Homeಮುಖಪುಟಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.

ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ’ಭಾರತೀಯ ಜನತಾ ಪಕ್ಷವು ಸೋಲುವುದು ಖಚಿತ ಮತ್ತು ಹೊಸ ಸರ್ಕಾರವನ್ನು ರಚಿಸುವುದಿಲ್ಲ. ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಆರಾಮವಾಗಿ 202 ಸ್ಥಾನಗಳನ್ನು ದಾಟುತ್ತವೆ ಮತ್ತು ತಮ್ಮದೇ ಆದ ಬಹುಮತವನ್ನು ಪಡೆಯುತ್ತವೆ. ಬೇರೆ ಪಕ್ಷಗಳ ಬೆಂಬಲದ ಅಗತ್ಯವಿಲ್ಲದೆ ಅವರು ಸರ್ಕಾರ ರಚಿಸುತ್ತಾರೆ” ಎಂದಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಮಾಜಿ ಉಪಕುಲಪತಿಯೂ ಆಗಿರುವ ನಜೀಬ್ ಜಂಗ್ ಯುಪಿಯಲ್ಲಿ ಬಿಜೆಪಿ ಸೋಲಿನತ್ತ ಸಾಗುತ್ತಿರುವುದಕ್ಕೆ ನಾಲ್ಕು ನಿರ್ಣಾಯಕ ಕಾರಣಗಳನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

ಮೊದಲನೆಯದು ಈ ಬಾರಿ ನರೇಂದ್ರ ಮೋದಿ ಅವರು ಬಿಜೆಪಿ ಪ್ರಚಾರದ ಮುಖವಾಗಿಲ್ಲ, ಅವರ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್  ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂಬುದು ಅತ್ಯಂತ ಮುಖ್ಯವಾದ ಅಂಶವಾಗಿದೆ. ಎರಡನೇಯದು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಅಸಮಾಧಾನ ಮತ್ತು ಕೋಪ. ಮೂರನೇಯದು ಬಿಡಾಡಿ ಹಸುಗಳ ವ್ಯಾಪಕ ಸಮಸ್ಯೆ ಮತ್ತು ಕೊನೆಯದಾಗಿ ನಿರುದ್ಯೋಗ.

ನಿರುದ್ಯೋಗ ಬಹುಶಃ ಇತರ ರಾಜ್ಯಗಳಿಗಿಂತ ಯುಪಿಯಲ್ಲಿ ಹೆಚ್ಚಾಗಿದ್ದು, ವಿಶೇಷವಾಗಿ ಯುವ ಜನತೆಯ ಮೇಲೆ ಪರಿಣಾಮ ಬೀರಿದೆ. ಇದರ ಜೊತೆಗೆ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಅಸಮರ್ಥ ನಿರ್ವಹಣೆ ಮತ್ತು ಅದು ಸೃಷ್ಟಿಸಿದ ಆಘಾತವನ್ನು ಇಲ್ಲಿನ ಜನ ಇನ್ನು  ಮರೆತಿಲ್ಲ ಎಂದಿದ್ದಾರೆ.

ಯೋಗಿ ಆದಿತ್ಯನಾಥ್‌ಗೆ ವ್ಯತಿರಿಕ್ತವಾಗಿ, ಅಖಿಲೇಶ್ ಯಾದವ್ ಅವರು ಹಿಂದುತ್ವದ ಸವಾಲನ್ನು ನಿಭಾಯಿಸಿದ್ದಾರೆ. ಅವರು ಯಾದವ್ ಒಬಿಸಿಗಳನ್ನು ಮಾತ್ರವಲ್ಲದೆ ಯಾದವೇತರ ಒಬಿಸಿಗಳನ್ನು ಆಕರ್ಷಿಸಿದ್ದಾರೆ. ಇದರಿಂದ ಬಿಜೆಪಿಯಿಂದ ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳಿಗೆ ಹಲವರು ಸೇರ್ಪಡೆಯಾಗಿದ್ದಾರೆ. ಇದರ ಜೊತೆಗೆ 80% ಅಥವಾ ಹೆಚ್ಚಿನ ಮುಸ್ಲಿಮರು ಸಮಾಜವಾದಿ ಪಕ್ಷಕ್ಕೆ ಮತ ಹಾಕುತ್ತಾರೆ (2017 ರಲ್ಲಿ 58%). ಮತ್ತೊಂದೆಡೆ, ಬ್ರಾಹ್ಮಣರು ಅಧಿಕ ಸಂಖ್ಯೆಯಲ್ಲಿ ಬಿಜೆಪಿಯಿಂದ ದೂರ ಸರಿದಿದ್ದಾರೆ. ಬಹುಶಃ ಕಾಂಗ್ರೆಸ್‌ಗೆ ಅವರು ಮತಹಾಕಲಿದ್ದು, ಅವರು ಸಮಾಜವಾದಿ ಪಕ್ಷಕ್ಕೆ ಮತ ಹಾಕುವ ಸಾಧ್ಯತೆ ಕಡಿಮೆ. ಇದು ಬಿಜೆಪಿಯನ್ನು ದುರ್ಬಲಗೊಳಿಸುವುದು ನಿಶ್ಚಿತ ಎಂದು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಇತ್ತ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉತ್ತರ ಪ್ರದೇಶದಲ್ಲಿ ನಡೆದಿರುವ ಎರಡನೇ ಹಂತದ ಮತದಾನದ ನಂತರ,  “ಬಿಜೆಪಿ ಮೊದಲ ಬಾರಿಗೆ ಎರಡು ಹಂತಗಳಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ” ಎಂದು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಲು ತಿಳಿಸಿದ್ದಾರೆ.

“ಮೊದಲ ಹಂತದಲ್ಲಿ ಬಿಜೆಪಿ ಕೇವಲ 17 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಎರಡನೇ ಹಂತದಲ್ಲಿ ಪಕ್ಷವು ಅಷ್ಟೇ ಕೆಟ್ಟದ್ದನ್ನು ಮಾಡಿದೆ” ಎಂದು ಭಾಗವತ್ ಅವರನ್ನು ಉಲ್ಲೇಖಿಸಿ ಆರ್‌ಎಸ್‌ಎಸ್ ಹಿರಿಯ ಕಾರ್ಯಕಾರಿಯೊಬ್ಬರು ಹೇಳಿದ್ದಾರೆ.

ಯುಪಿಯಲ್ಲಿ ಫೆಬ್ರವರಿ 10 ರಂದು ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 58 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017 ರಲ್ಲಿ ಬಿಜೆಪಿ ಈ ಪೈಕಿ 53 ಸ್ಥಾನಗಳನ್ನು ಗೆದ್ದಿದ್ದರೆ, ಆರೆಸ್ಸೆಸ್ ಐಬಿ ಇನ್‌ಪುಟ್ ಆಧರಿಸಿ ಈ ಬಾರಿ 17 ಸ್ಥಾನಗಳನ್ನು ಗೆಲ್ಲಲಿದೆ. ಫೆಬ್ರವರಿ 14 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಕನಿಷ್ಠ 55 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017ರಲ್ಲಿ ಬಿಜೆಪಿ ಈ ಪೈಕಿ 38 ಸ್ಥಾನಗಳನ್ನು ಗೆದ್ದಿತ್ತು ಮತ್ತು ಈ ಬಾರಿ ಅರ್ಧದಷ್ಟು ಸ್ಥಾನಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಆರ್‌ಎಸ್‌ಎಸ್‌ ಲೆಕ್ಕಾಚಾರ.

ಸಂಘದ ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ಮಾಡಲು ಮತ್ತು ಬಿಜೆಪಿಗೆ ಮತ ಹಾಕಲು ಹಿಂದೂಗಳನ್ನು ಪ್ರೇರೇಪಿಸಲು ಸಭೆಯಲ್ಲಿ ಕೇಳಿಕೊಳ್ಳಲಾಗಿದೆ. “ಇದು ತುಂಬಾ ಸ್ಪಷ್ಟವಾಗಿದೆ. ಯೋಗಿ 2022ರ ಚುನಾವಣೆಯಲ್ಲಿ ಸೋತರೆ, 2024ರಲ್ಲಿ ಮೋದಿ ಸೋಲುವುದು ನಿಶ್ಚಿತ” ಎಂದು ಸಂಘದ ಪ್ರಚಾರಕ ಹೇಳಿದ್ದಾರೆ.

ಒಟ್ಟಾರೆ 2017 ರಲ್ಲಿ ಗೆಲುವಿನ ತುತ್ತತುದಿಗೆ ಏರಿದ್ದ ಬಿಜೆಪಿ ಈ ಬಾರಿ ಕೆಳಗೆ ಬೀಳುವುದು ಖಚಿತ ಎನ್ನುವ ಮಾತುಗಳು ಕೇಳಿ ಬಂದಿವೆ. ವಿವಾದಿತ ಕೃಷಿ ಕಾನೂನುಗಳ ವಿವಾದ, ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ, ಬಿಡಾಡಿ ದನಗಳ ಹಾವಳಿ ಮತ್ತು ನಿರುದ್ಯೋಗ ಯುಪಿಯ ಬಿಜೆಪಿ ಸರ್ಕಾರಕ್ಕೆ ಕಗ್ಗಂಟಾಗಿದೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...