Homeಮುಖಪುಟ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರೈತರು ನೂರಾರು ಬಿಡಾಡಿ ದನಗಳನ್ನು ಸಿಎಂ ಯೋಗಿ ಆದಿತ್ಯನಾಥ್‌ ಅವರು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದ ತೆರೆದ ಮೈದಾನಕ್ಕೆ ಬಿಟ್ಟಿದ್ದರು. ಈ ಬೆನ್ನಲೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ “ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿರ್ಗತಿಕ ಜಾನುವಾರುಗಳ ಸಂರಕ್ಷಣೆಯ ವಿಷಯದಲ್ಲಿ “ಅದ್ಭುತ ಕೆಲಸ” ಮಾಡಿದೆ ಎಂದು ಹೇಳಿದೆ.

“ರಾಜ್ಯ ಸರ್ಕಾರ ಮತ್ತು ರಾಜ್ಯದ ಜನರು ದನಗಳ ಸಂರಕ್ಷಣೆ ವಿಚಾರದಲ್ಲಿ ಸಂಪೂರ್ಣವಾಗಿ ಸಂವೇದನಾಶೀಲರಾಗಿದ್ದಾರೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಗಮನಾರ್ಹ ಕೆಲಸವನ್ನು ಮಾಡಿರುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಸಮಸ್ಯೆಯನ್ನು ಪರಿಹರಿಸಲಾಗಿದೆ. ಕೆಲವೇ ಕೆಲವು ಗೋವುಗಳು ರಸ್ತೆ ಮತ್ತು ಕೃಷಿ ಕ್ಷೇತ್ರದಲ್ಲಿ ಓಡಾಡುತ್ತಿವೆ. ಉಳಿದಂತೆ ನಿರ್ಗತಿಕ ಗೋವುಗಳು ಇಲ್ಲಿ ಅಲೆದಾಡುತ್ತಿಲ್ಲ ಎಂದು ತಿಳಿಸುತ್ತಿದ್ದೇವೆ” ಎಂದು ಯುಪಿ ಸರ್ಕಾರವು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಐದನೇ ಹಂತದ ಮತದಾನದ ಮುನ್ನಾದಿನದಂದು (ಫೆ.16) ಈ ಹೇಳಿಕೆ ಬಂದಿದೆ. ಬಿಡಾಡಿ ದನಗಳು ಉತ್ತರ ಪ್ರದೇಶದಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿದ್ದು, ಇದು ಯುಪಿಯಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಈ ಬಿಡಾಡಿ ದನಗಳಿಂದ ತಮ್ಮ ಬೆಳೆಯನ್ನು ರಕ್ಷಿಸಲು ರೈತರು ತಮ್ಮ ಹೊಲಗಳಿಗೆ ಮುಳ್ಳುತಂತಿಯಿಂದ ಬೇಲಿ ಹಾಕುತ್ತಿದ್ದಾರೆ. ತಮ್ಮ ಬೆಳೆಗಳನ್ನು ರಕ್ಷಿಸಲು ನಿದ್ರೆಯಿಲ್ಲದ ಇಡೀ ರಾತ್ರಿಯನ್ನು ಕಳೆಯುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಈ ಸಮಸ್ಯೆ ಯುಪಿಯಲ್ಲಿ ಚುನಾವನೆ ಮೇಲೂ ಪ್ರಭಾವ ಬಿರಲಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ತ್ಮ ಚುನಾವಣಾ ಭಾಷಣದಲ್ಲಿ ಬಿಡಾಡಿ ದನಗಳ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದರು. ಕಳೆದ ವಾರ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡರೆ ಬಿಡಾಡಿ ದನಗಳ ಸಮಸ್ಯೆ ಬಗೆಹರಿಯಲಿದೆ ಎಂದು ಭರವಸೆ ನೀಡಿದ್ದರು.

ಬಿಡಾಡಿ ಪ್ರಾಣಿಗಳಿಂದ ನೀವು ಎದುರಿಸುವ ಸಮಸ್ಯೆಗಳ ನಿವಾರಣೆಗೆ ಮಾರ್ಚ್ 10ರ ನಂತರ ಹೊಸ ವ್ಯವಸ್ಥೆ ಮಾಡಲಾಗುವುದು. ಹಾಲು ನೀಡದ ಪ್ರಾಣಿಗಳ ಸಗಣಿಯಿಂದ ಆದಾಯ ಗಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಚುನಾವಣಾ ರ್‍ಯಾಲಿಯಲ್ಲಿ ಭರವಸೆ ನೀಡಿದ್ದರು.

ಪ್ರಸ್ತುತ, ಸ್ವ-ಸಹಾಯ ಗುಂಪುಗಳು ನಡೆಸುತ್ತಿರುವ 572 ಗೋಶಾಲಾಗಳು ಯುಪಿ ಗೋಶಾಲಾ ಕಾಯ್ದೆಯಡಿ ರಾಜ್ಯದಲ್ಲಿ ನೋಂದಾಯಿಸಲ್ಪಟ್ಟಿವೆ. ಅವುಗಳಲ್ಲಿ 394 ಸಕ್ರಿಯವಾಗಿವೆ ಎಂದು ಯುಪಿ ಸರ್ಕಾರದ ಹೇಳಿಕೆ ತಿಳಿಸಿದೆ.

“ದೌರ್ಬಲ, ವೃದ್ಧ, ನಿರ್ಗತಿಕ ಮತ್ತು ರೋಗಪೀಡಿತ ಪ್ರಾಣಿಗಳಿಗೆ ಆಶ್ರಯ ನೀಡುವ ಜೊತೆಗೆ ಜಾನುವಾರುಗಳ ಪೋಷಣೆ ಮತ್ತು ಸಂತಾನೋತ್ಪತ್ತಿ ಉದ್ದೇಶದಿಂದ ಈ ಗೋಶಾಲೆಗಳನ್ನು ಸ್ಥಾಪಿಸಲಾಗಿದೆ. ಈ ಗೋಶಾಲೆಗಳಲ್ಲಿ ನಿರ್ಗತಿಕ ಪ್ರಾಣಿಗಳು ಮತ್ತು ಸ್ಥಳೀಯ ಆಡಳಿತ ಮತ್ತು ಪೊಲೀಸರಿಂದ ಪಡೆದ ಜಾನುವಾರುಗಳನ್ನು ಇರಿಸಿ ನೋಡಿಕೊಳ್ಳಲಾಗುತ್ತದೆ” ಎಂದು ರಾಜ್ಯ ಸರ್ಕಾರ ಹೇಳಿದೆ.

ಹಿಂದಿನ ಸರ್ಕಾರಗಳು ಈ ವಿಷಯದಲ್ಲಿ ಸಾಕಷ್ಟು ಕ್ರಮಕೈಗೊಂಡಿಲ್ಲ. ಇಂತಹ ನಿರ್ಗತಿಕ ಜಾನುವಾರುಗಳ ಸಂರಕ್ಷಣೆಗಾಗಿ ಹಿಂದಿನ ಸರ್ಕಾರಗಳು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ಆರೋಪಿಸಿದೆ.

ಇಂದು ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...