Homeಮುಖಪುಟಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.

ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ’ಭಾರತೀಯ ಜನತಾ ಪಕ್ಷವು ಸೋಲುವುದು ಖಚಿತ ಮತ್ತು ಹೊಸ ಸರ್ಕಾರವನ್ನು ರಚಿಸುವುದಿಲ್ಲ. ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಆರಾಮವಾಗಿ 202 ಸ್ಥಾನಗಳನ್ನು ದಾಟುತ್ತವೆ ಮತ್ತು ತಮ್ಮದೇ ಆದ ಬಹುಮತವನ್ನು ಪಡೆಯುತ್ತವೆ. ಬೇರೆ ಪಕ್ಷಗಳ ಬೆಂಬಲದ ಅಗತ್ಯವಿಲ್ಲದೆ ಅವರು ಸರ್ಕಾರ ರಚಿಸುತ್ತಾರೆ” ಎಂದಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಮಾಜಿ ಉಪಕುಲಪತಿಯೂ ಆಗಿರುವ ನಜೀಬ್ ಜಂಗ್ ಯುಪಿಯಲ್ಲಿ ಬಿಜೆಪಿ ಸೋಲಿನತ್ತ ಸಾಗುತ್ತಿರುವುದಕ್ಕೆ ನಾಲ್ಕು ನಿರ್ಣಾಯಕ ಕಾರಣಗಳನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

ಮೊದಲನೆಯದು ಈ ಬಾರಿ ನರೇಂದ್ರ ಮೋದಿ ಅವರು ಬಿಜೆಪಿ ಪ್ರಚಾರದ ಮುಖವಾಗಿಲ್ಲ, ಅವರ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್  ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂಬುದು ಅತ್ಯಂತ ಮುಖ್ಯವಾದ ಅಂಶವಾಗಿದೆ. ಎರಡನೇಯದು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಅಸಮಾಧಾನ ಮತ್ತು ಕೋಪ. ಮೂರನೇಯದು ಬಿಡಾಡಿ ಹಸುಗಳ ವ್ಯಾಪಕ ಸಮಸ್ಯೆ ಮತ್ತು ಕೊನೆಯದಾಗಿ ನಿರುದ್ಯೋಗ.

ನಿರುದ್ಯೋಗ ಬಹುಶಃ ಇತರ ರಾಜ್ಯಗಳಿಗಿಂತ ಯುಪಿಯಲ್ಲಿ ಹೆಚ್ಚಾಗಿದ್ದು, ವಿಶೇಷವಾಗಿ ಯುವ ಜನತೆಯ ಮೇಲೆ ಪರಿಣಾಮ ಬೀರಿದೆ. ಇದರ ಜೊತೆಗೆ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಅಸಮರ್ಥ ನಿರ್ವಹಣೆ ಮತ್ತು ಅದು ಸೃಷ್ಟಿಸಿದ ಆಘಾತವನ್ನು ಇಲ್ಲಿನ ಜನ ಇನ್ನು  ಮರೆತಿಲ್ಲ ಎಂದಿದ್ದಾರೆ.

ಯೋಗಿ ಆದಿತ್ಯನಾಥ್‌ಗೆ ವ್ಯತಿರಿಕ್ತವಾಗಿ, ಅಖಿಲೇಶ್ ಯಾದವ್ ಅವರು ಹಿಂದುತ್ವದ ಸವಾಲನ್ನು ನಿಭಾಯಿಸಿದ್ದಾರೆ. ಅವರು ಯಾದವ್ ಒಬಿಸಿಗಳನ್ನು ಮಾತ್ರವಲ್ಲದೆ ಯಾದವೇತರ ಒಬಿಸಿಗಳನ್ನು ಆಕರ್ಷಿಸಿದ್ದಾರೆ. ಇದರಿಂದ ಬಿಜೆಪಿಯಿಂದ ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳಿಗೆ ಹಲವರು ಸೇರ್ಪಡೆಯಾಗಿದ್ದಾರೆ. ಇದರ ಜೊತೆಗೆ 80% ಅಥವಾ ಹೆಚ್ಚಿನ ಮುಸ್ಲಿಮರು ಸಮಾಜವಾದಿ ಪಕ್ಷಕ್ಕೆ ಮತ ಹಾಕುತ್ತಾರೆ (2017 ರಲ್ಲಿ 58%). ಮತ್ತೊಂದೆಡೆ, ಬ್ರಾಹ್ಮಣರು ಅಧಿಕ ಸಂಖ್ಯೆಯಲ್ಲಿ ಬಿಜೆಪಿಯಿಂದ ದೂರ ಸರಿದಿದ್ದಾರೆ. ಬಹುಶಃ ಕಾಂಗ್ರೆಸ್‌ಗೆ ಅವರು ಮತಹಾಕಲಿದ್ದು, ಅವರು ಸಮಾಜವಾದಿ ಪಕ್ಷಕ್ಕೆ ಮತ ಹಾಕುವ ಸಾಧ್ಯತೆ ಕಡಿಮೆ. ಇದು ಬಿಜೆಪಿಯನ್ನು ದುರ್ಬಲಗೊಳಿಸುವುದು ನಿಶ್ಚಿತ ಎಂದು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಇತ್ತ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉತ್ತರ ಪ್ರದೇಶದಲ್ಲಿ ನಡೆದಿರುವ ಎರಡನೇ ಹಂತದ ಮತದಾನದ ನಂತರ,  “ಬಿಜೆಪಿ ಮೊದಲ ಬಾರಿಗೆ ಎರಡು ಹಂತಗಳಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ” ಎಂದು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಲು ತಿಳಿಸಿದ್ದಾರೆ.

“ಮೊದಲ ಹಂತದಲ್ಲಿ ಬಿಜೆಪಿ ಕೇವಲ 17 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಎರಡನೇ ಹಂತದಲ್ಲಿ ಪಕ್ಷವು ಅಷ್ಟೇ ಕೆಟ್ಟದ್ದನ್ನು ಮಾಡಿದೆ” ಎಂದು ಭಾಗವತ್ ಅವರನ್ನು ಉಲ್ಲೇಖಿಸಿ ಆರ್‌ಎಸ್‌ಎಸ್ ಹಿರಿಯ ಕಾರ್ಯಕಾರಿಯೊಬ್ಬರು ಹೇಳಿದ್ದಾರೆ.

ಯುಪಿಯಲ್ಲಿ ಫೆಬ್ರವರಿ 10 ರಂದು ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 58 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017 ರಲ್ಲಿ ಬಿಜೆಪಿ ಈ ಪೈಕಿ 53 ಸ್ಥಾನಗಳನ್ನು ಗೆದ್ದಿದ್ದರೆ, ಆರೆಸ್ಸೆಸ್ ಐಬಿ ಇನ್‌ಪುಟ್ ಆಧರಿಸಿ ಈ ಬಾರಿ 17 ಸ್ಥಾನಗಳನ್ನು ಗೆಲ್ಲಲಿದೆ. ಫೆಬ್ರವರಿ 14 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಕನಿಷ್ಠ 55 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017ರಲ್ಲಿ ಬಿಜೆಪಿ ಈ ಪೈಕಿ 38 ಸ್ಥಾನಗಳನ್ನು ಗೆದ್ದಿತ್ತು ಮತ್ತು ಈ ಬಾರಿ ಅರ್ಧದಷ್ಟು ಸ್ಥಾನಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಆರ್‌ಎಸ್‌ಎಸ್‌ ಲೆಕ್ಕಾಚಾರ.

ಸಂಘದ ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ಮಾಡಲು ಮತ್ತು ಬಿಜೆಪಿಗೆ ಮತ ಹಾಕಲು ಹಿಂದೂಗಳನ್ನು ಪ್ರೇರೇಪಿಸಲು ಸಭೆಯಲ್ಲಿ ಕೇಳಿಕೊಳ್ಳಲಾಗಿದೆ. “ಇದು ತುಂಬಾ ಸ್ಪಷ್ಟವಾಗಿದೆ. ಯೋಗಿ 2022ರ ಚುನಾವಣೆಯಲ್ಲಿ ಸೋತರೆ, 2024ರಲ್ಲಿ ಮೋದಿ ಸೋಲುವುದು ನಿಶ್ಚಿತ” ಎಂದು ಸಂಘದ ಪ್ರಚಾರಕ ಹೇಳಿದ್ದಾರೆ.

ಒಟ್ಟಾರೆ 2017 ರಲ್ಲಿ ಗೆಲುವಿನ ತುತ್ತತುದಿಗೆ ಏರಿದ್ದ ಬಿಜೆಪಿ ಈ ಬಾರಿ ಕೆಳಗೆ ಬೀಳುವುದು ಖಚಿತ ಎನ್ನುವ ಮಾತುಗಳು ಕೇಳಿ ಬಂದಿವೆ. ವಿವಾದಿತ ಕೃಷಿ ಕಾನೂನುಗಳ ವಿವಾದ, ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ, ಬಿಡಾಡಿ ದನಗಳ ಹಾವಳಿ ಮತ್ತು ನಿರುದ್ಯೋಗ ಯುಪಿಯ ಬಿಜೆಪಿ ಸರ್ಕಾರಕ್ಕೆ ಕಗ್ಗಂಟಾಗಿದೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...