Homeಮುಖಪುಟವಿರೋಧಿಗಳ ವಾಗ್ದಾಳಿಗೆ ಹೆದರುವುದಿಲ್ಲ: ರೂಪದರ್ಶಿ, ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್

ವಿರೋಧಿಗಳ ವಾಗ್ದಾಳಿಗೆ ಹೆದರುವುದಿಲ್ಲ: ರೂಪದರ್ಶಿ, ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್

- Advertisement -
- Advertisement -

ಉತ್ತರ ಪ್ರದೇಶದ ಹಸ್ತಿನಾಪುರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಟಿ ಮತ್ತು ರೂಪದರ್ಶಿ ಅರ್ಚನಾ ಗೌತಮ್ ಅವರ ಹಳೆಯ ಬಿಕಿನಿ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ಜೊತೆಗೆ ಪ್ರತಿಸ್ಪರ್ಧಿ ಬಿಜೆಪಿ ಕೂಡ ಅವರ ಆಯ್ಕೆಯನ್ನು ಟೀಕಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅರ್ಚನಾ ಅವರು ಈ ದಾಳಿಯಿಂದ ನಾನು ಭಯಪಟ್ಟಿಲ್ಲ, ಮುಂದುವರೆಯುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಧೈರ್ಯದ ಮಾತುಗಳಿಂದ ಮತ್ತಷ್ಟು ಧೈರ್ಯಶಾಲಿಯಾಗಿ ಮುಂದುವರೆಯಲಿದ್ದೇನೆ ಎಂದಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ 26 ವರ್ಷದ ನಟಿ, ರೂಪದರ್ಶಿ, ಮಿಸ್ ಬಿಕಿನಿ ಇಂಡಿಯಾ 2018 ಮತ್ತು ಮಿಸ್ ಯುಪಿ 2014 ಕೀರಿಟವನ್ನು ಮುಡಿಗೆರಿಸಿಕೊಂಡಿದ್ದಾರೆ. ಇವರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಇವರ ಹಳೆಯ ಬಿಕಿನಿ ಪೋಟೋಗಳು ವೈರಲ್ ಆಗಿವೆ. ಬಿಜೆಪಿ ಮತ್ತು ಹಿಂದೂ ಮಹಾಸಭಾದಂತಹ ಗುಂಪುಗಳು ಆಕೆಯ ಚಿತ್ರಗಳನ್ನು ಬೊಟ್ಟು ಮಾಡಿ ಅವಹೇಳನಕಾರಿ ಕಾಮೆಂಟ್ ಮಾಡಿವೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಕಳೆದ ವರ್ಷ ನವೆಂಬರ್‌ನಲ್ಲಿ ಕಾಂಗ್ರೆಸ್‌ಗೆ ಸೇರಿರುವ ಅರ್ಚನಾ, “ನಾನು ಪ್ರಿಯಾಂಕಾ ದೀದಿಯೊಂದಿಗೆ ಮಾತನಾಡಿದಾಗ, ಅವರು ನನಗೆ ಹೇಳಿದರು, ಅರ್ಚನಾ, ನೀವು ಈ ಜಗತ್ತಿಗೆ ಕಾಲಿಡುತ್ತಿದ್ದೀರಿ ಆದರೆ ಅರೆಮನಸ್ಸಿನಿಂದ ಬರಬೇಡಿ, ನಿಮ್ಮ ಚಿತ್ರಗಳು ಮತ್ತು ವೀಡಿಯೊಗಳಿಂದ ನಿಮ್ಮನ್ನು ಟ್ರೋಲ್ ಮಾಡಲಾಗುತ್ತದೆ. ಆದರೆ ನೀವು ಭಯಪಡಬೇಕಾಗಿಲ್ಲ, ನೀವು ಧೈರ್ಯವಾಗಿರಬೇಕು ಎಂದಿದ್ದರು. ಹೀಗಾಗಿ ಪ್ರಿಯಾಂಕಾ ದೀದಿಯ ಮಾತುಗಳಿಂದ ನಾನು ಮೊದಲಿನಿಂದಲೇ ಧೈರ್ಯಶಾಲಿಯಾಗಿದ್ದೇನೆ. ನಾನು ಮುಂದೆ ಸಾಗುತ್ತೇನೆ” ಎಂದಿದ್ದಾರೆ.

“ನನ್ನ ಬಗ್ಗೆ ನಿಂದನೆ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವ ಜನರಿಗೆ ನಾನು ಹೇಳುವುದೇನಂದರೆ, ನಾನು ಎರಡು ವೃತ್ತಿಪರ ಜೀವನವನ್ನು ಹೊಂದಿದ್ದೇನೆ. ಎರಡು ಪರಸ್ಪರ ಭಿನ್ನವಾಗಿವೆ. ನಾನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದೇನೆ. ಈ ಎರಡನ್ನೂ ಬೆರೆಸಬಾರದು ಎಂದು ನಾನು ಬಯಸುತ್ತೇನೆ” ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಹಸ್ತಿನಾಪುರದಲ್ಲಿ ದ್ರೌಪದಿ ಕಥನವನ್ನು ಪುನಃ ಬರೆಯುವುದಾಗಿ ಹೇಳಿರುವ ಅವರು, “ನಾನು ಈ ನಗರದಲ್ಲಿ ಹುಟ್ಟಿ ಬೆಳೆದಿರುವ ಕಾರಣ ಇಲ್ಲಿ ಬದಲಾವಣೆಯನ್ನು ತರಬಲ್ಲೆ ಎಂದು ನನಗೆ ವಿಶ್ವಾಸವಿದೆ. ನಾನು ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂಬೈನಿಂದ ಹಾರಿ ಬಂದವಳಲ್ಲ. ನನಗೆ ಇಲ್ಲೇ ಮನೆ ಇದೆ. ನಾನು ಇಲ್ಲೇ ವಿದ್ಯಾಭ್ಯಾಸ ಮಾಡಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಗೋರಖ್‌ಪುರದಿಂದ ಆದಿತ್ಯನಾಥ್‌‌ ಸ್ಪರ್ಧೆ

ಅರ್ಚನಾ ಗೌತಮ್ ಅವರ ಆಯ್ಕೆಯು ಕಾಂಗ್ರೆಸ್‌ಗೆ ಅಭ್ಯರ್ಥಿಗಳಿಲ್ಲ ಎಂದು ತೋರಿಸುತ್ತದೆ. ಕೀಳು ಮಟ್ಟದ ಪ್ರಚಾರಕ್ಕಾಗಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ಹೇಳಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾ ಮತ್ತು ಸಂತ ಮಹಾಸಭಾ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ, “ಮಾನಸಿಕವಾಗಿ ದಿವಾಳಿಯಾಗಿರುವ ಪಕ್ಷದಿಂದ ಏನನ್ನೂ ನಿರೀಕ್ಷಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್, ಯುವತಿಯ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದಿದೆ. “ಬೇರೆ ಮಹಿಳೆಯಂತೆ ಅವರು ನಮ್ಮ ಗೌರವಕ್ಕೆ ಅರ್ಹರು. ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರು ತಮ್ಮ ಮಹಿಳಾ ವಿರೋಧಿ ನಿಲುವನ್ನು ಮಾತ್ರ ಪ್ರದರ್ಶಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ನವದೆಹಲಿಯಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...