Homeಮುಖಪುಟರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ...

ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2024ರ ಸಾರ್ವತ್ರಿಕ ಚುನಾವಣೆಗೂ ಮೊದಲು ನಡೆಯುವ ಸೆಮಿಫೈನಲ್ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಅಂತ್ಯಗೊಂಡ ರೈತ ಆಂದೋಲನದ ಕೇಂದ್ರ ಬಿಂದುವೂ ಆಗಿದ್ದ ಯುಪಿಯಲ್ಲಿ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ರಾಜ್ಯದ ನಿರ್ಣಾಯಕ ಪಶ್ಚಿಮ ಯುಪಿಯ 58 ಕ್ಷೇತ್ರಗಳಲ್ಲಿ ಚತುಷ್ಕೋನ ಸ್ಪರ್ಧೆ ನಡೆಯುತ್ತಿದ್ದು, ಇಂದು ಮತದಾರರು ತಮ್ಮ ಆಯ್ಕೆಯ ಪ್ರತಿನಿಧಿಯನ್ನು ಆರಿಸಲು ಮತದಾನ ಮಾಡಿದ್ದಾರೆ.

ಚುನಾವಣೆಗೆ ಸಂಬಂಧಿತ ಪ್ರಮುಖ 10 ಅಂಶಗಳು ಹೀಗಿವೆ:

  1. ಮತದಾನ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಸರಾಸರಿ 20% ಮತದಾನವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಗಳಾಗಿ ನೋಯ್ಡಾದ ಹಾಲಿ ಶಾಸಕ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ಮತ್ತು ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿರುವ ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಕಣದಲ್ಲಿದ್ದಾರೆ.
  2. EVM ಮತ್ತು VVPAT ಅಸಮರ್ಪವಾಗಿ ಕೆಲಸ ಮಾಡುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ತಕ್ಷಣವೇ ಅವುಗಳನ್ನು ಪರಿಹರಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಅಜಯ್ ಕುಮಾರ್ ಶುಕ್ಲಾ ಹೇಳಿದ್ದಾರೆ. “ಎಲ್ಲಾ ಮತಗಟ್ಟೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲಾಗಿದೆ ಮತ್ತು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ” ಎಂದು ಅವರು ಹೇಳಿದ್ದರು.
  3. 2017 ರಲ್ಲಿ ಬಿಜೆಪಿ ಗರಿಷ್ಟ ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಚುನಾವಣೆಯು ನಿರ್ಣಾಯಕವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸರ್ಕಾರದ ಮೇಲೆ ಯಾವ ರೀತಿಯ ಜನಾಭಿಪ್ರಾಯ ಎಂಬುದನ್ನು ಮತದಾನದಲ್ಲಿ ನಿರೀಕ್ಷಿಸಲಾಗಿದೆ. ಸರ್ಕಾರವು ಕೋವಿಡ್‌ನ ಎರಡನೇ ಅಲೆಯನ್ನು ನಿಭಾಯಿಸಿದ್ದ ಬಗ್ಗೆ ಭಾರೀ ಆಕ್ರೋಶ-ಟೀಕೆಗಳು ವ್ಯಕ್ತವಾಗಿದ್ದವು. ಕೊರೊನಾದಿಂದ ಮೃತಪಟ್ಟವರ ಶವಗಳು ಗಂಗಾ ನದಿಯಲ್ಲಿ ತೇಲಿದ್ದವು ಮತ್ತು ಅದರ ಮರಳಿನ ದಂಡೆಯಲ್ಲಿ ಹೂಳಲ್ಪಟ್ಟಿದ್ದ ಚಿತ್ರಗಳು ದೇಶವನ್ನು ಬೆಚ್ಚಿಬೀಳಿಸಿತ್ತು.
  4. ಬಿಜೆಪಿಗೆ ದೊಡ್ಡ ಸವಾಲಾಗಿ ಸಮಾಜವಾದಿ ಪಕ್ಷವು ಕಣದಲ್ಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಕೆಲವು ಸಣ್ಣ ಪಕ್ಷಗಳು ಚುನಾವಣೆಯನ್ನು ಎದುರಿಸುತ್ತಿವೆ. ಅವರು ಇತರ ಹಿಂದುಳಿದ ವರ್ಗಗಳು, ಮುಸ್ಲಿಂ ಸಮುದಾಯ ಮತ್ತು ಯಾದವ ಸಮುದಾಯದಲ್ಲಿ ತಮ್ಮ ಬೆಂಬಲದ ನೆಲೆಯನ್ನು ಹೆಚ್ಚಿಸಿಕೊಂಡಿದ್ದಾರೆ.
  5. ಯುಪಿ ಗೆಲ್ಲುವ ಜವಾಬ್ದಾರಿಯನ್ನು ಹೊತ್ತಿರುವ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರಿಗೆ ಈ ಚುನಾವಣೆಯು ಪರೀಕ್ಷೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ದಲಿತರಲ್ಲಿ ದೊಡ್ಡ ಬೆಂಬಲದ ನೆಲೆಯನ್ನು ಹೊಂದಿರುವ ಮಾಯಾವತಿಯವರ ಬಹುಜನ ಸಮಾಜ ಪಕ್ಷವು ಮತದಾನದಲ್ಲಿರುವ 58 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಫಲಿತಾಂಶಗಳ ಮೇಲೆ ಪ್ರಭಾವಬೀರಬಲ್ಲದು ಎಂದು ಹೇಳಲಾಗುತ್ತಿದೆ.
  6. 2013ರ ಮುಜಾಫರ್‌ನಗರ ಹಿಂಸಾಚಾರದ ನಂತರ ಮತದಾನದಲ್ಲಿ ಭಾರೀ ಬದಲಾವಣೆಗಳನ್ನು ಕಂಡಿದೆ. ಧಾರ್ಮಿಕ ಧ್ರುವೀಕರಣವು ಪ್ರಚಾರದ ಕೇಂದ್ರವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಪಕ್ಷ ಸಮಾಜವಾದಿ ಪಕ್ಷವನ್ನು ಪಾಕಿಸ್ತಾನದ ಬೆಂಬಲಿಗರು ಎಂದು ಪದೇ ಪದೇ ಆರೋಪಿಸಿದ್ದಾರೆ.
  7. 2017ರ ಚುನಾವಣೆಯಲ್ಲಿ ಈ 58 ಸ್ಥಾನಗಳಲ್ಲಿ 91% ಬಿಜೆಪಿ ಗೆದ್ದಿದ್ದರೂ, ಈ ಬಾರಿ ಕೃಷಿ ಕಾನೂನುಗಳ ಮೇಲಿನ ಪ್ರತಿಭಟನೆಯಿಂದಾಗಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಬಲವಾಗಿದೆ. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬಿಜೆಪಿಗೆ ಮತದಾರರು ಶಿಕ್ಷೆ ನೀಡಬೇಕು ಎಂದು ಕರೆಕೊಟ್ಟಿದ್ದಾರೆ.
  8. ಚುನಾವಣಾ ತಯಾರಿಗಳು ಆರಂಭವಾಗುತ್ತಿದ್ದ ವೇಳೆ ಜಯಂತ್ ಚೌಧರಿ ಅವರು, ತಮ್ಮನ್ನು ಬಿಜೆಪಿಗೆ ಸೆಳೆಯಲು ಅಮಿತ್ ಶಾ ಪದೇ ಪದೇ ಯತ್ನಿಸುತ್ತಿದ್ದಾರೆ ಮತ್ತು ಪ್ರತಿಪಕ್ಷಗಳ ಮೈತ್ರಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪೂರಕವಾಗಿ, ಅಮಿತ್‌ ಶಾ ತಮ್ಮ ಭಾಷಣಗಳಲ್ಲಿ, ಜಾಟ್ ನಾಯಕ (ಜಯಂತ್‌ ಚೌಧರಿ) “ತಪ್ಪಾದ ಮನೆ”ಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪದೇ ಪದೇ ಹೇಳಿದ್ದಾರೆ.
  9. “2014, 2017 ಮತ್ತು 2019 ರಲ್ಲಿ ಯುಪಿ ಜನರು ನಮ್ಮನ್ನು ಒಪ್ಪಿಕೊಂಡಿದ್ದಾರೆ. ಅವರು ನಮ್ಮ ಕೆಲಸವನ್ನು ನೋಡಿದ್ದಾರೆ. ಹೀಗಾಗಿ, 2022ರಲ್ಲಿಯೂ ನಮ್ಮನ್ನು ಸ್ವೀಕರಿಸುತ್ತಾರೆ” ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ.
  10. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಗೋವಾ, ಮಣಿಪುರ, ಪಂಜಾಬ್ ಮತ್ತು ಉತ್ತರಾಖಂಡ್‌ ಹಾಗೂ ಉತ್ತರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳೂ ಕೂಡ ಅದೇ ದಿನ ಪ್ರಕಟವಾಗುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...