Homeಮುಖಪುಟರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

- Advertisement -
- Advertisement -

ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಬುಧವಾರ (ಫೆ.23) ನಡೆಯುತ್ತಿದೆ. ಈ ಹಿನ್ನೆಲೆ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರು ನೂರಾರು ಪೊಲೀಸರು ಮತ್ತು ಅರೆಸೇನಾ ಸಿಬ್ಬಂದಿ ಜೊತೆಗೆ ಲಖಿಂಪುರದ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.

ಈ ವೇಳೆ ಕಳೆದ ವರ್ಷ ಲಖಿಂಪುರ್‌ ಖೇರಿಯಲ್ಲಿ ರೈತರ ಹತ್ಯಾಕಾಂಡ ನಡೆಸಿರುವ ಪ್ರಕರಣದ ಪ್ರಮುಖ ಆರೋಪಿ ಅಜಯ್ ಮಿಶ್ರಾ ಮಗ  ಆಶಿಶ್ ಮಿಶ್ರಾ ಕುರಿತು ಪ್ರಶ್ನಿಸಿದ ಮಾಧ್ಯಮದವರಿಗೆ ಗೆಲುವಿನ ಚಿಹ್ನೆ ತೋರಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 3 ರಂದು ನಾಲ್ವರು ರೈತರು ಸೇರಿದಂತೆ ಎಂಟು ಜನರ ಹತ್ಯಾಕಾಂಡಕ್ಕೆ ಕಾರಣವಾದ ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾಗೆ ಜಾಮೀನು ನೀಡಲಾಗಿದೆ. ಕಳೆದ ವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಬಿಜೆಪಿ ಮೇಲೆ ಈಗಾಗಲೇ ಆಕ್ರೋಶ ವ್ಯಕ್ತಪಡಿಸಿರುವ ಲಖಿಂಪುರ್‌ ಕೇರಿ ಜನರ ಮಧ್ಯೆ ಮತಹಾಕಲು ಸಚಿವ ಸಂಪೂರ್ಣ ಪೊಲೀಸ್ ಬಂದೋಬಸ್ತ್‌ನಲ್ಲಿ ಬಂದಿದ್ದಾರೆ. ಪೊಲೀಸರು ಮತ್ತು ಅರೆಸೇನಾ ಸಿಬ್ಬಂದಿ ತಡೆಗೊಡೆ ರಚಿಸಿಕೊಂಡು ಸಚಿವರನ್ನು ಮತಗಟ್ಟೆ ಕರೆತಂದು, ವಾಪಸ್ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕರಾಗಿರುವ ಅಜಯ್ ಮಿಶ್ರಾ ಅವರು ಪೂರ್ವ ಯುಪಿಯಲ್ಲಿ ಅದರಲ್ಲೂ ವಿಶೇಷವಾಗಿ ಲಖಿಂಪುರದಲ್ಲಿ ಭಾರಿ ಪ್ರಭಾವವನ್ನು ಹೊಂದಿದ್ದರು. ಆದರೆ, ತಮ್ಮ ಕೊಲೆ ಆರೋಪಿ ಮಗನ ಕುರಿತ ಮಾಧ್ಯಮಗಳ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿಲ್ಲ. ಜೊತೆಗೆ ಕಳೆದ ವರ್ಷ ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಕೂಡ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮತಗಟ್ಟೆಗೆ ಬರಲು ತನ್ನೊಂದಿಗೆ ಇಷ್ಟೊಂದು ಭದ್ರತೆಯನ್ನು ಪಡೆದುಕೊಂಡಿರವ ಸಚಿವ ಅಜಯ್‌ ಮಿಶ್ರಾ ತೆನಿ ಅವರ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು. ಈಗ ಜಾಮೀನು ನೀಡಲಾಗಿದೆ.

ಉತ್ತರ ಪ್ರದೇಶದಲ್ಲಿ ಇಂದು  ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಇನ್ನೂ ಮೂರು ಹಂತದ ಬಾಕಿಯಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...