Homeಮುಖಪುಟರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ...

ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2024ರ ಸಾರ್ವತ್ರಿಕ ಚುನಾವಣೆಗೂ ಮೊದಲು ನಡೆಯುವ ಸೆಮಿಫೈನಲ್ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಅಂತ್ಯಗೊಂಡ ರೈತ ಆಂದೋಲನದ ಕೇಂದ್ರ ಬಿಂದುವೂ ಆಗಿದ್ದ ಯುಪಿಯಲ್ಲಿ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ರಾಜ್ಯದ ನಿರ್ಣಾಯಕ ಪಶ್ಚಿಮ ಯುಪಿಯ 58 ಕ್ಷೇತ್ರಗಳಲ್ಲಿ ಚತುಷ್ಕೋನ ಸ್ಪರ್ಧೆ ನಡೆಯುತ್ತಿದ್ದು, ಇಂದು ಮತದಾರರು ತಮ್ಮ ಆಯ್ಕೆಯ ಪ್ರತಿನಿಧಿಯನ್ನು ಆರಿಸಲು ಮತದಾನ ಮಾಡಿದ್ದಾರೆ.

ಚುನಾವಣೆಗೆ ಸಂಬಂಧಿತ ಪ್ರಮುಖ 10 ಅಂಶಗಳು ಹೀಗಿವೆ:

  1. ಮತದಾನ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಸರಾಸರಿ 20% ಮತದಾನವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಗಳಾಗಿ ನೋಯ್ಡಾದ ಹಾಲಿ ಶಾಸಕ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ಮತ್ತು ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿರುವ ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಕಣದಲ್ಲಿದ್ದಾರೆ.
  2. EVM ಮತ್ತು VVPAT ಅಸಮರ್ಪವಾಗಿ ಕೆಲಸ ಮಾಡುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ತಕ್ಷಣವೇ ಅವುಗಳನ್ನು ಪರಿಹರಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಅಜಯ್ ಕುಮಾರ್ ಶುಕ್ಲಾ ಹೇಳಿದ್ದಾರೆ. “ಎಲ್ಲಾ ಮತಗಟ್ಟೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲಾಗಿದೆ ಮತ್ತು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ” ಎಂದು ಅವರು ಹೇಳಿದ್ದರು.
  3. 2017 ರಲ್ಲಿ ಬಿಜೆಪಿ ಗರಿಷ್ಟ ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಚುನಾವಣೆಯು ನಿರ್ಣಾಯಕವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸರ್ಕಾರದ ಮೇಲೆ ಯಾವ ರೀತಿಯ ಜನಾಭಿಪ್ರಾಯ ಎಂಬುದನ್ನು ಮತದಾನದಲ್ಲಿ ನಿರೀಕ್ಷಿಸಲಾಗಿದೆ. ಸರ್ಕಾರವು ಕೋವಿಡ್‌ನ ಎರಡನೇ ಅಲೆಯನ್ನು ನಿಭಾಯಿಸಿದ್ದ ಬಗ್ಗೆ ಭಾರೀ ಆಕ್ರೋಶ-ಟೀಕೆಗಳು ವ್ಯಕ್ತವಾಗಿದ್ದವು. ಕೊರೊನಾದಿಂದ ಮೃತಪಟ್ಟವರ ಶವಗಳು ಗಂಗಾ ನದಿಯಲ್ಲಿ ತೇಲಿದ್ದವು ಮತ್ತು ಅದರ ಮರಳಿನ ದಂಡೆಯಲ್ಲಿ ಹೂಳಲ್ಪಟ್ಟಿದ್ದ ಚಿತ್ರಗಳು ದೇಶವನ್ನು ಬೆಚ್ಚಿಬೀಳಿಸಿತ್ತು.
  4. ಬಿಜೆಪಿಗೆ ದೊಡ್ಡ ಸವಾಲಾಗಿ ಸಮಾಜವಾದಿ ಪಕ್ಷವು ಕಣದಲ್ಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಕೆಲವು ಸಣ್ಣ ಪಕ್ಷಗಳು ಚುನಾವಣೆಯನ್ನು ಎದುರಿಸುತ್ತಿವೆ. ಅವರು ಇತರ ಹಿಂದುಳಿದ ವರ್ಗಗಳು, ಮುಸ್ಲಿಂ ಸಮುದಾಯ ಮತ್ತು ಯಾದವ ಸಮುದಾಯದಲ್ಲಿ ತಮ್ಮ ಬೆಂಬಲದ ನೆಲೆಯನ್ನು ಹೆಚ್ಚಿಸಿಕೊಂಡಿದ್ದಾರೆ.
  5. ಯುಪಿ ಗೆಲ್ಲುವ ಜವಾಬ್ದಾರಿಯನ್ನು ಹೊತ್ತಿರುವ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರಿಗೆ ಈ ಚುನಾವಣೆಯು ಪರೀಕ್ಷೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ದಲಿತರಲ್ಲಿ ದೊಡ್ಡ ಬೆಂಬಲದ ನೆಲೆಯನ್ನು ಹೊಂದಿರುವ ಮಾಯಾವತಿಯವರ ಬಹುಜನ ಸಮಾಜ ಪಕ್ಷವು ಮತದಾನದಲ್ಲಿರುವ 58 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಫಲಿತಾಂಶಗಳ ಮೇಲೆ ಪ್ರಭಾವಬೀರಬಲ್ಲದು ಎಂದು ಹೇಳಲಾಗುತ್ತಿದೆ.
  6. 2013ರ ಮುಜಾಫರ್‌ನಗರ ಹಿಂಸಾಚಾರದ ನಂತರ ಮತದಾನದಲ್ಲಿ ಭಾರೀ ಬದಲಾವಣೆಗಳನ್ನು ಕಂಡಿದೆ. ಧಾರ್ಮಿಕ ಧ್ರುವೀಕರಣವು ಪ್ರಚಾರದ ಕೇಂದ್ರವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಪಕ್ಷ ಸಮಾಜವಾದಿ ಪಕ್ಷವನ್ನು ಪಾಕಿಸ್ತಾನದ ಬೆಂಬಲಿಗರು ಎಂದು ಪದೇ ಪದೇ ಆರೋಪಿಸಿದ್ದಾರೆ.
  7. 2017ರ ಚುನಾವಣೆಯಲ್ಲಿ ಈ 58 ಸ್ಥಾನಗಳಲ್ಲಿ 91% ಬಿಜೆಪಿ ಗೆದ್ದಿದ್ದರೂ, ಈ ಬಾರಿ ಕೃಷಿ ಕಾನೂನುಗಳ ಮೇಲಿನ ಪ್ರತಿಭಟನೆಯಿಂದಾಗಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಬಲವಾಗಿದೆ. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬಿಜೆಪಿಗೆ ಮತದಾರರು ಶಿಕ್ಷೆ ನೀಡಬೇಕು ಎಂದು ಕರೆಕೊಟ್ಟಿದ್ದಾರೆ.
  8. ಚುನಾವಣಾ ತಯಾರಿಗಳು ಆರಂಭವಾಗುತ್ತಿದ್ದ ವೇಳೆ ಜಯಂತ್ ಚೌಧರಿ ಅವರು, ತಮ್ಮನ್ನು ಬಿಜೆಪಿಗೆ ಸೆಳೆಯಲು ಅಮಿತ್ ಶಾ ಪದೇ ಪದೇ ಯತ್ನಿಸುತ್ತಿದ್ದಾರೆ ಮತ್ತು ಪ್ರತಿಪಕ್ಷಗಳ ಮೈತ್ರಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪೂರಕವಾಗಿ, ಅಮಿತ್‌ ಶಾ ತಮ್ಮ ಭಾಷಣಗಳಲ್ಲಿ, ಜಾಟ್ ನಾಯಕ (ಜಯಂತ್‌ ಚೌಧರಿ) “ತಪ್ಪಾದ ಮನೆ”ಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪದೇ ಪದೇ ಹೇಳಿದ್ದಾರೆ.
  9. “2014, 2017 ಮತ್ತು 2019 ರಲ್ಲಿ ಯುಪಿ ಜನರು ನಮ್ಮನ್ನು ಒಪ್ಪಿಕೊಂಡಿದ್ದಾರೆ. ಅವರು ನಮ್ಮ ಕೆಲಸವನ್ನು ನೋಡಿದ್ದಾರೆ. ಹೀಗಾಗಿ, 2022ರಲ್ಲಿಯೂ ನಮ್ಮನ್ನು ಸ್ವೀಕರಿಸುತ್ತಾರೆ” ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ.
  10. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಗೋವಾ, ಮಣಿಪುರ, ಪಂಜಾಬ್ ಮತ್ತು ಉತ್ತರಾಖಂಡ್‌ ಹಾಗೂ ಉತ್ತರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳೂ ಕೂಡ ಅದೇ ದಿನ ಪ್ರಕಟವಾಗುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...