Homeಮುಖಪುಟಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

- Advertisement -
- Advertisement -

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಲಖಿಂಪುರ್‌ ಖೇರಿನಲ್ಲಿ ಕಾರು ಹರಿಸಿ ರೈತರ ಹತ್ಯಾಕಾಂಡ ನಡೆಸಲಾಗಿತ್ತು. ಈ ಹತ್ಯಾಕಾಂಡದಿಂದ ಮೃತಪಟ್ಟ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿರುವ ರೈತರು, ಚುನಾವಣೆಯಲ್ಲಿ ’ನೋಟಾ’ಕ್ಕೆ ಮತ ನೀಡುವುದಾಗಿ ತಿಳಿಸಿದ್ದಾರೆ.

ಲಖೀಂಪುರ್‌ ಖೇರಿಯ ರೈತರು ವಿಧಾನಸಭಾ ಚುನಾವಣೆಯಲ್ಲಿ ‘ನೋಟಾ’ ಬಟನ್ ಒತ್ತಲು ಮನಸ್ಸು ಮಾಡಿದ್ದಾರೆ. ರಾಜ್ಯ ಬಿಜೆಪಿ ಮತ್ತು ಎಸ್‌ಪಿಯ ಎರಡು ದೊಡ್ಡ ಪಕ್ಷಗಳು ನಮಗೆ ದ್ರೋಹ ಬಗೆದಿವೆ ಎಂದು ಆರೋಪಿಸಿರುವ ರೈತರು, ನಾವು ಬಿಜೆಪಿಗೆ ಅಥವಾ ಎಸ್‌ಪಿಗೆ ಮತ ಹಾಕುವುದಿಲ್ಲ ಎಂದಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಒತ್ತಡಗಳ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿದೆ. ಆದರೆ, ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಟ್ಟಿಲ್ಲ. ಇದರಿಂದ ಅಸಮಾಧಾನಗೊಂಡಿರುವ ರೈತರು, ವಿವಿಧ ರಾಜಕೀಯ ಪಕ್ಷಗಳಿಂದ ತಾವು ಮೋಸ ಹೋಗಿದ್ದೇವೆ ಎಂದಿದ್ದಾರೆ.

ತೆರಾಯ್ ಬೆಲ್ಟ್‌ನಲ್ಲಿರುವ ಲಖಿಂಪುರ್‌ ಖೇರಿ ಜಿಲ್ಲೆಯ ಜನಸಂಖ್ಯೆಯಲ್ಲಿ ಬಹುಪಾಲು ರೈತರೇ ಇದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

“ಬಿಜೆಪಿ, ಎಸ್‌ಪಿ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್‌ ಪಕ್ಷಗಳು ನಮಗೆ ಸುಳ್ಳು ಆಶ್ವಾಸನೆಗಳನ್ನು ನೀಡಿದ್ದು, ಚುನಾವಣೆಯ ಸಂದರ್ಭದಲ್ಲಿ ನಮ್ಮನ್ನು ‘ಸರಕಾಗಿ ಬಳಸಿಕೊಳ್ಳಲು’ ಬಯಸುತ್ತಿವೆ. ಹೀಗಾಗಿ ಯಾವುದೇ ರಾಜಕೀಯ ಪಕ್ಷದ ಮೇಲೆ ನಮಗೆ ಭರವಸೆ ಇಲ್ಲ” ಎಂದು ಸ್ಥಳೀಯ ರೈತ ಗುರ್ವಿಂದರ್ ಸಿಂಗ್ ಹೇಳಿದ್ದಾರೆ.

ಎಸ್‌ಪಿ ಮತ್ತು ಬಿಜೆಪಿ ರೈತರಿಗೆ ಮೋಸ ಮಾಡಿದೆ ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆಯ ಮುಖ್ಯಸ್ಥ ವಿ.ಎಂ. ಸಿಂಗ್ ಆರೋಪಿಸಿದ್ದಾರೆ. “ಎಸ್‌ಪಿ- ರಾಷ್ಟ್ರೀಯ ಲೋಕದಳ ಮೈತ್ರಿಕೂಟ ಮತ್ತು ಬಿಜೆಪಿ ರೈತರನ್ನು ಮೂರ್ಖರನ್ನಾಗಿಸುತ್ತಿವೆ, ನಾವು ಅವರಿಬ್ಬರನ್ನು ಏಕೆ ಬೆಂಬಲಿಸಬೇಕು?” ಎಂದು ಪ್ರಶ್ನಿಸಿದ್ದಾರೆ.

’ಅಕ್ಟೋಬರ್ 3 ರ ಘಟನೆಯ ನಂತರ ನಾವು ಬಿಜೆಪಿಯನ್ನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ. ಕಬ್ಬು ಗಿರಣಿ ಮಾಲೀಕರು ಸಾಗುವಳಿದಾರರಿಗೆ ಪಾವತಿಸಬೇಕಾದ 2,000 ಕೋಟಿ ರೂಪಾಯಿಗಳ ಬಡ್ಡಿಯನ್ನು ಮನ್ನಾ ಮಾಡಿದ ಸಮಾಜವಾದಿ ಪಕ್ಷವನ್ನು ಬೆಂಬಲಿಸಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.

1966ರ ಕಬ್ಬು ನಿಯಂತ್ರಣ ಆದೇಶದ ಪ್ರಕಾರ ಕಬ್ಬಿನ ಬಾಕಿ ಬೆಲೆಯನ್ನು 14 ದಿನಗಳೊಳಗೆ ಪಾವತಿಸದಿದ್ದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಶೇ.15ರಷ್ಟು ಬಡ್ಡಿ ನೀಡಬೇಕು. ಆದರೆ, ಸಕ್ಕರೆ ಉದ್ಯಮವು ಸಂಕಷ್ಟದಲ್ಲಿದೆ ಎಂದಿದ್ದ ಆಗಿನ ಎಸ್‌ಪಿ ಸರ್ಕಾರ ರೈತರಿಗೆ ಬರಬೇಕಿದ್ದ ಸುಮಾರು 2,000 ಕೋಟಿ ರೂ. ಮನ್ನಾ ಮಾಡಿತ್ತು.

ಮತ್ತೊಬ್ಬ ರೈತ ರಾಜ್ ಸಿಂಗ್ ಮಾತನಾಡಿ, ‘ನಮ್ಮ ಮಕ್ಕಳು ಓದಲು, ಮದುವೆಯಾಗಲು ಸಾಧ್ಯವಾಗುತ್ತಿಲ್ಲ, ನಾವು ಯಾವುದೇ ಪಕ್ಷಕ್ಕೆ ಮತ ಹಾಕಲು ಬಯಸುವುದಿಲ್ಲ ಮತ್ತು ನೋಟಾ ಆಯ್ಕೆಯನ್ನು ಬಳಸುತ್ತೇವೆ’ ಎಂದಿದ್ದಾರೆ.

ಈ ಹಿಂದೆ, ಶಾಮ್ಲಿ ಜಿಲ್ಲೆಯ ಕಶ್ಯಪ್ ಸಮುದಾಯದ ಪಂಚಾಯತ್, 17 ಹಿಂದಿರುಳಿದ ವರ್ಗಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ವರ್ಗಾಯಿಸುವ ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸದ ಕಾರಣ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತನ್ನ ಸದಸ್ಯರು ಯಾವುದೇ ಅಭ್ಯರ್ಥಿಗೆ ಮತ ಹಾಕುವುದಿಲ್ಲ. ನೋಟಾಗೆ ಮತ ನೀಡುವುದಾಗಿ ಘೋಷಿಸಿತ್ತು.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವರ ವಜಾ, ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಎಸ್‌ಕೆಎಂ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...