Homeಮುಖಪುಟರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ...

ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2024ರ ಸಾರ್ವತ್ರಿಕ ಚುನಾವಣೆಗೂ ಮೊದಲು ನಡೆಯುವ ಸೆಮಿಫೈನಲ್ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಅಂತ್ಯಗೊಂಡ ರೈತ ಆಂದೋಲನದ ಕೇಂದ್ರ ಬಿಂದುವೂ ಆಗಿದ್ದ ಯುಪಿಯಲ್ಲಿ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ರಾಜ್ಯದ ನಿರ್ಣಾಯಕ ಪಶ್ಚಿಮ ಯುಪಿಯ 58 ಕ್ಷೇತ್ರಗಳಲ್ಲಿ ಚತುಷ್ಕೋನ ಸ್ಪರ್ಧೆ ನಡೆಯುತ್ತಿದ್ದು, ಇಂದು ಮತದಾರರು ತಮ್ಮ ಆಯ್ಕೆಯ ಪ್ರತಿನಿಧಿಯನ್ನು ಆರಿಸಲು ಮತದಾನ ಮಾಡಿದ್ದಾರೆ.

ಚುನಾವಣೆಗೆ ಸಂಬಂಧಿತ ಪ್ರಮುಖ 10 ಅಂಶಗಳು ಹೀಗಿವೆ:

  1. ಮತದಾನ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಸರಾಸರಿ 20% ಮತದಾನವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಗಳಾಗಿ ನೋಯ್ಡಾದ ಹಾಲಿ ಶಾಸಕ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ಮತ್ತು ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿರುವ ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಕಣದಲ್ಲಿದ್ದಾರೆ.
  2. EVM ಮತ್ತು VVPAT ಅಸಮರ್ಪವಾಗಿ ಕೆಲಸ ಮಾಡುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ತಕ್ಷಣವೇ ಅವುಗಳನ್ನು ಪರಿಹರಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಅಜಯ್ ಕುಮಾರ್ ಶುಕ್ಲಾ ಹೇಳಿದ್ದಾರೆ. “ಎಲ್ಲಾ ಮತಗಟ್ಟೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲಾಗಿದೆ ಮತ್ತು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ” ಎಂದು ಅವರು ಹೇಳಿದ್ದರು.
  3. 2017 ರಲ್ಲಿ ಬಿಜೆಪಿ ಗರಿಷ್ಟ ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಚುನಾವಣೆಯು ನಿರ್ಣಾಯಕವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸರ್ಕಾರದ ಮೇಲೆ ಯಾವ ರೀತಿಯ ಜನಾಭಿಪ್ರಾಯ ಎಂಬುದನ್ನು ಮತದಾನದಲ್ಲಿ ನಿರೀಕ್ಷಿಸಲಾಗಿದೆ. ಸರ್ಕಾರವು ಕೋವಿಡ್‌ನ ಎರಡನೇ ಅಲೆಯನ್ನು ನಿಭಾಯಿಸಿದ್ದ ಬಗ್ಗೆ ಭಾರೀ ಆಕ್ರೋಶ-ಟೀಕೆಗಳು ವ್ಯಕ್ತವಾಗಿದ್ದವು. ಕೊರೊನಾದಿಂದ ಮೃತಪಟ್ಟವರ ಶವಗಳು ಗಂಗಾ ನದಿಯಲ್ಲಿ ತೇಲಿದ್ದವು ಮತ್ತು ಅದರ ಮರಳಿನ ದಂಡೆಯಲ್ಲಿ ಹೂಳಲ್ಪಟ್ಟಿದ್ದ ಚಿತ್ರಗಳು ದೇಶವನ್ನು ಬೆಚ್ಚಿಬೀಳಿಸಿತ್ತು.
  4. ಬಿಜೆಪಿಗೆ ದೊಡ್ಡ ಸವಾಲಾಗಿ ಸಮಾಜವಾದಿ ಪಕ್ಷವು ಕಣದಲ್ಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಕೆಲವು ಸಣ್ಣ ಪಕ್ಷಗಳು ಚುನಾವಣೆಯನ್ನು ಎದುರಿಸುತ್ತಿವೆ. ಅವರು ಇತರ ಹಿಂದುಳಿದ ವರ್ಗಗಳು, ಮುಸ್ಲಿಂ ಸಮುದಾಯ ಮತ್ತು ಯಾದವ ಸಮುದಾಯದಲ್ಲಿ ತಮ್ಮ ಬೆಂಬಲದ ನೆಲೆಯನ್ನು ಹೆಚ್ಚಿಸಿಕೊಂಡಿದ್ದಾರೆ.
  5. ಯುಪಿ ಗೆಲ್ಲುವ ಜವಾಬ್ದಾರಿಯನ್ನು ಹೊತ್ತಿರುವ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರಿಗೆ ಈ ಚುನಾವಣೆಯು ಪರೀಕ್ಷೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ದಲಿತರಲ್ಲಿ ದೊಡ್ಡ ಬೆಂಬಲದ ನೆಲೆಯನ್ನು ಹೊಂದಿರುವ ಮಾಯಾವತಿಯವರ ಬಹುಜನ ಸಮಾಜ ಪಕ್ಷವು ಮತದಾನದಲ್ಲಿರುವ 58 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಫಲಿತಾಂಶಗಳ ಮೇಲೆ ಪ್ರಭಾವಬೀರಬಲ್ಲದು ಎಂದು ಹೇಳಲಾಗುತ್ತಿದೆ.
  6. 2013ರ ಮುಜಾಫರ್‌ನಗರ ಹಿಂಸಾಚಾರದ ನಂತರ ಮತದಾನದಲ್ಲಿ ಭಾರೀ ಬದಲಾವಣೆಗಳನ್ನು ಕಂಡಿದೆ. ಧಾರ್ಮಿಕ ಧ್ರುವೀಕರಣವು ಪ್ರಚಾರದ ಕೇಂದ್ರವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಪಕ್ಷ ಸಮಾಜವಾದಿ ಪಕ್ಷವನ್ನು ಪಾಕಿಸ್ತಾನದ ಬೆಂಬಲಿಗರು ಎಂದು ಪದೇ ಪದೇ ಆರೋಪಿಸಿದ್ದಾರೆ.
  7. 2017ರ ಚುನಾವಣೆಯಲ್ಲಿ ಈ 58 ಸ್ಥಾನಗಳಲ್ಲಿ 91% ಬಿಜೆಪಿ ಗೆದ್ದಿದ್ದರೂ, ಈ ಬಾರಿ ಕೃಷಿ ಕಾನೂನುಗಳ ಮೇಲಿನ ಪ್ರತಿಭಟನೆಯಿಂದಾಗಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಬಲವಾಗಿದೆ. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬಿಜೆಪಿಗೆ ಮತದಾರರು ಶಿಕ್ಷೆ ನೀಡಬೇಕು ಎಂದು ಕರೆಕೊಟ್ಟಿದ್ದಾರೆ.
  8. ಚುನಾವಣಾ ತಯಾರಿಗಳು ಆರಂಭವಾಗುತ್ತಿದ್ದ ವೇಳೆ ಜಯಂತ್ ಚೌಧರಿ ಅವರು, ತಮ್ಮನ್ನು ಬಿಜೆಪಿಗೆ ಸೆಳೆಯಲು ಅಮಿತ್ ಶಾ ಪದೇ ಪದೇ ಯತ್ನಿಸುತ್ತಿದ್ದಾರೆ ಮತ್ತು ಪ್ರತಿಪಕ್ಷಗಳ ಮೈತ್ರಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪೂರಕವಾಗಿ, ಅಮಿತ್‌ ಶಾ ತಮ್ಮ ಭಾಷಣಗಳಲ್ಲಿ, ಜಾಟ್ ನಾಯಕ (ಜಯಂತ್‌ ಚೌಧರಿ) “ತಪ್ಪಾದ ಮನೆ”ಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪದೇ ಪದೇ ಹೇಳಿದ್ದಾರೆ.
  9. “2014, 2017 ಮತ್ತು 2019 ರಲ್ಲಿ ಯುಪಿ ಜನರು ನಮ್ಮನ್ನು ಒಪ್ಪಿಕೊಂಡಿದ್ದಾರೆ. ಅವರು ನಮ್ಮ ಕೆಲಸವನ್ನು ನೋಡಿದ್ದಾರೆ. ಹೀಗಾಗಿ, 2022ರಲ್ಲಿಯೂ ನಮ್ಮನ್ನು ಸ್ವೀಕರಿಸುತ್ತಾರೆ” ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ.
  10. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಗೋವಾ, ಮಣಿಪುರ, ಪಂಜಾಬ್ ಮತ್ತು ಉತ್ತರಾಖಂಡ್‌ ಹಾಗೂ ಉತ್ತರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳೂ ಕೂಡ ಅದೇ ದಿನ ಪ್ರಕಟವಾಗುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...