Homeಮುಖಪುಟಯುಪಿ ಚುನಾವಣೆ: ಯೋಗಿ ಆದಿತ್ಯನಾಥ್ ಸಂಪುಟದ ಮೂರನೇ ಸಚಿವ ರಾಜೀನಾಮೆ

ಯುಪಿ ಚುನಾವಣೆ: ಯೋಗಿ ಆದಿತ್ಯನಾಥ್ ಸಂಪುಟದ ಮೂರನೇ ಸಚಿವ ರಾಜೀನಾಮೆ

ಇವರೆಗೆ 8 ಮಂದಿ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದು, ಇವರೆಲ್ಲರೂ ಸಮಾಜವಾದಿ ಪಾರ್ಟಿ ಸೇರುವ ಸಾಧ್ಯತೆಯಿದೆ.

- Advertisement -
- Advertisement -

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ತನ್ನ ಸಚಿವ ಸಂಪುಟದಿಂದ ಇಂದು ಮೂರನೇ ಸಚಿವ ಮತ್ತು ಹಿಂದುಳಿದ ವರ್ಗದ ನಾಯಕ ಧರಂ ಸಿಂಗ್ ಸೈನಿ ಅವರನ್ನು ಕಳೆದುಕೊಂಡಿದೆ. ಬಿಜೆಪಿಯನ್ನು ಬಿಡುವುದಿಲ್ಲ ಎಂದು ಹೇಳಿದ 24 ಗಂಟೆಯಲ್ಲೇ ರಾಜೀನಾಮೆ ನೀಡಿದ್ದಾರೆ.

ಮುಂದಿನ ತಿಂಗಳು ಚುನಾವಣೆ ಎದುರಿಸಲು ಸಿದ್ಧವಾಗಿರುವ ಬಿಜೆಪಿಗೆ ಮೂರು ದಿನಗಳಿಂದ ದೊಡ್ಡ ಆಘಾತ ಉಂಟಾಗುತ್ತಲೇ ಇದೆ. ಉತ್ತರ ಪ್ರದೇಶ ಬಿಜೆಪಿಗೆ ರಾಜೀನಾಮೆ ನೀಡಿರುವ ಎಂಟನೇ ನಾಯಕ ಇವರಾಗಿದ್ದಾರೆ. ಇವರೆಲ್ಲರೂ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಸೇರುವ ಸಾಧ್ಯತೆ ಇದೆ.

ಕೇವಲ 24 ಗಂಟೆಗಳ ಹಿಂದೆ ಮಾತನಾಡಿದ್ದ ಧರಂ ಸಿಂಗ್ ಸೈನಿ, ಬಿಜೆಪಿಗೆ ರಾಜೀನಾಮೆ ನೀಡುವ ವದಂತಿಗಳನ್ನು ತಳ್ಳಿಹಾಕಿದ್ದರು.

ಇದನ್ನೂ ಓದಿ: ಯುಪಿ ಬಿಜೆಪಿಗೆ ಮತ್ತೊಂದು ಆಘಾತ: ಮತ್ತೊಬ್ಬ ಒಬಿಸಿ ನಾಯಕ ಮುಖೇಶ್ ವರ್ಮಾ ರಾಜೀನಾಮೆ

ಪ್ರಮುಖ ಒಬಿಸಿ (ಹಿಂದುಳಿದ ವರ್ಗ) ನಾಯಕರಾದ ಧರಂ ಸಿಂಗ್ ಸೈನಿ, ಸಹರಾನ್‌ಪುರದ ನಕುಡ್‌ನಿಂದ ನಾಲ್ಕು ಬಾರಿ ಶಾಸಕರಾಗಿದ್ದರು. ಈ ಹಿಂದೆ ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದಲ್ಲಿದ್ದ ಅವರು ಸ್ವಾಮಿ ಪ್ರಸಾದ್ ಮೌರ್ಯ ಅವರೊಂದಿಗೆ 2016 ರಲ್ಲಿ ಬಿಜೆಪಿ ಸೇರಿದ್ದರು.

ಬುಧವಾರವಷ್ಟೇ ಬಿಜೆಪಿ ತೊರೆದಿರುವ ಸ್ವಾಮಿ ಪ್ರಸಾದ್ ಮೌರ್ಯ ಅವರ ಮೇಲೆ ಕಿಡಿಕಾರಿದ್ದರು. “ನಾನು ಬಿಜೆಪಿಯಲ್ಲಿದ್ದೇನೆ ಮುಂದೆಯೂ ಇರುತ್ತೇನೆ. ನಾನು ಪಕ್ಷವನ್ನು ತೊರೆಯುವುದಿಲ್ಲ” ಎಂದು ವಿಡಿಯೊದಲ್ಲಿ ಹೇಳಿದ್ದರು.

ಈಗ ರಾಜೀನಾಮೆ ಸಲ್ಲಿಸಿರುವ ಅವರು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ.

ಟ್ವೀಟ್‌ನಲ್ಲಿ ಫೋಟೋ ಹಂಚಿಕೊಡಿರುವ ಅಖಿಲೇಶ್ ಯಾದವ್, ‘ಸಾಮಾಜಿಕ ನ್ಯಾಯ’ದ ಮತ್ತೋರ್ವ ಯೋಧ ಡಾ.ಧರಂ ಸಿಂಗ್ ಸೈನಿ ಜಿ ಅವರ ಆಗಮನದಿಂದ ನಮ್ಮ ‘ಸಕಾರಾತ್ಮಕ ಮತ್ತು ಪ್ರಗತಿಪರ ರಾಜಕಾರಣ’ಕ್ಕೆ ಇನ್ನಷ್ಟು ಉತ್ಸಾಹ, ಶಕ್ತಿ ಬಂದಿದೆ. ಅವರಿಗೆ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು!’ ಎಂದಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022 ಏಳು ಹಂತಗಳಲ್ಲಿ ನಡೆಯಲಿದೆ. ಫೆಬ್ರವರಿ 10 ರಿಂದ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಸಚಿವ ಸ್ಥಾನ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...