Homeಮುಖಪುಟವಿರೋಧಿಗಳ ವಾಗ್ದಾಳಿಗೆ ಹೆದರುವುದಿಲ್ಲ: ರೂಪದರ್ಶಿ, ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್

ವಿರೋಧಿಗಳ ವಾಗ್ದಾಳಿಗೆ ಹೆದರುವುದಿಲ್ಲ: ರೂಪದರ್ಶಿ, ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್

- Advertisement -
- Advertisement -

ಉತ್ತರ ಪ್ರದೇಶದ ಹಸ್ತಿನಾಪುರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಟಿ ಮತ್ತು ರೂಪದರ್ಶಿ ಅರ್ಚನಾ ಗೌತಮ್ ಅವರ ಹಳೆಯ ಬಿಕಿನಿ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ಜೊತೆಗೆ ಪ್ರತಿಸ್ಪರ್ಧಿ ಬಿಜೆಪಿ ಕೂಡ ಅವರ ಆಯ್ಕೆಯನ್ನು ಟೀಕಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅರ್ಚನಾ ಅವರು ಈ ದಾಳಿಯಿಂದ ನಾನು ಭಯಪಟ್ಟಿಲ್ಲ, ಮುಂದುವರೆಯುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಧೈರ್ಯದ ಮಾತುಗಳಿಂದ ಮತ್ತಷ್ಟು ಧೈರ್ಯಶಾಲಿಯಾಗಿ ಮುಂದುವರೆಯಲಿದ್ದೇನೆ ಎಂದಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ 26 ವರ್ಷದ ನಟಿ, ರೂಪದರ್ಶಿ, ಮಿಸ್ ಬಿಕಿನಿ ಇಂಡಿಯಾ 2018 ಮತ್ತು ಮಿಸ್ ಯುಪಿ 2014 ಕೀರಿಟವನ್ನು ಮುಡಿಗೆರಿಸಿಕೊಂಡಿದ್ದಾರೆ. ಇವರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಇವರ ಹಳೆಯ ಬಿಕಿನಿ ಪೋಟೋಗಳು ವೈರಲ್ ಆಗಿವೆ. ಬಿಜೆಪಿ ಮತ್ತು ಹಿಂದೂ ಮಹಾಸಭಾದಂತಹ ಗುಂಪುಗಳು ಆಕೆಯ ಚಿತ್ರಗಳನ್ನು ಬೊಟ್ಟು ಮಾಡಿ ಅವಹೇಳನಕಾರಿ ಕಾಮೆಂಟ್ ಮಾಡಿವೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಕಳೆದ ವರ್ಷ ನವೆಂಬರ್‌ನಲ್ಲಿ ಕಾಂಗ್ರೆಸ್‌ಗೆ ಸೇರಿರುವ ಅರ್ಚನಾ, “ನಾನು ಪ್ರಿಯಾಂಕಾ ದೀದಿಯೊಂದಿಗೆ ಮಾತನಾಡಿದಾಗ, ಅವರು ನನಗೆ ಹೇಳಿದರು, ಅರ್ಚನಾ, ನೀವು ಈ ಜಗತ್ತಿಗೆ ಕಾಲಿಡುತ್ತಿದ್ದೀರಿ ಆದರೆ ಅರೆಮನಸ್ಸಿನಿಂದ ಬರಬೇಡಿ, ನಿಮ್ಮ ಚಿತ್ರಗಳು ಮತ್ತು ವೀಡಿಯೊಗಳಿಂದ ನಿಮ್ಮನ್ನು ಟ್ರೋಲ್ ಮಾಡಲಾಗುತ್ತದೆ. ಆದರೆ ನೀವು ಭಯಪಡಬೇಕಾಗಿಲ್ಲ, ನೀವು ಧೈರ್ಯವಾಗಿರಬೇಕು ಎಂದಿದ್ದರು. ಹೀಗಾಗಿ ಪ್ರಿಯಾಂಕಾ ದೀದಿಯ ಮಾತುಗಳಿಂದ ನಾನು ಮೊದಲಿನಿಂದಲೇ ಧೈರ್ಯಶಾಲಿಯಾಗಿದ್ದೇನೆ. ನಾನು ಮುಂದೆ ಸಾಗುತ್ತೇನೆ” ಎಂದಿದ್ದಾರೆ.

“ನನ್ನ ಬಗ್ಗೆ ನಿಂದನೆ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವ ಜನರಿಗೆ ನಾನು ಹೇಳುವುದೇನಂದರೆ, ನಾನು ಎರಡು ವೃತ್ತಿಪರ ಜೀವನವನ್ನು ಹೊಂದಿದ್ದೇನೆ. ಎರಡು ಪರಸ್ಪರ ಭಿನ್ನವಾಗಿವೆ. ನಾನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದೇನೆ. ಈ ಎರಡನ್ನೂ ಬೆರೆಸಬಾರದು ಎಂದು ನಾನು ಬಯಸುತ್ತೇನೆ” ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಹಸ್ತಿನಾಪುರದಲ್ಲಿ ದ್ರೌಪದಿ ಕಥನವನ್ನು ಪುನಃ ಬರೆಯುವುದಾಗಿ ಹೇಳಿರುವ ಅವರು, “ನಾನು ಈ ನಗರದಲ್ಲಿ ಹುಟ್ಟಿ ಬೆಳೆದಿರುವ ಕಾರಣ ಇಲ್ಲಿ ಬದಲಾವಣೆಯನ್ನು ತರಬಲ್ಲೆ ಎಂದು ನನಗೆ ವಿಶ್ವಾಸವಿದೆ. ನಾನು ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂಬೈನಿಂದ ಹಾರಿ ಬಂದವಳಲ್ಲ. ನನಗೆ ಇಲ್ಲೇ ಮನೆ ಇದೆ. ನಾನು ಇಲ್ಲೇ ವಿದ್ಯಾಭ್ಯಾಸ ಮಾಡಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಗೋರಖ್‌ಪುರದಿಂದ ಆದಿತ್ಯನಾಥ್‌‌ ಸ್ಪರ್ಧೆ

ಅರ್ಚನಾ ಗೌತಮ್ ಅವರ ಆಯ್ಕೆಯು ಕಾಂಗ್ರೆಸ್‌ಗೆ ಅಭ್ಯರ್ಥಿಗಳಿಲ್ಲ ಎಂದು ತೋರಿಸುತ್ತದೆ. ಕೀಳು ಮಟ್ಟದ ಪ್ರಚಾರಕ್ಕಾಗಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ಹೇಳಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾ ಮತ್ತು ಸಂತ ಮಹಾಸಭಾ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ, “ಮಾನಸಿಕವಾಗಿ ದಿವಾಳಿಯಾಗಿರುವ ಪಕ್ಷದಿಂದ ಏನನ್ನೂ ನಿರೀಕ್ಷಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್, ಯುವತಿಯ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದಿದೆ. “ಬೇರೆ ಮಹಿಳೆಯಂತೆ ಅವರು ನಮ್ಮ ಗೌರವಕ್ಕೆ ಅರ್ಹರು. ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರು ತಮ್ಮ ಮಹಿಳಾ ವಿರೋಧಿ ನಿಲುವನ್ನು ಮಾತ್ರ ಪ್ರದರ್ಶಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ನವದೆಹಲಿಯಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...