Homeಮುಖಪುಟವಿರೋಧಿಗಳ ವಾಗ್ದಾಳಿಗೆ ಹೆದರುವುದಿಲ್ಲ: ರೂಪದರ್ಶಿ, ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್

ವಿರೋಧಿಗಳ ವಾಗ್ದಾಳಿಗೆ ಹೆದರುವುದಿಲ್ಲ: ರೂಪದರ್ಶಿ, ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್

- Advertisement -
- Advertisement -

ಉತ್ತರ ಪ್ರದೇಶದ ಹಸ್ತಿನಾಪುರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಟಿ ಮತ್ತು ರೂಪದರ್ಶಿ ಅರ್ಚನಾ ಗೌತಮ್ ಅವರ ಹಳೆಯ ಬಿಕಿನಿ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ಜೊತೆಗೆ ಪ್ರತಿಸ್ಪರ್ಧಿ ಬಿಜೆಪಿ ಕೂಡ ಅವರ ಆಯ್ಕೆಯನ್ನು ಟೀಕಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅರ್ಚನಾ ಅವರು ಈ ದಾಳಿಯಿಂದ ನಾನು ಭಯಪಟ್ಟಿಲ್ಲ, ಮುಂದುವರೆಯುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಧೈರ್ಯದ ಮಾತುಗಳಿಂದ ಮತ್ತಷ್ಟು ಧೈರ್ಯಶಾಲಿಯಾಗಿ ಮುಂದುವರೆಯಲಿದ್ದೇನೆ ಎಂದಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ 26 ವರ್ಷದ ನಟಿ, ರೂಪದರ್ಶಿ, ಮಿಸ್ ಬಿಕಿನಿ ಇಂಡಿಯಾ 2018 ಮತ್ತು ಮಿಸ್ ಯುಪಿ 2014 ಕೀರಿಟವನ್ನು ಮುಡಿಗೆರಿಸಿಕೊಂಡಿದ್ದಾರೆ. ಇವರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಇವರ ಹಳೆಯ ಬಿಕಿನಿ ಪೋಟೋಗಳು ವೈರಲ್ ಆಗಿವೆ. ಬಿಜೆಪಿ ಮತ್ತು ಹಿಂದೂ ಮಹಾಸಭಾದಂತಹ ಗುಂಪುಗಳು ಆಕೆಯ ಚಿತ್ರಗಳನ್ನು ಬೊಟ್ಟು ಮಾಡಿ ಅವಹೇಳನಕಾರಿ ಕಾಮೆಂಟ್ ಮಾಡಿವೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಕಳೆದ ವರ್ಷ ನವೆಂಬರ್‌ನಲ್ಲಿ ಕಾಂಗ್ರೆಸ್‌ಗೆ ಸೇರಿರುವ ಅರ್ಚನಾ, “ನಾನು ಪ್ರಿಯಾಂಕಾ ದೀದಿಯೊಂದಿಗೆ ಮಾತನಾಡಿದಾಗ, ಅವರು ನನಗೆ ಹೇಳಿದರು, ಅರ್ಚನಾ, ನೀವು ಈ ಜಗತ್ತಿಗೆ ಕಾಲಿಡುತ್ತಿದ್ದೀರಿ ಆದರೆ ಅರೆಮನಸ್ಸಿನಿಂದ ಬರಬೇಡಿ, ನಿಮ್ಮ ಚಿತ್ರಗಳು ಮತ್ತು ವೀಡಿಯೊಗಳಿಂದ ನಿಮ್ಮನ್ನು ಟ್ರೋಲ್ ಮಾಡಲಾಗುತ್ತದೆ. ಆದರೆ ನೀವು ಭಯಪಡಬೇಕಾಗಿಲ್ಲ, ನೀವು ಧೈರ್ಯವಾಗಿರಬೇಕು ಎಂದಿದ್ದರು. ಹೀಗಾಗಿ ಪ್ರಿಯಾಂಕಾ ದೀದಿಯ ಮಾತುಗಳಿಂದ ನಾನು ಮೊದಲಿನಿಂದಲೇ ಧೈರ್ಯಶಾಲಿಯಾಗಿದ್ದೇನೆ. ನಾನು ಮುಂದೆ ಸಾಗುತ್ತೇನೆ” ಎಂದಿದ್ದಾರೆ.

“ನನ್ನ ಬಗ್ಗೆ ನಿಂದನೆ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವ ಜನರಿಗೆ ನಾನು ಹೇಳುವುದೇನಂದರೆ, ನಾನು ಎರಡು ವೃತ್ತಿಪರ ಜೀವನವನ್ನು ಹೊಂದಿದ್ದೇನೆ. ಎರಡು ಪರಸ್ಪರ ಭಿನ್ನವಾಗಿವೆ. ನಾನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದೇನೆ. ಈ ಎರಡನ್ನೂ ಬೆರೆಸಬಾರದು ಎಂದು ನಾನು ಬಯಸುತ್ತೇನೆ” ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಹಸ್ತಿನಾಪುರದಲ್ಲಿ ದ್ರೌಪದಿ ಕಥನವನ್ನು ಪುನಃ ಬರೆಯುವುದಾಗಿ ಹೇಳಿರುವ ಅವರು, “ನಾನು ಈ ನಗರದಲ್ಲಿ ಹುಟ್ಟಿ ಬೆಳೆದಿರುವ ಕಾರಣ ಇಲ್ಲಿ ಬದಲಾವಣೆಯನ್ನು ತರಬಲ್ಲೆ ಎಂದು ನನಗೆ ವಿಶ್ವಾಸವಿದೆ. ನಾನು ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂಬೈನಿಂದ ಹಾರಿ ಬಂದವಳಲ್ಲ. ನನಗೆ ಇಲ್ಲೇ ಮನೆ ಇದೆ. ನಾನು ಇಲ್ಲೇ ವಿದ್ಯಾಭ್ಯಾಸ ಮಾಡಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಗೋರಖ್‌ಪುರದಿಂದ ಆದಿತ್ಯನಾಥ್‌‌ ಸ್ಪರ್ಧೆ

ಅರ್ಚನಾ ಗೌತಮ್ ಅವರ ಆಯ್ಕೆಯು ಕಾಂಗ್ರೆಸ್‌ಗೆ ಅಭ್ಯರ್ಥಿಗಳಿಲ್ಲ ಎಂದು ತೋರಿಸುತ್ತದೆ. ಕೀಳು ಮಟ್ಟದ ಪ್ರಚಾರಕ್ಕಾಗಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ಹೇಳಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾ ಮತ್ತು ಸಂತ ಮಹಾಸಭಾ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ, “ಮಾನಸಿಕವಾಗಿ ದಿವಾಳಿಯಾಗಿರುವ ಪಕ್ಷದಿಂದ ಏನನ್ನೂ ನಿರೀಕ್ಷಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್, ಯುವತಿಯ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದಿದೆ. “ಬೇರೆ ಮಹಿಳೆಯಂತೆ ಅವರು ನಮ್ಮ ಗೌರವಕ್ಕೆ ಅರ್ಹರು. ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರು ತಮ್ಮ ಮಹಿಳಾ ವಿರೋಧಿ ನಿಲುವನ್ನು ಮಾತ್ರ ಪ್ರದರ್ಶಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ನವದೆಹಲಿಯಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...