Homeಮುಖಪುಟಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್‌ಗೆ ಬೆಂಬಲಿಸಲು ವಾರಣಾಸಿಗೆ ತೆರಳಲಿರುವ ಮಮತಾ ಬ್ಯಾನರ್ಜಿ

ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್‌ಗೆ ಬೆಂಬಲಿಸಲು ವಾರಣಾಸಿಗೆ ತೆರಳಲಿರುವ ಮಮತಾ ಬ್ಯಾನರ್ಜಿ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷಕ್ಕೆ ತೃಣಮೂಲ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂಬ ಸೂಚನೆಯ ಬೆನ್ನಲ್ಲೇ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಮುಂದಿನ ತಿಂಗಳು ವಾರಣಾಸಿಗೆ ಭೇಟಿ ನೀಡುವ ಮುನ್ಸೂಚನೆ ದೊರಕಿದೆ.

“ಅಖಿಲೇಶ್ ಯಾದವ್‌ಗೆ ನಮ್ಮ ಸಹಾಯ ಬೇಕಾದರೆ ನಾವು ಸಹಾಯ ಮಾಡಲು ಸಿದ್ಧರಿದ್ದೇವೆ ಎಂದು ದೀದಿ (ಮಮತಾ ಬ್ಯಾನರ್ಜಿ) ಈಗಾಗಲೇ ದೆಹಲಿಯಲ್ಲಿ ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪರವಾಗಿ ಎಸ್‌ಪಿ ಹಿರಿಯ ನಾಯಕಿ ಜಯಾ ಬಚ್ಚನ್ ಮತ ಯಾಚಿಸಿದ್ದರು. ಅದಕ್ಕೆ ಪ್ರತಿಯಾಗಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡಲಾಗುವುದು” ಎಂದು ಲಲಿತೇಶಪತಿ ತ್ರಿಪಾಠಿ ಹೇಳಿದ್ದಾರೆ. ಲಲಿತೇಶಪತಿ ತ್ರಿಪಾಠಿ ಇತ್ತೀಚೆಗೆ ತೃಣಮೂಲ ಕಾಂಗ್ರೆಸ್‌ಗೆ ಸೇರಿದವರು.

“ನಮ್ಮ ಗುರಿ ಒಂದೇ ಆಗಿದೆ. ಈ ಶಕ್ತಿಗಳನ್ನು (ಬಿಜೆಪಿ ನೇತೃತ್ವದ) ಸೋಲಿಸುವುದಕ್ಕೆ ಒಂದಾಗುತ್ತೆವೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಹೋರಾಟದಲ್ಲಿ ನಾವು ಸಹ ಇದ್ದೇವೆ. ಮಮತಾ ಬ್ಯಾನರ್ಜಿ ಬಹುಶಃ ಜನವರಿ ಎರಡನೇ ವಾರದಲ್ಲಿ ವಾರಣಾಸಿಗೆ ಭೇಟಿ ನೀಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್ ಬಿಜೆಪಿಯ 12 ಬಂಡಾಯ ನಾಯಕರು ಕೋಲ್ಕತ್ತಾದಲ್ಲಿ: ಟಿಎಂಸಿ ಸೇರುವ ಸಾಧ್ಯತೆ

“ಟಿಎಂಸಿ ಸಭೆಗಳನ್ನು ನಡೆಸುತ್ತಿದ್ದು, ಉತ್ತರ ಪ್ರದೇಶದಲ್ಲಿ ತನ್ನನ್ನು ಹೇಗೆ ಬಲಪಡಿಸಿಕೊಳ್ಳಬೇಕೆಂದು ಚರ್ಚಿಸುತ್ತಿದೆ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ವಾರಣಾಸಿ ಭೇಟಿಗೆ ಸಂಬಂಧಿಸಿದಂತೆ, ದಿನಾಂಕ ಅಂತಿಮಗೊಳಿಸಿಲ್ಲ. ಡಿಸೆಂಬರ್‌ನಲ್ಲಿ ಅವರು ಯುಪಿಗೆ ಹೋಗಬೇಕು ಎಂದು ನಾವು ಯೋಚಿಸಿದ್ದೆವು. ಆದರೆ ಹಲವು ಕಾರ್ಯ‌ಕ್ರಮಗಳಿಂದಾಗಿ ಅದು ಸಾಧ್ಯವಾಗುತ್ತಿಲ್ಲ” ಎಂದಿದ್ದಾರೆ.

“ತೃಣಮೂಲದ ತಕ್ಷಣದ ಗಮನ ಉತ್ತರ ಪ್ರದೇಶದ ಮೇಲಿಲ್ಲ. ಸದ್ಯಕ್ಕೆ ಗೋವಾ ಮತ್ತು ತ್ರಿಪುರ ರಾಜ್ಯಗಳ ಮೇಲೆ ಟಿಎಂಸಿ ಹಚ್ಚು ಗಮನವಿಡುತ್ತಿದೆ. ಹೀಗಾಗಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ” ಎಂದು ತ್ರಿಪಾಠಿ ಹೇಳಿದ್ದಾರೆ.

ತೃಣಮೂಲದಲ್ಲಿ ಹೊಸ ಸದಸ್ಯರ ಸೇರ್ಪಡೆಯ ಮೊದಲ ಹಂತವು ವಾರಣಾಸಿ ನಗರದಲ್ಲಿ ನಡೆಯಲಿರುವುದರಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾರಣಾಸಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಎಸ್‌ಪಿಯ ರಾಷ್ಟ್ರೀಯ ಉಪಾಧ್ಯಕ್ಷ ಕಿರಣ್‌ಮೋಯ್ ನಂದಾ “ನಾವು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸಿದ್ದೇವೆ. ಚುನಾವಣೆಯಲ್ಲಿ ನಾನೇ ಅವರ ಪರವಾಗಿ ಪ್ರಚಾರ ಮಾಡಿದ್ದೇನೆ. ನಾವು ಬಿಜೆಪಿಯನ್ನು ಸೋಲಿಸಲು ಬಯಸುತ್ತೇವೆ. ದೀದಿ ಕೂಡ ಬಿಜೆಪಿಯನ್ನು ಸೋಲಿಸಲು ಬಯಸುತ್ತಾರೆ. ಅವರು ನಮ್ಮನ್ನು ಬೆಂಬಲಿಸಿದರೆ ಅದನ್ನು ಸಂತೋಷದಿಂದ ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಮತಾ ಬ್ಯಾನರ್ಜಿ ಅಖಿಲೇಶ್ ಯಾದವ್ ಗೆ ರಾಜಕೀಯ ತಂತ್ರ ಏನು ಹೇಳಬಹುದು UP ಚುನಾವಣಾ ಪ್ರಚಾರದಲ್ಲಿ !ಮಮತಾ ತರಾನೆ ಕೈ ಕಾಲು ಮುರಿದಿದೆ ಅಂತ ಪ್ರಚಾರ ಮಾಡಿ ಅನ್ನಬಹುದೆ !ಅಥವಾ ಯಾದವ್ ಗೆ ಉತ್ತರ ಪ್ರದೇಶದ ಯೋಗಿ ಆಳ್ವಿಕೆ ನೋಡಿ ಹಾರ್ಟ್ ಅಟಾಕ್ ಆಗ್ತಿದೆ ಅಂತ ಪ್ರಚಾರ ಮಾಡಿ ಅಂತ ಹೇಳಬಹುದ! ಯಕ್ಷಪ್ರಶ್ನೇಯಾಗಿದೆ ಜನರಿಗೆ .

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...