕಣಕ್ಕಿಳಿಸಿದ್ದರೆ, ಸಮಾಜವಾದಿ ಪಕ್ಷವು ಪ್ರಾದೇಶಿಕ ಪಕ್ಷದೊಂದಿಗಿನ ಮೈತ್ರಿಯಿಂದ ಒಬ್ಬ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

“ಕಾಂಗ್ರೆಸ್ ಪಕ್ಷವು ಸಂಘಟನಾ ರಚನೆಯನ್ನು ಹೊಂದಿಲ್ಲ ಮತ್ತು ತಳಮಟ್ಟದಲ್ಲಿ ಕಾರ್ಯಕರ್ತರನ್ನು ಹೊಂದಿಲ್ಲ ಎಂಬ ಅಂಶವನ್ನು ತೆಗೆದುಹಾಕಲು ಸಾಧ್ಯವಿಲ್ಲ. ಪಕ್ಷವು ಮಹಿಳೆಯರಿಗೆ ಹೆಚ್ಚಿನ ಆಧ್ಯತೆ ನೀಡುತ್ತಿರುವುದು ಪಕ್ಷವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ ಎಂಬುದು ಪ್ರಶ್ನಾರ್ಹವಾಗಿದೆ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ರಾಜಕೀಯ ಅಧ್ಯಯನ ಕೇಂದ್ರದ ಪ್ರಾಧ್ಯಾಪಕಿ ಸುಧಾ ಪೈ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ‘ಲಡ್ಕಿ ಹು, ಲಾಡ್ ಸಕ್ತಿ ಹೂ’ (ನಾನು ಹುಡುಗಿ, ನಾನು ಹೋರಾಡಬಲ್ಲೆ)’ ಪ್ರಚಾರದ ಮುಖವಾಗಿರುವ ಪ್ರಿಯಾಂಕಾ ಮೌರ್ಯ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಲು ನಿರಾಕರಿಸಲಾಗಿದೆ ಎಂದು ಹೇಳಲಾಗಿದ್ದು, ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಅಲ್ಲದೆ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರಿದ್ದಾರೆ. ಹಲವು ಬಿಜೆಪಿ ನಾಯಕರು, ಶಾಸಕ, ಸಚಿವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಡಿ ನಡ್ಡಾ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಪ್ನಾ ದಳ (ಎಸ್) ಮತ್ತು ನಿಶಾದ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದೆ ಎಂದು ಘೋಷಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...