Homeಮುಖಪುಟರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ...

ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2024ರ ಸಾರ್ವತ್ರಿಕ ಚುನಾವಣೆಗೂ ಮೊದಲು ನಡೆಯುವ ಸೆಮಿಫೈನಲ್ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಅಂತ್ಯಗೊಂಡ ರೈತ ಆಂದೋಲನದ ಕೇಂದ್ರ ಬಿಂದುವೂ ಆಗಿದ್ದ ಯುಪಿಯಲ್ಲಿ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ರಾಜ್ಯದ ನಿರ್ಣಾಯಕ ಪಶ್ಚಿಮ ಯುಪಿಯ 58 ಕ್ಷೇತ್ರಗಳಲ್ಲಿ ಚತುಷ್ಕೋನ ಸ್ಪರ್ಧೆ ನಡೆಯುತ್ತಿದ್ದು, ಇಂದು ಮತದಾರರು ತಮ್ಮ ಆಯ್ಕೆಯ ಪ್ರತಿನಿಧಿಯನ್ನು ಆರಿಸಲು ಮತದಾನ ಮಾಡಿದ್ದಾರೆ.

ಚುನಾವಣೆಗೆ ಸಂಬಂಧಿತ ಪ್ರಮುಖ 10 ಅಂಶಗಳು ಹೀಗಿವೆ:

  1. ಮತದಾನ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಸರಾಸರಿ 20% ಮತದಾನವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಗಳಾಗಿ ನೋಯ್ಡಾದ ಹಾಲಿ ಶಾಸಕ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ಮತ್ತು ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿರುವ ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಕಣದಲ್ಲಿದ್ದಾರೆ.
  2. EVM ಮತ್ತು VVPAT ಅಸಮರ್ಪವಾಗಿ ಕೆಲಸ ಮಾಡುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ತಕ್ಷಣವೇ ಅವುಗಳನ್ನು ಪರಿಹರಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಅಜಯ್ ಕುಮಾರ್ ಶುಕ್ಲಾ ಹೇಳಿದ್ದಾರೆ. “ಎಲ್ಲಾ ಮತಗಟ್ಟೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲಾಗಿದೆ ಮತ್ತು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ” ಎಂದು ಅವರು ಹೇಳಿದ್ದರು.
  3. 2017 ರಲ್ಲಿ ಬಿಜೆಪಿ ಗರಿಷ್ಟ ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಚುನಾವಣೆಯು ನಿರ್ಣಾಯಕವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸರ್ಕಾರದ ಮೇಲೆ ಯಾವ ರೀತಿಯ ಜನಾಭಿಪ್ರಾಯ ಎಂಬುದನ್ನು ಮತದಾನದಲ್ಲಿ ನಿರೀಕ್ಷಿಸಲಾಗಿದೆ. ಸರ್ಕಾರವು ಕೋವಿಡ್‌ನ ಎರಡನೇ ಅಲೆಯನ್ನು ನಿಭಾಯಿಸಿದ್ದ ಬಗ್ಗೆ ಭಾರೀ ಆಕ್ರೋಶ-ಟೀಕೆಗಳು ವ್ಯಕ್ತವಾಗಿದ್ದವು. ಕೊರೊನಾದಿಂದ ಮೃತಪಟ್ಟವರ ಶವಗಳು ಗಂಗಾ ನದಿಯಲ್ಲಿ ತೇಲಿದ್ದವು ಮತ್ತು ಅದರ ಮರಳಿನ ದಂಡೆಯಲ್ಲಿ ಹೂಳಲ್ಪಟ್ಟಿದ್ದ ಚಿತ್ರಗಳು ದೇಶವನ್ನು ಬೆಚ್ಚಿಬೀಳಿಸಿತ್ತು.
  4. ಬಿಜೆಪಿಗೆ ದೊಡ್ಡ ಸವಾಲಾಗಿ ಸಮಾಜವಾದಿ ಪಕ್ಷವು ಕಣದಲ್ಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಕೆಲವು ಸಣ್ಣ ಪಕ್ಷಗಳು ಚುನಾವಣೆಯನ್ನು ಎದುರಿಸುತ್ತಿವೆ. ಅವರು ಇತರ ಹಿಂದುಳಿದ ವರ್ಗಗಳು, ಮುಸ್ಲಿಂ ಸಮುದಾಯ ಮತ್ತು ಯಾದವ ಸಮುದಾಯದಲ್ಲಿ ತಮ್ಮ ಬೆಂಬಲದ ನೆಲೆಯನ್ನು ಹೆಚ್ಚಿಸಿಕೊಂಡಿದ್ದಾರೆ.
  5. ಯುಪಿ ಗೆಲ್ಲುವ ಜವಾಬ್ದಾರಿಯನ್ನು ಹೊತ್ತಿರುವ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರಿಗೆ ಈ ಚುನಾವಣೆಯು ಪರೀಕ್ಷೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ದಲಿತರಲ್ಲಿ ದೊಡ್ಡ ಬೆಂಬಲದ ನೆಲೆಯನ್ನು ಹೊಂದಿರುವ ಮಾಯಾವತಿಯವರ ಬಹುಜನ ಸಮಾಜ ಪಕ್ಷವು ಮತದಾನದಲ್ಲಿರುವ 58 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಫಲಿತಾಂಶಗಳ ಮೇಲೆ ಪ್ರಭಾವಬೀರಬಲ್ಲದು ಎಂದು ಹೇಳಲಾಗುತ್ತಿದೆ.
  6. 2013ರ ಮುಜಾಫರ್‌ನಗರ ಹಿಂಸಾಚಾರದ ನಂತರ ಮತದಾನದಲ್ಲಿ ಭಾರೀ ಬದಲಾವಣೆಗಳನ್ನು ಕಂಡಿದೆ. ಧಾರ್ಮಿಕ ಧ್ರುವೀಕರಣವು ಪ್ರಚಾರದ ಕೇಂದ್ರವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಪಕ್ಷ ಸಮಾಜವಾದಿ ಪಕ್ಷವನ್ನು ಪಾಕಿಸ್ತಾನದ ಬೆಂಬಲಿಗರು ಎಂದು ಪದೇ ಪದೇ ಆರೋಪಿಸಿದ್ದಾರೆ.
  7. 2017ರ ಚುನಾವಣೆಯಲ್ಲಿ ಈ 58 ಸ್ಥಾನಗಳಲ್ಲಿ 91% ಬಿಜೆಪಿ ಗೆದ್ದಿದ್ದರೂ, ಈ ಬಾರಿ ಕೃಷಿ ಕಾನೂನುಗಳ ಮೇಲಿನ ಪ್ರತಿಭಟನೆಯಿಂದಾಗಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಬಲವಾಗಿದೆ. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬಿಜೆಪಿಗೆ ಮತದಾರರು ಶಿಕ್ಷೆ ನೀಡಬೇಕು ಎಂದು ಕರೆಕೊಟ್ಟಿದ್ದಾರೆ.
  8. ಚುನಾವಣಾ ತಯಾರಿಗಳು ಆರಂಭವಾಗುತ್ತಿದ್ದ ವೇಳೆ ಜಯಂತ್ ಚೌಧರಿ ಅವರು, ತಮ್ಮನ್ನು ಬಿಜೆಪಿಗೆ ಸೆಳೆಯಲು ಅಮಿತ್ ಶಾ ಪದೇ ಪದೇ ಯತ್ನಿಸುತ್ತಿದ್ದಾರೆ ಮತ್ತು ಪ್ರತಿಪಕ್ಷಗಳ ಮೈತ್ರಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪೂರಕವಾಗಿ, ಅಮಿತ್‌ ಶಾ ತಮ್ಮ ಭಾಷಣಗಳಲ್ಲಿ, ಜಾಟ್ ನಾಯಕ (ಜಯಂತ್‌ ಚೌಧರಿ) “ತಪ್ಪಾದ ಮನೆ”ಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪದೇ ಪದೇ ಹೇಳಿದ್ದಾರೆ.
  9. “2014, 2017 ಮತ್ತು 2019 ರಲ್ಲಿ ಯುಪಿ ಜನರು ನಮ್ಮನ್ನು ಒಪ್ಪಿಕೊಂಡಿದ್ದಾರೆ. ಅವರು ನಮ್ಮ ಕೆಲಸವನ್ನು ನೋಡಿದ್ದಾರೆ. ಹೀಗಾಗಿ, 2022ರಲ್ಲಿಯೂ ನಮ್ಮನ್ನು ಸ್ವೀಕರಿಸುತ್ತಾರೆ” ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ.
  10. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಗೋವಾ, ಮಣಿಪುರ, ಪಂಜಾಬ್ ಮತ್ತು ಉತ್ತರಾಖಂಡ್‌ ಹಾಗೂ ಉತ್ತರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳೂ ಕೂಡ ಅದೇ ದಿನ ಪ್ರಕಟವಾಗುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...