Homeಮುಖಪುಟರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ...

ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2024ರ ಸಾರ್ವತ್ರಿಕ ಚುನಾವಣೆಗೂ ಮೊದಲು ನಡೆಯುವ ಸೆಮಿಫೈನಲ್ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಅಂತ್ಯಗೊಂಡ ರೈತ ಆಂದೋಲನದ ಕೇಂದ್ರ ಬಿಂದುವೂ ಆಗಿದ್ದ ಯುಪಿಯಲ್ಲಿ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ರಾಜ್ಯದ ನಿರ್ಣಾಯಕ ಪಶ್ಚಿಮ ಯುಪಿಯ 58 ಕ್ಷೇತ್ರಗಳಲ್ಲಿ ಚತುಷ್ಕೋನ ಸ್ಪರ್ಧೆ ನಡೆಯುತ್ತಿದ್ದು, ಇಂದು ಮತದಾರರು ತಮ್ಮ ಆಯ್ಕೆಯ ಪ್ರತಿನಿಧಿಯನ್ನು ಆರಿಸಲು ಮತದಾನ ಮಾಡಿದ್ದಾರೆ.

ಚುನಾವಣೆಗೆ ಸಂಬಂಧಿತ ಪ್ರಮುಖ 10 ಅಂಶಗಳು ಹೀಗಿವೆ:

  1. ಮತದಾನ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಸರಾಸರಿ 20% ಮತದಾನವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಗಳಾಗಿ ನೋಯ್ಡಾದ ಹಾಲಿ ಶಾಸಕ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ಮತ್ತು ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿರುವ ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಕಣದಲ್ಲಿದ್ದಾರೆ.
  2. EVM ಮತ್ತು VVPAT ಅಸಮರ್ಪವಾಗಿ ಕೆಲಸ ಮಾಡುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ತಕ್ಷಣವೇ ಅವುಗಳನ್ನು ಪರಿಹರಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಅಜಯ್ ಕುಮಾರ್ ಶುಕ್ಲಾ ಹೇಳಿದ್ದಾರೆ. “ಎಲ್ಲಾ ಮತಗಟ್ಟೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲಾಗಿದೆ ಮತ್ತು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ” ಎಂದು ಅವರು ಹೇಳಿದ್ದರು.
  3. 2017 ರಲ್ಲಿ ಬಿಜೆಪಿ ಗರಿಷ್ಟ ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಚುನಾವಣೆಯು ನಿರ್ಣಾಯಕವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸರ್ಕಾರದ ಮೇಲೆ ಯಾವ ರೀತಿಯ ಜನಾಭಿಪ್ರಾಯ ಎಂಬುದನ್ನು ಮತದಾನದಲ್ಲಿ ನಿರೀಕ್ಷಿಸಲಾಗಿದೆ. ಸರ್ಕಾರವು ಕೋವಿಡ್‌ನ ಎರಡನೇ ಅಲೆಯನ್ನು ನಿಭಾಯಿಸಿದ್ದ ಬಗ್ಗೆ ಭಾರೀ ಆಕ್ರೋಶ-ಟೀಕೆಗಳು ವ್ಯಕ್ತವಾಗಿದ್ದವು. ಕೊರೊನಾದಿಂದ ಮೃತಪಟ್ಟವರ ಶವಗಳು ಗಂಗಾ ನದಿಯಲ್ಲಿ ತೇಲಿದ್ದವು ಮತ್ತು ಅದರ ಮರಳಿನ ದಂಡೆಯಲ್ಲಿ ಹೂಳಲ್ಪಟ್ಟಿದ್ದ ಚಿತ್ರಗಳು ದೇಶವನ್ನು ಬೆಚ್ಚಿಬೀಳಿಸಿತ್ತು.
  4. ಬಿಜೆಪಿಗೆ ದೊಡ್ಡ ಸವಾಲಾಗಿ ಸಮಾಜವಾದಿ ಪಕ್ಷವು ಕಣದಲ್ಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಕೆಲವು ಸಣ್ಣ ಪಕ್ಷಗಳು ಚುನಾವಣೆಯನ್ನು ಎದುರಿಸುತ್ತಿವೆ. ಅವರು ಇತರ ಹಿಂದುಳಿದ ವರ್ಗಗಳು, ಮುಸ್ಲಿಂ ಸಮುದಾಯ ಮತ್ತು ಯಾದವ ಸಮುದಾಯದಲ್ಲಿ ತಮ್ಮ ಬೆಂಬಲದ ನೆಲೆಯನ್ನು ಹೆಚ್ಚಿಸಿಕೊಂಡಿದ್ದಾರೆ.
  5. ಯುಪಿ ಗೆಲ್ಲುವ ಜವಾಬ್ದಾರಿಯನ್ನು ಹೊತ್ತಿರುವ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರಿಗೆ ಈ ಚುನಾವಣೆಯು ಪರೀಕ್ಷೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ದಲಿತರಲ್ಲಿ ದೊಡ್ಡ ಬೆಂಬಲದ ನೆಲೆಯನ್ನು ಹೊಂದಿರುವ ಮಾಯಾವತಿಯವರ ಬಹುಜನ ಸಮಾಜ ಪಕ್ಷವು ಮತದಾನದಲ್ಲಿರುವ 58 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಫಲಿತಾಂಶಗಳ ಮೇಲೆ ಪ್ರಭಾವಬೀರಬಲ್ಲದು ಎಂದು ಹೇಳಲಾಗುತ್ತಿದೆ.
  6. 2013ರ ಮುಜಾಫರ್‌ನಗರ ಹಿಂಸಾಚಾರದ ನಂತರ ಮತದಾನದಲ್ಲಿ ಭಾರೀ ಬದಲಾವಣೆಗಳನ್ನು ಕಂಡಿದೆ. ಧಾರ್ಮಿಕ ಧ್ರುವೀಕರಣವು ಪ್ರಚಾರದ ಕೇಂದ್ರವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಪಕ್ಷ ಸಮಾಜವಾದಿ ಪಕ್ಷವನ್ನು ಪಾಕಿಸ್ತಾನದ ಬೆಂಬಲಿಗರು ಎಂದು ಪದೇ ಪದೇ ಆರೋಪಿಸಿದ್ದಾರೆ.
  7. 2017ರ ಚುನಾವಣೆಯಲ್ಲಿ ಈ 58 ಸ್ಥಾನಗಳಲ್ಲಿ 91% ಬಿಜೆಪಿ ಗೆದ್ದಿದ್ದರೂ, ಈ ಬಾರಿ ಕೃಷಿ ಕಾನೂನುಗಳ ಮೇಲಿನ ಪ್ರತಿಭಟನೆಯಿಂದಾಗಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಬಲವಾಗಿದೆ. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬಿಜೆಪಿಗೆ ಮತದಾರರು ಶಿಕ್ಷೆ ನೀಡಬೇಕು ಎಂದು ಕರೆಕೊಟ್ಟಿದ್ದಾರೆ.
  8. ಚುನಾವಣಾ ತಯಾರಿಗಳು ಆರಂಭವಾಗುತ್ತಿದ್ದ ವೇಳೆ ಜಯಂತ್ ಚೌಧರಿ ಅವರು, ತಮ್ಮನ್ನು ಬಿಜೆಪಿಗೆ ಸೆಳೆಯಲು ಅಮಿತ್ ಶಾ ಪದೇ ಪದೇ ಯತ್ನಿಸುತ್ತಿದ್ದಾರೆ ಮತ್ತು ಪ್ರತಿಪಕ್ಷಗಳ ಮೈತ್ರಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪೂರಕವಾಗಿ, ಅಮಿತ್‌ ಶಾ ತಮ್ಮ ಭಾಷಣಗಳಲ್ಲಿ, ಜಾಟ್ ನಾಯಕ (ಜಯಂತ್‌ ಚೌಧರಿ) “ತಪ್ಪಾದ ಮನೆ”ಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪದೇ ಪದೇ ಹೇಳಿದ್ದಾರೆ.
  9. “2014, 2017 ಮತ್ತು 2019 ರಲ್ಲಿ ಯುಪಿ ಜನರು ನಮ್ಮನ್ನು ಒಪ್ಪಿಕೊಂಡಿದ್ದಾರೆ. ಅವರು ನಮ್ಮ ಕೆಲಸವನ್ನು ನೋಡಿದ್ದಾರೆ. ಹೀಗಾಗಿ, 2022ರಲ್ಲಿಯೂ ನಮ್ಮನ್ನು ಸ್ವೀಕರಿಸುತ್ತಾರೆ” ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ.
  10. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಗೋವಾ, ಮಣಿಪುರ, ಪಂಜಾಬ್ ಮತ್ತು ಉತ್ತರಾಖಂಡ್‌ ಹಾಗೂ ಉತ್ತರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳೂ ಕೂಡ ಅದೇ ದಿನ ಪ್ರಕಟವಾಗುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...