Homeಮುಖಪುಟಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.

ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ’ಭಾರತೀಯ ಜನತಾ ಪಕ್ಷವು ಸೋಲುವುದು ಖಚಿತ ಮತ್ತು ಹೊಸ ಸರ್ಕಾರವನ್ನು ರಚಿಸುವುದಿಲ್ಲ. ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಆರಾಮವಾಗಿ 202 ಸ್ಥಾನಗಳನ್ನು ದಾಟುತ್ತವೆ ಮತ್ತು ತಮ್ಮದೇ ಆದ ಬಹುಮತವನ್ನು ಪಡೆಯುತ್ತವೆ. ಬೇರೆ ಪಕ್ಷಗಳ ಬೆಂಬಲದ ಅಗತ್ಯವಿಲ್ಲದೆ ಅವರು ಸರ್ಕಾರ ರಚಿಸುತ್ತಾರೆ” ಎಂದಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಮಾಜಿ ಉಪಕುಲಪತಿಯೂ ಆಗಿರುವ ನಜೀಬ್ ಜಂಗ್ ಯುಪಿಯಲ್ಲಿ ಬಿಜೆಪಿ ಸೋಲಿನತ್ತ ಸಾಗುತ್ತಿರುವುದಕ್ಕೆ ನಾಲ್ಕು ನಿರ್ಣಾಯಕ ಕಾರಣಗಳನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

ಮೊದಲನೆಯದು ಈ ಬಾರಿ ನರೇಂದ್ರ ಮೋದಿ ಅವರು ಬಿಜೆಪಿ ಪ್ರಚಾರದ ಮುಖವಾಗಿಲ್ಲ, ಅವರ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್  ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂಬುದು ಅತ್ಯಂತ ಮುಖ್ಯವಾದ ಅಂಶವಾಗಿದೆ. ಎರಡನೇಯದು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಅಸಮಾಧಾನ ಮತ್ತು ಕೋಪ. ಮೂರನೇಯದು ಬಿಡಾಡಿ ಹಸುಗಳ ವ್ಯಾಪಕ ಸಮಸ್ಯೆ ಮತ್ತು ಕೊನೆಯದಾಗಿ ನಿರುದ್ಯೋಗ.

ನಿರುದ್ಯೋಗ ಬಹುಶಃ ಇತರ ರಾಜ್ಯಗಳಿಗಿಂತ ಯುಪಿಯಲ್ಲಿ ಹೆಚ್ಚಾಗಿದ್ದು, ವಿಶೇಷವಾಗಿ ಯುವ ಜನತೆಯ ಮೇಲೆ ಪರಿಣಾಮ ಬೀರಿದೆ. ಇದರ ಜೊತೆಗೆ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಅಸಮರ್ಥ ನಿರ್ವಹಣೆ ಮತ್ತು ಅದು ಸೃಷ್ಟಿಸಿದ ಆಘಾತವನ್ನು ಇಲ್ಲಿನ ಜನ ಇನ್ನು  ಮರೆತಿಲ್ಲ ಎಂದಿದ್ದಾರೆ.

ಯೋಗಿ ಆದಿತ್ಯನಾಥ್‌ಗೆ ವ್ಯತಿರಿಕ್ತವಾಗಿ, ಅಖಿಲೇಶ್ ಯಾದವ್ ಅವರು ಹಿಂದುತ್ವದ ಸವಾಲನ್ನು ನಿಭಾಯಿಸಿದ್ದಾರೆ. ಅವರು ಯಾದವ್ ಒಬಿಸಿಗಳನ್ನು ಮಾತ್ರವಲ್ಲದೆ ಯಾದವೇತರ ಒಬಿಸಿಗಳನ್ನು ಆಕರ್ಷಿಸಿದ್ದಾರೆ. ಇದರಿಂದ ಬಿಜೆಪಿಯಿಂದ ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳಿಗೆ ಹಲವರು ಸೇರ್ಪಡೆಯಾಗಿದ್ದಾರೆ. ಇದರ ಜೊತೆಗೆ 80% ಅಥವಾ ಹೆಚ್ಚಿನ ಮುಸ್ಲಿಮರು ಸಮಾಜವಾದಿ ಪಕ್ಷಕ್ಕೆ ಮತ ಹಾಕುತ್ತಾರೆ (2017 ರಲ್ಲಿ 58%). ಮತ್ತೊಂದೆಡೆ, ಬ್ರಾಹ್ಮಣರು ಅಧಿಕ ಸಂಖ್ಯೆಯಲ್ಲಿ ಬಿಜೆಪಿಯಿಂದ ದೂರ ಸರಿದಿದ್ದಾರೆ. ಬಹುಶಃ ಕಾಂಗ್ರೆಸ್‌ಗೆ ಅವರು ಮತಹಾಕಲಿದ್ದು, ಅವರು ಸಮಾಜವಾದಿ ಪಕ್ಷಕ್ಕೆ ಮತ ಹಾಕುವ ಸಾಧ್ಯತೆ ಕಡಿಮೆ. ಇದು ಬಿಜೆಪಿಯನ್ನು ದುರ್ಬಲಗೊಳಿಸುವುದು ನಿಶ್ಚಿತ ಎಂದು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಇತ್ತ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉತ್ತರ ಪ್ರದೇಶದಲ್ಲಿ ನಡೆದಿರುವ ಎರಡನೇ ಹಂತದ ಮತದಾನದ ನಂತರ,  “ಬಿಜೆಪಿ ಮೊದಲ ಬಾರಿಗೆ ಎರಡು ಹಂತಗಳಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ” ಎಂದು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಲು ತಿಳಿಸಿದ್ದಾರೆ.

“ಮೊದಲ ಹಂತದಲ್ಲಿ ಬಿಜೆಪಿ ಕೇವಲ 17 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಎರಡನೇ ಹಂತದಲ್ಲಿ ಪಕ್ಷವು ಅಷ್ಟೇ ಕೆಟ್ಟದ್ದನ್ನು ಮಾಡಿದೆ” ಎಂದು ಭಾಗವತ್ ಅವರನ್ನು ಉಲ್ಲೇಖಿಸಿ ಆರ್‌ಎಸ್‌ಎಸ್ ಹಿರಿಯ ಕಾರ್ಯಕಾರಿಯೊಬ್ಬರು ಹೇಳಿದ್ದಾರೆ.

ಯುಪಿಯಲ್ಲಿ ಫೆಬ್ರವರಿ 10 ರಂದು ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 58 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017 ರಲ್ಲಿ ಬಿಜೆಪಿ ಈ ಪೈಕಿ 53 ಸ್ಥಾನಗಳನ್ನು ಗೆದ್ದಿದ್ದರೆ, ಆರೆಸ್ಸೆಸ್ ಐಬಿ ಇನ್‌ಪುಟ್ ಆಧರಿಸಿ ಈ ಬಾರಿ 17 ಸ್ಥಾನಗಳನ್ನು ಗೆಲ್ಲಲಿದೆ. ಫೆಬ್ರವರಿ 14 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಕನಿಷ್ಠ 55 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017ರಲ್ಲಿ ಬಿಜೆಪಿ ಈ ಪೈಕಿ 38 ಸ್ಥಾನಗಳನ್ನು ಗೆದ್ದಿತ್ತು ಮತ್ತು ಈ ಬಾರಿ ಅರ್ಧದಷ್ಟು ಸ್ಥಾನಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಆರ್‌ಎಸ್‌ಎಸ್‌ ಲೆಕ್ಕಾಚಾರ.

ಸಂಘದ ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ಮಾಡಲು ಮತ್ತು ಬಿಜೆಪಿಗೆ ಮತ ಹಾಕಲು ಹಿಂದೂಗಳನ್ನು ಪ್ರೇರೇಪಿಸಲು ಸಭೆಯಲ್ಲಿ ಕೇಳಿಕೊಳ್ಳಲಾಗಿದೆ. “ಇದು ತುಂಬಾ ಸ್ಪಷ್ಟವಾಗಿದೆ. ಯೋಗಿ 2022ರ ಚುನಾವಣೆಯಲ್ಲಿ ಸೋತರೆ, 2024ರಲ್ಲಿ ಮೋದಿ ಸೋಲುವುದು ನಿಶ್ಚಿತ” ಎಂದು ಸಂಘದ ಪ್ರಚಾರಕ ಹೇಳಿದ್ದಾರೆ.

ಒಟ್ಟಾರೆ 2017 ರಲ್ಲಿ ಗೆಲುವಿನ ತುತ್ತತುದಿಗೆ ಏರಿದ್ದ ಬಿಜೆಪಿ ಈ ಬಾರಿ ಕೆಳಗೆ ಬೀಳುವುದು ಖಚಿತ ಎನ್ನುವ ಮಾತುಗಳು ಕೇಳಿ ಬಂದಿವೆ. ವಿವಾದಿತ ಕೃಷಿ ಕಾನೂನುಗಳ ವಿವಾದ, ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ, ಬಿಡಾಡಿ ದನಗಳ ಹಾವಳಿ ಮತ್ತು ನಿರುದ್ಯೋಗ ಯುಪಿಯ ಬಿಜೆಪಿ ಸರ್ಕಾರಕ್ಕೆ ಕಗ್ಗಂಟಾಗಿದೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...