Homeಮುಖಪುಟಯುಪಿ ಚುನಾವಣೆ: ಸಿಎಂ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ - ಡಾ. ಕಫೀಲ್...

ಯುಪಿ ಚುನಾವಣೆ: ಸಿಎಂ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ – ಡಾ. ಕಫೀಲ್ ಖಾನ್

- Advertisement -
- Advertisement -

’ಯಾವುದಾದರೂ ಪಕ್ಷ ಟಿಕೆಟ್ ನೀಡಿದರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧ’ ಎಂದು ಉತ್ತರ ಪ್ರದೇಶದ ವೈದ್ಯ ಡಾ. ಕಫೀಲ್ ಖಾನ್ ಮಂಗಳವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಗೋರಖ್‌ಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ತಜ್ಞ ಕಫೀಲ್ ಖಾನ್, “ನಾನು ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್‌ಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಯಾವುದೇ ಪಕ್ಷ ನನಗೆ ಟಿಕೆಟ್ ನೀಡಿದರೆ ನಾನು ಸಿದ್ಧ” ಎಂದು ಹೇಳಿದ್ದಾರೆ.

2017 ರಲ್ಲಿ ಗೋರಖ್‌ಪುರದ ಸರ್ಕಾರಿ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ 63 ಮಕ್ಕಳು ಸಾವನ್ನಪ್ಪಿದ ನಂತರ ವೈದ್ಯ ಖಾನ್ ಅವರನ್ನು ಅಮಾನತುಗೊಳಿಸಲಾಗಿತ್ತು. ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ ಅವರನ್ನು ಜೈಲಿಗೆ ಹಾಕಲಾಯಿತು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

ನೀವು ಯಾವುದಾದರೂ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆಯೇ ಅಥವಾ ಯಾರನ್ನಾದರೂ ಸಂಪರ್ಕಿಸಿದ್ದೀರಾ ಎಂಬ ಪ್ರಶ್ನೆಗೆ, “ಹೌದು, ಮಾತುಕತೆ ನಡೆಯುತ್ತಿದೆ, ಎಲ್ಲವೂ ಸರಿಯಾಗಿ ನಡೆದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ. ಗೋರಖ್‌ಪುರದಲ್ಲಿ ಮಾರ್ಚ್ 3 ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ.

ಆಗ ಡಾ.ಕಫೀಲ್ ಖಾನ್ ದೇಶಾದ್ಯಂತದ ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ದೊಡ್ಡ ಮಟ್ಟದ ಸಂಗ್ರಹಕ್ಕೆ ಆಗ್ರಹಿಸಿದ್ದರು. ಅಲ್ಲದೇ ಜನಪರ ಆರೋಗ್ಯ ನೀತಿಗಾಗಿ ಒತ್ತಾಯಿಸಿದ್ದರು. ಆದರೆ ಸಿಎಎ ವಿರುದ್ಧ ಅವರು ಮಾತನಾಡಿದ್ದಕ್ಕಾಗಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಮತ್ತೊಮ್ಮೆ ಜೈಲಿಗೆ ಹಾಕಲಾಗಿತ್ತು. ತದನಂತರವು ಅವರು ನಿರಪರಾಧಿಯಾಗಿ ಬಿಡುಗಡೆಯಾಗಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ಅವರು, “ನಾನು ಫೇಸ್‌ಬುಕ್, ಟ್ವಿಟರ್, ಇತ್ಯಾದಿ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿದ್ದೇನೆ. ಅಲ್ಲಿ ನಾನು ಇರುವ ಸ್ಥಳದ ಬಗ್ಗೆ ಹೇಳುತ್ತೇನೆ. ಪ್ರಸ್ತುತ, ನಾನು ಮುಂಬೈನಲ್ಲಿದ್ದೇನೆ. ಇಲ್ಲಿಂದ ನಾನು ನನ್ನ ‘The Gorakhpur Hospital Tragedy- A Doctor’s Memoir of a Deadly Medical Crisis ಪುಸ್ತಕದ ಪ್ರಚಾರಕ್ಕಾಗಿ ಹೈದರಾಬಾದ್ ಮತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ. ಇದು 5000 ಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗುವುದರೊಂದಿಗೆ ಬೆಸ್ಟ್ ಸೆಲ್ಲರ್ ಆಗಿದೆ” ಎಂದು ಡಾ.ಕಫೀಲ್ ಖಾನ್ ಹೇಳಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....