Homeಮುಖಪುಟಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.

ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ’ಭಾರತೀಯ ಜನತಾ ಪಕ್ಷವು ಸೋಲುವುದು ಖಚಿತ ಮತ್ತು ಹೊಸ ಸರ್ಕಾರವನ್ನು ರಚಿಸುವುದಿಲ್ಲ. ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಆರಾಮವಾಗಿ 202 ಸ್ಥಾನಗಳನ್ನು ದಾಟುತ್ತವೆ ಮತ್ತು ತಮ್ಮದೇ ಆದ ಬಹುಮತವನ್ನು ಪಡೆಯುತ್ತವೆ. ಬೇರೆ ಪಕ್ಷಗಳ ಬೆಂಬಲದ ಅಗತ್ಯವಿಲ್ಲದೆ ಅವರು ಸರ್ಕಾರ ರಚಿಸುತ್ತಾರೆ” ಎಂದಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಮಾಜಿ ಉಪಕುಲಪತಿಯೂ ಆಗಿರುವ ನಜೀಬ್ ಜಂಗ್ ಯುಪಿಯಲ್ಲಿ ಬಿಜೆಪಿ ಸೋಲಿನತ್ತ ಸಾಗುತ್ತಿರುವುದಕ್ಕೆ ನಾಲ್ಕು ನಿರ್ಣಾಯಕ ಕಾರಣಗಳನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

ಮೊದಲನೆಯದು ಈ ಬಾರಿ ನರೇಂದ್ರ ಮೋದಿ ಅವರು ಬಿಜೆಪಿ ಪ್ರಚಾರದ ಮುಖವಾಗಿಲ್ಲ, ಅವರ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್  ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂಬುದು ಅತ್ಯಂತ ಮುಖ್ಯವಾದ ಅಂಶವಾಗಿದೆ. ಎರಡನೇಯದು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಅಸಮಾಧಾನ ಮತ್ತು ಕೋಪ. ಮೂರನೇಯದು ಬಿಡಾಡಿ ಹಸುಗಳ ವ್ಯಾಪಕ ಸಮಸ್ಯೆ ಮತ್ತು ಕೊನೆಯದಾಗಿ ನಿರುದ್ಯೋಗ.

ನಿರುದ್ಯೋಗ ಬಹುಶಃ ಇತರ ರಾಜ್ಯಗಳಿಗಿಂತ ಯುಪಿಯಲ್ಲಿ ಹೆಚ್ಚಾಗಿದ್ದು, ವಿಶೇಷವಾಗಿ ಯುವ ಜನತೆಯ ಮೇಲೆ ಪರಿಣಾಮ ಬೀರಿದೆ. ಇದರ ಜೊತೆಗೆ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಅಸಮರ್ಥ ನಿರ್ವಹಣೆ ಮತ್ತು ಅದು ಸೃಷ್ಟಿಸಿದ ಆಘಾತವನ್ನು ಇಲ್ಲಿನ ಜನ ಇನ್ನು  ಮರೆತಿಲ್ಲ ಎಂದಿದ್ದಾರೆ.

ಯೋಗಿ ಆದಿತ್ಯನಾಥ್‌ಗೆ ವ್ಯತಿರಿಕ್ತವಾಗಿ, ಅಖಿಲೇಶ್ ಯಾದವ್ ಅವರು ಹಿಂದುತ್ವದ ಸವಾಲನ್ನು ನಿಭಾಯಿಸಿದ್ದಾರೆ. ಅವರು ಯಾದವ್ ಒಬಿಸಿಗಳನ್ನು ಮಾತ್ರವಲ್ಲದೆ ಯಾದವೇತರ ಒಬಿಸಿಗಳನ್ನು ಆಕರ್ಷಿಸಿದ್ದಾರೆ. ಇದರಿಂದ ಬಿಜೆಪಿಯಿಂದ ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳಿಗೆ ಹಲವರು ಸೇರ್ಪಡೆಯಾಗಿದ್ದಾರೆ. ಇದರ ಜೊತೆಗೆ 80% ಅಥವಾ ಹೆಚ್ಚಿನ ಮುಸ್ಲಿಮರು ಸಮಾಜವಾದಿ ಪಕ್ಷಕ್ಕೆ ಮತ ಹಾಕುತ್ತಾರೆ (2017 ರಲ್ಲಿ 58%). ಮತ್ತೊಂದೆಡೆ, ಬ್ರಾಹ್ಮಣರು ಅಧಿಕ ಸಂಖ್ಯೆಯಲ್ಲಿ ಬಿಜೆಪಿಯಿಂದ ದೂರ ಸರಿದಿದ್ದಾರೆ. ಬಹುಶಃ ಕಾಂಗ್ರೆಸ್‌ಗೆ ಅವರು ಮತಹಾಕಲಿದ್ದು, ಅವರು ಸಮಾಜವಾದಿ ಪಕ್ಷಕ್ಕೆ ಮತ ಹಾಕುವ ಸಾಧ್ಯತೆ ಕಡಿಮೆ. ಇದು ಬಿಜೆಪಿಯನ್ನು ದುರ್ಬಲಗೊಳಿಸುವುದು ನಿಶ್ಚಿತ ಎಂದು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಇತ್ತ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉತ್ತರ ಪ್ರದೇಶದಲ್ಲಿ ನಡೆದಿರುವ ಎರಡನೇ ಹಂತದ ಮತದಾನದ ನಂತರ,  “ಬಿಜೆಪಿ ಮೊದಲ ಬಾರಿಗೆ ಎರಡು ಹಂತಗಳಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ” ಎಂದು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಲು ತಿಳಿಸಿದ್ದಾರೆ.

“ಮೊದಲ ಹಂತದಲ್ಲಿ ಬಿಜೆಪಿ ಕೇವಲ 17 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಎರಡನೇ ಹಂತದಲ್ಲಿ ಪಕ್ಷವು ಅಷ್ಟೇ ಕೆಟ್ಟದ್ದನ್ನು ಮಾಡಿದೆ” ಎಂದು ಭಾಗವತ್ ಅವರನ್ನು ಉಲ್ಲೇಖಿಸಿ ಆರ್‌ಎಸ್‌ಎಸ್ ಹಿರಿಯ ಕಾರ್ಯಕಾರಿಯೊಬ್ಬರು ಹೇಳಿದ್ದಾರೆ.

ಯುಪಿಯಲ್ಲಿ ಫೆಬ್ರವರಿ 10 ರಂದು ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 58 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017 ರಲ್ಲಿ ಬಿಜೆಪಿ ಈ ಪೈಕಿ 53 ಸ್ಥಾನಗಳನ್ನು ಗೆದ್ದಿದ್ದರೆ, ಆರೆಸ್ಸೆಸ್ ಐಬಿ ಇನ್‌ಪುಟ್ ಆಧರಿಸಿ ಈ ಬಾರಿ 17 ಸ್ಥಾನಗಳನ್ನು ಗೆಲ್ಲಲಿದೆ. ಫೆಬ್ರವರಿ 14 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಕನಿಷ್ಠ 55 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017ರಲ್ಲಿ ಬಿಜೆಪಿ ಈ ಪೈಕಿ 38 ಸ್ಥಾನಗಳನ್ನು ಗೆದ್ದಿತ್ತು ಮತ್ತು ಈ ಬಾರಿ ಅರ್ಧದಷ್ಟು ಸ್ಥಾನಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಆರ್‌ಎಸ್‌ಎಸ್‌ ಲೆಕ್ಕಾಚಾರ.

ಸಂಘದ ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ಮಾಡಲು ಮತ್ತು ಬಿಜೆಪಿಗೆ ಮತ ಹಾಕಲು ಹಿಂದೂಗಳನ್ನು ಪ್ರೇರೇಪಿಸಲು ಸಭೆಯಲ್ಲಿ ಕೇಳಿಕೊಳ್ಳಲಾಗಿದೆ. “ಇದು ತುಂಬಾ ಸ್ಪಷ್ಟವಾಗಿದೆ. ಯೋಗಿ 2022ರ ಚುನಾವಣೆಯಲ್ಲಿ ಸೋತರೆ, 2024ರಲ್ಲಿ ಮೋದಿ ಸೋಲುವುದು ನಿಶ್ಚಿತ” ಎಂದು ಸಂಘದ ಪ್ರಚಾರಕ ಹೇಳಿದ್ದಾರೆ.

ಒಟ್ಟಾರೆ 2017 ರಲ್ಲಿ ಗೆಲುವಿನ ತುತ್ತತುದಿಗೆ ಏರಿದ್ದ ಬಿಜೆಪಿ ಈ ಬಾರಿ ಕೆಳಗೆ ಬೀಳುವುದು ಖಚಿತ ಎನ್ನುವ ಮಾತುಗಳು ಕೇಳಿ ಬಂದಿವೆ. ವಿವಾದಿತ ಕೃಷಿ ಕಾನೂನುಗಳ ವಿವಾದ, ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ, ಬಿಡಾಡಿ ದನಗಳ ಹಾವಳಿ ಮತ್ತು ನಿರುದ್ಯೋಗ ಯುಪಿಯ ಬಿಜೆಪಿ ಸರ್ಕಾರಕ್ಕೆ ಕಗ್ಗಂಟಾಗಿದೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....