Homeಮುಖಪುಟ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರೈತರು ನೂರಾರು ಬಿಡಾಡಿ ದನಗಳನ್ನು ಸಿಎಂ ಯೋಗಿ ಆದಿತ್ಯನಾಥ್‌ ಅವರು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದ ತೆರೆದ ಮೈದಾನಕ್ಕೆ ಬಿಟ್ಟಿದ್ದರು. ಈ ಬೆನ್ನಲೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ “ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿರ್ಗತಿಕ ಜಾನುವಾರುಗಳ ಸಂರಕ್ಷಣೆಯ ವಿಷಯದಲ್ಲಿ “ಅದ್ಭುತ ಕೆಲಸ” ಮಾಡಿದೆ ಎಂದು ಹೇಳಿದೆ.

“ರಾಜ್ಯ ಸರ್ಕಾರ ಮತ್ತು ರಾಜ್ಯದ ಜನರು ದನಗಳ ಸಂರಕ್ಷಣೆ ವಿಚಾರದಲ್ಲಿ ಸಂಪೂರ್ಣವಾಗಿ ಸಂವೇದನಾಶೀಲರಾಗಿದ್ದಾರೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಗಮನಾರ್ಹ ಕೆಲಸವನ್ನು ಮಾಡಿರುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಸಮಸ್ಯೆಯನ್ನು ಪರಿಹರಿಸಲಾಗಿದೆ. ಕೆಲವೇ ಕೆಲವು ಗೋವುಗಳು ರಸ್ತೆ ಮತ್ತು ಕೃಷಿ ಕ್ಷೇತ್ರದಲ್ಲಿ ಓಡಾಡುತ್ತಿವೆ. ಉಳಿದಂತೆ ನಿರ್ಗತಿಕ ಗೋವುಗಳು ಇಲ್ಲಿ ಅಲೆದಾಡುತ್ತಿಲ್ಲ ಎಂದು ತಿಳಿಸುತ್ತಿದ್ದೇವೆ” ಎಂದು ಯುಪಿ ಸರ್ಕಾರವು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಐದನೇ ಹಂತದ ಮತದಾನದ ಮುನ್ನಾದಿನದಂದು (ಫೆ.16) ಈ ಹೇಳಿಕೆ ಬಂದಿದೆ. ಬಿಡಾಡಿ ದನಗಳು ಉತ್ತರ ಪ್ರದೇಶದಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿದ್ದು, ಇದು ಯುಪಿಯಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಈ ಬಿಡಾಡಿ ದನಗಳಿಂದ ತಮ್ಮ ಬೆಳೆಯನ್ನು ರಕ್ಷಿಸಲು ರೈತರು ತಮ್ಮ ಹೊಲಗಳಿಗೆ ಮುಳ್ಳುತಂತಿಯಿಂದ ಬೇಲಿ ಹಾಕುತ್ತಿದ್ದಾರೆ. ತಮ್ಮ ಬೆಳೆಗಳನ್ನು ರಕ್ಷಿಸಲು ನಿದ್ರೆಯಿಲ್ಲದ ಇಡೀ ರಾತ್ರಿಯನ್ನು ಕಳೆಯುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಈ ಸಮಸ್ಯೆ ಯುಪಿಯಲ್ಲಿ ಚುನಾವನೆ ಮೇಲೂ ಪ್ರಭಾವ ಬಿರಲಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ತ್ಮ ಚುನಾವಣಾ ಭಾಷಣದಲ್ಲಿ ಬಿಡಾಡಿ ದನಗಳ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದರು. ಕಳೆದ ವಾರ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡರೆ ಬಿಡಾಡಿ ದನಗಳ ಸಮಸ್ಯೆ ಬಗೆಹರಿಯಲಿದೆ ಎಂದು ಭರವಸೆ ನೀಡಿದ್ದರು.

ಬಿಡಾಡಿ ಪ್ರಾಣಿಗಳಿಂದ ನೀವು ಎದುರಿಸುವ ಸಮಸ್ಯೆಗಳ ನಿವಾರಣೆಗೆ ಮಾರ್ಚ್ 10ರ ನಂತರ ಹೊಸ ವ್ಯವಸ್ಥೆ ಮಾಡಲಾಗುವುದು. ಹಾಲು ನೀಡದ ಪ್ರಾಣಿಗಳ ಸಗಣಿಯಿಂದ ಆದಾಯ ಗಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಚುನಾವಣಾ ರ್‍ಯಾಲಿಯಲ್ಲಿ ಭರವಸೆ ನೀಡಿದ್ದರು.

ಪ್ರಸ್ತುತ, ಸ್ವ-ಸಹಾಯ ಗುಂಪುಗಳು ನಡೆಸುತ್ತಿರುವ 572 ಗೋಶಾಲಾಗಳು ಯುಪಿ ಗೋಶಾಲಾ ಕಾಯ್ದೆಯಡಿ ರಾಜ್ಯದಲ್ಲಿ ನೋಂದಾಯಿಸಲ್ಪಟ್ಟಿವೆ. ಅವುಗಳಲ್ಲಿ 394 ಸಕ್ರಿಯವಾಗಿವೆ ಎಂದು ಯುಪಿ ಸರ್ಕಾರದ ಹೇಳಿಕೆ ತಿಳಿಸಿದೆ.

“ದೌರ್ಬಲ, ವೃದ್ಧ, ನಿರ್ಗತಿಕ ಮತ್ತು ರೋಗಪೀಡಿತ ಪ್ರಾಣಿಗಳಿಗೆ ಆಶ್ರಯ ನೀಡುವ ಜೊತೆಗೆ ಜಾನುವಾರುಗಳ ಪೋಷಣೆ ಮತ್ತು ಸಂತಾನೋತ್ಪತ್ತಿ ಉದ್ದೇಶದಿಂದ ಈ ಗೋಶಾಲೆಗಳನ್ನು ಸ್ಥಾಪಿಸಲಾಗಿದೆ. ಈ ಗೋಶಾಲೆಗಳಲ್ಲಿ ನಿರ್ಗತಿಕ ಪ್ರಾಣಿಗಳು ಮತ್ತು ಸ್ಥಳೀಯ ಆಡಳಿತ ಮತ್ತು ಪೊಲೀಸರಿಂದ ಪಡೆದ ಜಾನುವಾರುಗಳನ್ನು ಇರಿಸಿ ನೋಡಿಕೊಳ್ಳಲಾಗುತ್ತದೆ” ಎಂದು ರಾಜ್ಯ ಸರ್ಕಾರ ಹೇಳಿದೆ.

ಹಿಂದಿನ ಸರ್ಕಾರಗಳು ಈ ವಿಷಯದಲ್ಲಿ ಸಾಕಷ್ಟು ಕ್ರಮಕೈಗೊಂಡಿಲ್ಲ. ಇಂತಹ ನಿರ್ಗತಿಕ ಜಾನುವಾರುಗಳ ಸಂರಕ್ಷಣೆಗಾಗಿ ಹಿಂದಿನ ಸರ್ಕಾರಗಳು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ಆರೋಪಿಸಿದೆ.

ಇಂದು ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...