Homeಮುಖಪುಟಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ:...

ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

- Advertisement -
- Advertisement -

’ಹಿಂದಿನ ಚುನಾವಣೆಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ಪಕ್ಷವು ತನ್ನ ರಾಜಕೀಯಕ್ಕಾಗಿ ರೈತರನ್ನು ಶೋಷಣೆ ಮಾಡಿದೆ. ಯೋಗಿ ಸರ್ಕಾರದ ಧೋರಣೆಯ ಬಗ್ಗೆ ರೈತರು ಎಚ್ಚೆತ್ತುಕೊಂಡಿದ್ದಾರೆ’ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

“ಒಂದು ವರ್ಷ ನಡೆದ ರೈತರ ಪ್ರತಿಭಟನೆಯು ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಪಾಠ ಕಲಿಸಲಿದೆ. ಬಿಜೆಪಿ ನಷ್ಟವನ್ನು ಅನುಭವಿಸಲಿದೆ” ಎಂದು ರೈತ ನಾಯಕ ನರೇಶ್ ಟಿಕಾಯತ್ ಹೇಳಿದ್ದಾರೆ.

ದಿ ಕ್ವಿಂಟ್‌ ವೆಬ್‌ಸೈಟ್‌ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ’ಈ ಹಿಂದೆ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ನಮ್ಮ ಸಂಘಟನೆಯು ವಿಷಾಧಿಸುತ್ತದೆ. 2014 ರ ಲೋಕಸಭಾ ಚುನಾವಣೆ, ಬಿಜೆಪಿ ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುತ್ತದೆ ಎಂಬ ಕಾರಣಕ್ಕೆ 2017 ರ ಯುಪಿ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ರೈತರ ಬೆಂಬಲವನ್ನು ತಮ್ಮ ಸ್ವಂತ ರಾಜಕೀಯಕ್ಕಾಗಿ ಬಳಸಿಕೊಂಡಿತ್ತು’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ’ಈ ಚುನಾವಣೆಯಲ್ಲಿ ನಾವು ಯಾರನ್ನೂ ಬೆಂಬಲಿಸುವುದಿಲ್ಲ’: ರಾಕೇಶ್ ಟಿಕಾಯತ್

“13 ತಿಂಗಳು ನಡೆದ ರೈತರ ಸುದೀರ್ಘ ಹೋರಾಟದಲ್ಲಿ ನಾವು 700 ಕ್ಕಿಂತ ಹೆಚ್ಚು ರೈತರನ್ನು ಕಳೆದುಕೊಂಡಿದ್ದೇವೆ. ರೈತ ಸಮುದಾಯವು ಈ ಸಾವುಗಳನ್ನು ಅಷ್ಟು ಸುಲಭವಾಗಿ ಮರೆಯುವುದಿಲ್ಲ. ರೈತರ ಹೃದಯದಲ್ಲಿ ಇನ್ನೂ ಸಾಕಷ್ಟು ಕೋಪವಿದೆ ಮತ್ತು ಬಿಜೆಪಿ ಖಂಡಿತವಾಗಿಯೂ ಇದರಿಂದ ನಷ್ಟ ಅನುಭವಿಸಲಿದೆ. ಬಿಜೆಪಿ ಸರ್ಕಾರವು ಕಾನೂನನ್ನು ಹಿಂತೆಗೆದುಕೊಂಡಿತು. ಆದರೆ ರೈತರ ಹೃದಯಗಳನ್ನು ಗೆಲ್ಲವಲ್ಲಿ ಯಶಸ್ವಿ ಆಗಲಿಲ್ಲ” ಎಂದು ಟಿಕಾಯತ್ ಹೇಳಿದ್ದಾರೆ.

’ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೆವೆ ಎಂದು ಇನ್ನು ನಿರ್ಧರಿಸಿಲ್ಲ. ಭಾರತಿಯ ಕಿಸಾನ್ ಮೋರ್ಚಾದ ಇತರ ಸದಸ್ಯರು ಈ ಬಗ್ಗೆ ಜಂಟಿ ಚರ್ಚೆ ನಡೆಸಬೇಕು. ನಂತರವೇ ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ನಿರ್ಧರಿಸಲು ಸಾಧ್ಯ. ಮುಸ್ಲಿಮರು ಮತ್ತು ಜಾಟ್‌ಗಳ ನಡುವೆ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯು ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ತೀವ್ರವಾಗಿ ಹಾಳುಮಾಡಿದೆ, ಇದರಿಂದ ಮುಸ್ಲಿಮರು ಮತ್ತು ಜಾಟ್‌ಗಳ ನಡುವಿನ ಸಂಬಂಧವು ಘಾಸಿಗೊಂಡಿದೆ. ಇದನ್ನು ಬಿಜೆಪಿ ಸರ್ಕಾರ ಬಳಸಿಕೊಳ್ಳುವುದರ ಮೂಲಕ ಎರಡು ಸಮುದಾಯಗಳ ನಡುವೆ ತಡೆ ಗೋಡೆಯನ್ನೇ ನಿರ್ಮಿಸಿಬಿಟ್ಟಿದೆ” ಎಂದಿದ್ದಾರೆ.

’ಕೆಲವು ವರ್ಷಗಳಿಂದ ಆ ಗೋಡೆಯನ್ನು ಒಡೆದು ಬಾಂಧವ್ಯವನ್ನು ಬೆಸೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅಂದು ನಡೆದ ಗಲಭೆಯ ನಂತರ ಜಾಟ್ ಸಮುದಾಯದ ಯುವಕರು ಬಿಜೆಪಿಯ ಹುಸಿ ದೇಶ ಪ್ರೇಮದ ರಾಜಕೀಯದಿಂದ ಪ್ರಭಾವಿತರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಯಾವುದೇ ಹಿಂದೂ-ಮುಸ್ಲಿಂ ಘರ್ಷಣೆಗೆ ಮತ್ತೆ ಅವಕಾಶ ನೀಡಬಾರದು ಮತ್ತು ಶಾಂತಿಯನ್ನು ಕಾಪಾಡಬೇಕಿದೆ ಎಂದು ಟಿಕಾಯತ್ ಹೇಳಿದ್ದಾರೆ’ ಎಂದು ಟಿಕಾಯತ್ ತಿಳಿಸಿದ್ದಾರೆ.

’ನಾವು ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಮಾತನಾಡಿದ್ದೇವೆ. ಯುವ ಹಿಂದೂಗಳಿಗೆ ಅವರ ಬಗೆಗಿನ ಆತಂಕಗಳನ್ನು ಸಹ ತಿಳಿಸಿದ್ದೇವೆ. ಅವರು ತಮ್ಮ ಗಮನವನ್ನ ಓದು ಮತ್ತು ಅಧ್ಯಯನದ ಮೇಲೆ ಕೇಂದ್ರೀಕರಿಸಬೇಕೆಂದು ಅವರಿಗೆ ಅರ್ಥಮಾಡಿಸುವ ಪ್ರಯತ್ನ ಮಾಡುತ್ತೆವೆ’ ಎಂದು ಸಂದರ್ಶನದಲ್ಲಿ ನರೇಶ್ ಟಿಕಾಯತ್ ತಿಳಿಸಿದ್ದಾರೆ.


ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರೈತ ನಾಯಕ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...