Homeಮುಖಪುಟಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ:...

ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

- Advertisement -
- Advertisement -

’ಹಿಂದಿನ ಚುನಾವಣೆಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ಪಕ್ಷವು ತನ್ನ ರಾಜಕೀಯಕ್ಕಾಗಿ ರೈತರನ್ನು ಶೋಷಣೆ ಮಾಡಿದೆ. ಯೋಗಿ ಸರ್ಕಾರದ ಧೋರಣೆಯ ಬಗ್ಗೆ ರೈತರು ಎಚ್ಚೆತ್ತುಕೊಂಡಿದ್ದಾರೆ’ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

“ಒಂದು ವರ್ಷ ನಡೆದ ರೈತರ ಪ್ರತಿಭಟನೆಯು ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಪಾಠ ಕಲಿಸಲಿದೆ. ಬಿಜೆಪಿ ನಷ್ಟವನ್ನು ಅನುಭವಿಸಲಿದೆ” ಎಂದು ರೈತ ನಾಯಕ ನರೇಶ್ ಟಿಕಾಯತ್ ಹೇಳಿದ್ದಾರೆ.

ದಿ ಕ್ವಿಂಟ್‌ ವೆಬ್‌ಸೈಟ್‌ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ’ಈ ಹಿಂದೆ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ನಮ್ಮ ಸಂಘಟನೆಯು ವಿಷಾಧಿಸುತ್ತದೆ. 2014 ರ ಲೋಕಸಭಾ ಚುನಾವಣೆ, ಬಿಜೆಪಿ ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುತ್ತದೆ ಎಂಬ ಕಾರಣಕ್ಕೆ 2017 ರ ಯುಪಿ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ರೈತರ ಬೆಂಬಲವನ್ನು ತಮ್ಮ ಸ್ವಂತ ರಾಜಕೀಯಕ್ಕಾಗಿ ಬಳಸಿಕೊಂಡಿತ್ತು’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ’ಈ ಚುನಾವಣೆಯಲ್ಲಿ ನಾವು ಯಾರನ್ನೂ ಬೆಂಬಲಿಸುವುದಿಲ್ಲ’: ರಾಕೇಶ್ ಟಿಕಾಯತ್

“13 ತಿಂಗಳು ನಡೆದ ರೈತರ ಸುದೀರ್ಘ ಹೋರಾಟದಲ್ಲಿ ನಾವು 700 ಕ್ಕಿಂತ ಹೆಚ್ಚು ರೈತರನ್ನು ಕಳೆದುಕೊಂಡಿದ್ದೇವೆ. ರೈತ ಸಮುದಾಯವು ಈ ಸಾವುಗಳನ್ನು ಅಷ್ಟು ಸುಲಭವಾಗಿ ಮರೆಯುವುದಿಲ್ಲ. ರೈತರ ಹೃದಯದಲ್ಲಿ ಇನ್ನೂ ಸಾಕಷ್ಟು ಕೋಪವಿದೆ ಮತ್ತು ಬಿಜೆಪಿ ಖಂಡಿತವಾಗಿಯೂ ಇದರಿಂದ ನಷ್ಟ ಅನುಭವಿಸಲಿದೆ. ಬಿಜೆಪಿ ಸರ್ಕಾರವು ಕಾನೂನನ್ನು ಹಿಂತೆಗೆದುಕೊಂಡಿತು. ಆದರೆ ರೈತರ ಹೃದಯಗಳನ್ನು ಗೆಲ್ಲವಲ್ಲಿ ಯಶಸ್ವಿ ಆಗಲಿಲ್ಲ” ಎಂದು ಟಿಕಾಯತ್ ಹೇಳಿದ್ದಾರೆ.

’ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೆವೆ ಎಂದು ಇನ್ನು ನಿರ್ಧರಿಸಿಲ್ಲ. ಭಾರತಿಯ ಕಿಸಾನ್ ಮೋರ್ಚಾದ ಇತರ ಸದಸ್ಯರು ಈ ಬಗ್ಗೆ ಜಂಟಿ ಚರ್ಚೆ ನಡೆಸಬೇಕು. ನಂತರವೇ ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ನಿರ್ಧರಿಸಲು ಸಾಧ್ಯ. ಮುಸ್ಲಿಮರು ಮತ್ತು ಜಾಟ್‌ಗಳ ನಡುವೆ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯು ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ತೀವ್ರವಾಗಿ ಹಾಳುಮಾಡಿದೆ, ಇದರಿಂದ ಮುಸ್ಲಿಮರು ಮತ್ತು ಜಾಟ್‌ಗಳ ನಡುವಿನ ಸಂಬಂಧವು ಘಾಸಿಗೊಂಡಿದೆ. ಇದನ್ನು ಬಿಜೆಪಿ ಸರ್ಕಾರ ಬಳಸಿಕೊಳ್ಳುವುದರ ಮೂಲಕ ಎರಡು ಸಮುದಾಯಗಳ ನಡುವೆ ತಡೆ ಗೋಡೆಯನ್ನೇ ನಿರ್ಮಿಸಿಬಿಟ್ಟಿದೆ” ಎಂದಿದ್ದಾರೆ.

’ಕೆಲವು ವರ್ಷಗಳಿಂದ ಆ ಗೋಡೆಯನ್ನು ಒಡೆದು ಬಾಂಧವ್ಯವನ್ನು ಬೆಸೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅಂದು ನಡೆದ ಗಲಭೆಯ ನಂತರ ಜಾಟ್ ಸಮುದಾಯದ ಯುವಕರು ಬಿಜೆಪಿಯ ಹುಸಿ ದೇಶ ಪ್ರೇಮದ ರಾಜಕೀಯದಿಂದ ಪ್ರಭಾವಿತರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಯಾವುದೇ ಹಿಂದೂ-ಮುಸ್ಲಿಂ ಘರ್ಷಣೆಗೆ ಮತ್ತೆ ಅವಕಾಶ ನೀಡಬಾರದು ಮತ್ತು ಶಾಂತಿಯನ್ನು ಕಾಪಾಡಬೇಕಿದೆ ಎಂದು ಟಿಕಾಯತ್ ಹೇಳಿದ್ದಾರೆ’ ಎಂದು ಟಿಕಾಯತ್ ತಿಳಿಸಿದ್ದಾರೆ.

’ನಾವು ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಮಾತನಾಡಿದ್ದೇವೆ. ಯುವ ಹಿಂದೂಗಳಿಗೆ ಅವರ ಬಗೆಗಿನ ಆತಂಕಗಳನ್ನು ಸಹ ತಿಳಿಸಿದ್ದೇವೆ. ಅವರು ತಮ್ಮ ಗಮನವನ್ನ ಓದು ಮತ್ತು ಅಧ್ಯಯನದ ಮೇಲೆ ಕೇಂದ್ರೀಕರಿಸಬೇಕೆಂದು ಅವರಿಗೆ ಅರ್ಥಮಾಡಿಸುವ ಪ್ರಯತ್ನ ಮಾಡುತ್ತೆವೆ’ ಎಂದು ಸಂದರ್ಶನದಲ್ಲಿ ನರೇಶ್ ಟಿಕಾಯತ್ ತಿಳಿಸಿದ್ದಾರೆ.


ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರೈತ ನಾಯಕ ರಾಕೇಶ್ ಟಿಕಾಯತ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...