Homeಮುಖಪುಟಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

- Advertisement -
- Advertisement -

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಲಖಿಂಪುರ್‌ ಖೇರಿನಲ್ಲಿ ಕಾರು ಹರಿಸಿ ರೈತರ ಹತ್ಯಾಕಾಂಡ ನಡೆಸಲಾಗಿತ್ತು. ಈ ಹತ್ಯಾಕಾಂಡದಿಂದ ಮೃತಪಟ್ಟ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿರುವ ರೈತರು, ಚುನಾವಣೆಯಲ್ಲಿ ’ನೋಟಾ’ಕ್ಕೆ ಮತ ನೀಡುವುದಾಗಿ ತಿಳಿಸಿದ್ದಾರೆ.

ಲಖೀಂಪುರ್‌ ಖೇರಿಯ ರೈತರು ವಿಧಾನಸಭಾ ಚುನಾವಣೆಯಲ್ಲಿ ‘ನೋಟಾ’ ಬಟನ್ ಒತ್ತಲು ಮನಸ್ಸು ಮಾಡಿದ್ದಾರೆ. ರಾಜ್ಯ ಬಿಜೆಪಿ ಮತ್ತು ಎಸ್‌ಪಿಯ ಎರಡು ದೊಡ್ಡ ಪಕ್ಷಗಳು ನಮಗೆ ದ್ರೋಹ ಬಗೆದಿವೆ ಎಂದು ಆರೋಪಿಸಿರುವ ರೈತರು, ನಾವು ಬಿಜೆಪಿಗೆ ಅಥವಾ ಎಸ್‌ಪಿಗೆ ಮತ ಹಾಕುವುದಿಲ್ಲ ಎಂದಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಒತ್ತಡಗಳ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿದೆ. ಆದರೆ, ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಟ್ಟಿಲ್ಲ. ಇದರಿಂದ ಅಸಮಾಧಾನಗೊಂಡಿರುವ ರೈತರು, ವಿವಿಧ ರಾಜಕೀಯ ಪಕ್ಷಗಳಿಂದ ತಾವು ಮೋಸ ಹೋಗಿದ್ದೇವೆ ಎಂದಿದ್ದಾರೆ.

ತೆರಾಯ್ ಬೆಲ್ಟ್‌ನಲ್ಲಿರುವ ಲಖಿಂಪುರ್‌ ಖೇರಿ ಜಿಲ್ಲೆಯ ಜನಸಂಖ್ಯೆಯಲ್ಲಿ ಬಹುಪಾಲು ರೈತರೇ ಇದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

“ಬಿಜೆಪಿ, ಎಸ್‌ಪಿ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್‌ ಪಕ್ಷಗಳು ನಮಗೆ ಸುಳ್ಳು ಆಶ್ವಾಸನೆಗಳನ್ನು ನೀಡಿದ್ದು, ಚುನಾವಣೆಯ ಸಂದರ್ಭದಲ್ಲಿ ನಮ್ಮನ್ನು ‘ಸರಕಾಗಿ ಬಳಸಿಕೊಳ್ಳಲು’ ಬಯಸುತ್ತಿವೆ. ಹೀಗಾಗಿ ಯಾವುದೇ ರಾಜಕೀಯ ಪಕ್ಷದ ಮೇಲೆ ನಮಗೆ ಭರವಸೆ ಇಲ್ಲ” ಎಂದು ಸ್ಥಳೀಯ ರೈತ ಗುರ್ವಿಂದರ್ ಸಿಂಗ್ ಹೇಳಿದ್ದಾರೆ.

ಎಸ್‌ಪಿ ಮತ್ತು ಬಿಜೆಪಿ ರೈತರಿಗೆ ಮೋಸ ಮಾಡಿದೆ ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆಯ ಮುಖ್ಯಸ್ಥ ವಿ.ಎಂ. ಸಿಂಗ್ ಆರೋಪಿಸಿದ್ದಾರೆ. “ಎಸ್‌ಪಿ- ರಾಷ್ಟ್ರೀಯ ಲೋಕದಳ ಮೈತ್ರಿಕೂಟ ಮತ್ತು ಬಿಜೆಪಿ ರೈತರನ್ನು ಮೂರ್ಖರನ್ನಾಗಿಸುತ್ತಿವೆ, ನಾವು ಅವರಿಬ್ಬರನ್ನು ಏಕೆ ಬೆಂಬಲಿಸಬೇಕು?” ಎಂದು ಪ್ರಶ್ನಿಸಿದ್ದಾರೆ.

’ಅಕ್ಟೋಬರ್ 3 ರ ಘಟನೆಯ ನಂತರ ನಾವು ಬಿಜೆಪಿಯನ್ನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ. ಕಬ್ಬು ಗಿರಣಿ ಮಾಲೀಕರು ಸಾಗುವಳಿದಾರರಿಗೆ ಪಾವತಿಸಬೇಕಾದ 2,000 ಕೋಟಿ ರೂಪಾಯಿಗಳ ಬಡ್ಡಿಯನ್ನು ಮನ್ನಾ ಮಾಡಿದ ಸಮಾಜವಾದಿ ಪಕ್ಷವನ್ನು ಬೆಂಬಲಿಸಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.

1966ರ ಕಬ್ಬು ನಿಯಂತ್ರಣ ಆದೇಶದ ಪ್ರಕಾರ ಕಬ್ಬಿನ ಬಾಕಿ ಬೆಲೆಯನ್ನು 14 ದಿನಗಳೊಳಗೆ ಪಾವತಿಸದಿದ್ದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಶೇ.15ರಷ್ಟು ಬಡ್ಡಿ ನೀಡಬೇಕು. ಆದರೆ, ಸಕ್ಕರೆ ಉದ್ಯಮವು ಸಂಕಷ್ಟದಲ್ಲಿದೆ ಎಂದಿದ್ದ ಆಗಿನ ಎಸ್‌ಪಿ ಸರ್ಕಾರ ರೈತರಿಗೆ ಬರಬೇಕಿದ್ದ ಸುಮಾರು 2,000 ಕೋಟಿ ರೂ. ಮನ್ನಾ ಮಾಡಿತ್ತು.

ಮತ್ತೊಬ್ಬ ರೈತ ರಾಜ್ ಸಿಂಗ್ ಮಾತನಾಡಿ, ‘ನಮ್ಮ ಮಕ್ಕಳು ಓದಲು, ಮದುವೆಯಾಗಲು ಸಾಧ್ಯವಾಗುತ್ತಿಲ್ಲ, ನಾವು ಯಾವುದೇ ಪಕ್ಷಕ್ಕೆ ಮತ ಹಾಕಲು ಬಯಸುವುದಿಲ್ಲ ಮತ್ತು ನೋಟಾ ಆಯ್ಕೆಯನ್ನು ಬಳಸುತ್ತೇವೆ’ ಎಂದಿದ್ದಾರೆ.

ಈ ಹಿಂದೆ, ಶಾಮ್ಲಿ ಜಿಲ್ಲೆಯ ಕಶ್ಯಪ್ ಸಮುದಾಯದ ಪಂಚಾಯತ್, 17 ಹಿಂದಿರುಳಿದ ವರ್ಗಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ವರ್ಗಾಯಿಸುವ ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸದ ಕಾರಣ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತನ್ನ ಸದಸ್ಯರು ಯಾವುದೇ ಅಭ್ಯರ್ಥಿಗೆ ಮತ ಹಾಕುವುದಿಲ್ಲ. ನೋಟಾಗೆ ಮತ ನೀಡುವುದಾಗಿ ಘೋಷಿಸಿತ್ತು.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವರ ವಜಾ, ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಎಸ್‌ಕೆಎಂ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...