Homeಮುಖಪುಟರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ...

ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2024ರ ಸಾರ್ವತ್ರಿಕ ಚುನಾವಣೆಗೂ ಮೊದಲು ನಡೆಯುವ ಸೆಮಿಫೈನಲ್ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಅಂತ್ಯಗೊಂಡ ರೈತ ಆಂದೋಲನದ ಕೇಂದ್ರ ಬಿಂದುವೂ ಆಗಿದ್ದ ಯುಪಿಯಲ್ಲಿ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ರಾಜ್ಯದ ನಿರ್ಣಾಯಕ ಪಶ್ಚಿಮ ಯುಪಿಯ 58 ಕ್ಷೇತ್ರಗಳಲ್ಲಿ ಚತುಷ್ಕೋನ ಸ್ಪರ್ಧೆ ನಡೆಯುತ್ತಿದ್ದು, ಇಂದು ಮತದಾರರು ತಮ್ಮ ಆಯ್ಕೆಯ ಪ್ರತಿನಿಧಿಯನ್ನು ಆರಿಸಲು ಮತದಾನ ಮಾಡಿದ್ದಾರೆ.

ಚುನಾವಣೆಗೆ ಸಂಬಂಧಿತ ಪ್ರಮುಖ 10 ಅಂಶಗಳು ಹೀಗಿವೆ:

  1. ಮತದಾನ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಸರಾಸರಿ 20% ಮತದಾನವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಗಳಾಗಿ ನೋಯ್ಡಾದ ಹಾಲಿ ಶಾಸಕ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ಮತ್ತು ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿರುವ ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಕಣದಲ್ಲಿದ್ದಾರೆ.
  2. EVM ಮತ್ತು VVPAT ಅಸಮರ್ಪವಾಗಿ ಕೆಲಸ ಮಾಡುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ತಕ್ಷಣವೇ ಅವುಗಳನ್ನು ಪರಿಹರಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಅಜಯ್ ಕುಮಾರ್ ಶುಕ್ಲಾ ಹೇಳಿದ್ದಾರೆ. “ಎಲ್ಲಾ ಮತಗಟ್ಟೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲಾಗಿದೆ ಮತ್ತು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ” ಎಂದು ಅವರು ಹೇಳಿದ್ದರು.
  3. 2017 ರಲ್ಲಿ ಬಿಜೆಪಿ ಗರಿಷ್ಟ ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಚುನಾವಣೆಯು ನಿರ್ಣಾಯಕವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸರ್ಕಾರದ ಮೇಲೆ ಯಾವ ರೀತಿಯ ಜನಾಭಿಪ್ರಾಯ ಎಂಬುದನ್ನು ಮತದಾನದಲ್ಲಿ ನಿರೀಕ್ಷಿಸಲಾಗಿದೆ. ಸರ್ಕಾರವು ಕೋವಿಡ್‌ನ ಎರಡನೇ ಅಲೆಯನ್ನು ನಿಭಾಯಿಸಿದ್ದ ಬಗ್ಗೆ ಭಾರೀ ಆಕ್ರೋಶ-ಟೀಕೆಗಳು ವ್ಯಕ್ತವಾಗಿದ್ದವು. ಕೊರೊನಾದಿಂದ ಮೃತಪಟ್ಟವರ ಶವಗಳು ಗಂಗಾ ನದಿಯಲ್ಲಿ ತೇಲಿದ್ದವು ಮತ್ತು ಅದರ ಮರಳಿನ ದಂಡೆಯಲ್ಲಿ ಹೂಳಲ್ಪಟ್ಟಿದ್ದ ಚಿತ್ರಗಳು ದೇಶವನ್ನು ಬೆಚ್ಚಿಬೀಳಿಸಿತ್ತು.
  4. ಬಿಜೆಪಿಗೆ ದೊಡ್ಡ ಸವಾಲಾಗಿ ಸಮಾಜವಾದಿ ಪಕ್ಷವು ಕಣದಲ್ಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಕೆಲವು ಸಣ್ಣ ಪಕ್ಷಗಳು ಚುನಾವಣೆಯನ್ನು ಎದುರಿಸುತ್ತಿವೆ. ಅವರು ಇತರ ಹಿಂದುಳಿದ ವರ್ಗಗಳು, ಮುಸ್ಲಿಂ ಸಮುದಾಯ ಮತ್ತು ಯಾದವ ಸಮುದಾಯದಲ್ಲಿ ತಮ್ಮ ಬೆಂಬಲದ ನೆಲೆಯನ್ನು ಹೆಚ್ಚಿಸಿಕೊಂಡಿದ್ದಾರೆ.
  5. ಯುಪಿ ಗೆಲ್ಲುವ ಜವಾಬ್ದಾರಿಯನ್ನು ಹೊತ್ತಿರುವ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರಿಗೆ ಈ ಚುನಾವಣೆಯು ಪರೀಕ್ಷೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ದಲಿತರಲ್ಲಿ ದೊಡ್ಡ ಬೆಂಬಲದ ನೆಲೆಯನ್ನು ಹೊಂದಿರುವ ಮಾಯಾವತಿಯವರ ಬಹುಜನ ಸಮಾಜ ಪಕ್ಷವು ಮತದಾನದಲ್ಲಿರುವ 58 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಫಲಿತಾಂಶಗಳ ಮೇಲೆ ಪ್ರಭಾವಬೀರಬಲ್ಲದು ಎಂದು ಹೇಳಲಾಗುತ್ತಿದೆ.
  6. 2013ರ ಮುಜಾಫರ್‌ನಗರ ಹಿಂಸಾಚಾರದ ನಂತರ ಮತದಾನದಲ್ಲಿ ಭಾರೀ ಬದಲಾವಣೆಗಳನ್ನು ಕಂಡಿದೆ. ಧಾರ್ಮಿಕ ಧ್ರುವೀಕರಣವು ಪ್ರಚಾರದ ಕೇಂದ್ರವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಪಕ್ಷ ಸಮಾಜವಾದಿ ಪಕ್ಷವನ್ನು ಪಾಕಿಸ್ತಾನದ ಬೆಂಬಲಿಗರು ಎಂದು ಪದೇ ಪದೇ ಆರೋಪಿಸಿದ್ದಾರೆ.
  7. 2017ರ ಚುನಾವಣೆಯಲ್ಲಿ ಈ 58 ಸ್ಥಾನಗಳಲ್ಲಿ 91% ಬಿಜೆಪಿ ಗೆದ್ದಿದ್ದರೂ, ಈ ಬಾರಿ ಕೃಷಿ ಕಾನೂನುಗಳ ಮೇಲಿನ ಪ್ರತಿಭಟನೆಯಿಂದಾಗಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಬಲವಾಗಿದೆ. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬಿಜೆಪಿಗೆ ಮತದಾರರು ಶಿಕ್ಷೆ ನೀಡಬೇಕು ಎಂದು ಕರೆಕೊಟ್ಟಿದ್ದಾರೆ.
  8. ಚುನಾವಣಾ ತಯಾರಿಗಳು ಆರಂಭವಾಗುತ್ತಿದ್ದ ವೇಳೆ ಜಯಂತ್ ಚೌಧರಿ ಅವರು, ತಮ್ಮನ್ನು ಬಿಜೆಪಿಗೆ ಸೆಳೆಯಲು ಅಮಿತ್ ಶಾ ಪದೇ ಪದೇ ಯತ್ನಿಸುತ್ತಿದ್ದಾರೆ ಮತ್ತು ಪ್ರತಿಪಕ್ಷಗಳ ಮೈತ್ರಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪೂರಕವಾಗಿ, ಅಮಿತ್‌ ಶಾ ತಮ್ಮ ಭಾಷಣಗಳಲ್ಲಿ, ಜಾಟ್ ನಾಯಕ (ಜಯಂತ್‌ ಚೌಧರಿ) “ತಪ್ಪಾದ ಮನೆ”ಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪದೇ ಪದೇ ಹೇಳಿದ್ದಾರೆ.
  9. “2014, 2017 ಮತ್ತು 2019 ರಲ್ಲಿ ಯುಪಿ ಜನರು ನಮ್ಮನ್ನು ಒಪ್ಪಿಕೊಂಡಿದ್ದಾರೆ. ಅವರು ನಮ್ಮ ಕೆಲಸವನ್ನು ನೋಡಿದ್ದಾರೆ. ಹೀಗಾಗಿ, 2022ರಲ್ಲಿಯೂ ನಮ್ಮನ್ನು ಸ್ವೀಕರಿಸುತ್ತಾರೆ” ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ.
  10. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಗೋವಾ, ಮಣಿಪುರ, ಪಂಜಾಬ್ ಮತ್ತು ಉತ್ತರಾಖಂಡ್‌ ಹಾಗೂ ಉತ್ತರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳೂ ಕೂಡ ಅದೇ ದಿನ ಪ್ರಕಟವಾಗುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...