Homeಮುಖಪುಟಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ:...

ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

- Advertisement -
- Advertisement -

’ಹಿಂದಿನ ಚುನಾವಣೆಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ಪಕ್ಷವು ತನ್ನ ರಾಜಕೀಯಕ್ಕಾಗಿ ರೈತರನ್ನು ಶೋಷಣೆ ಮಾಡಿದೆ. ಯೋಗಿ ಸರ್ಕಾರದ ಧೋರಣೆಯ ಬಗ್ಗೆ ರೈತರು ಎಚ್ಚೆತ್ತುಕೊಂಡಿದ್ದಾರೆ’ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

“ಒಂದು ವರ್ಷ ನಡೆದ ರೈತರ ಪ್ರತಿಭಟನೆಯು ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಪಾಠ ಕಲಿಸಲಿದೆ. ಬಿಜೆಪಿ ನಷ್ಟವನ್ನು ಅನುಭವಿಸಲಿದೆ” ಎಂದು ರೈತ ನಾಯಕ ನರೇಶ್ ಟಿಕಾಯತ್ ಹೇಳಿದ್ದಾರೆ.

ದಿ ಕ್ವಿಂಟ್‌ ವೆಬ್‌ಸೈಟ್‌ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ’ಈ ಹಿಂದೆ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ನಮ್ಮ ಸಂಘಟನೆಯು ವಿಷಾಧಿಸುತ್ತದೆ. 2014 ರ ಲೋಕಸಭಾ ಚುನಾವಣೆ, ಬಿಜೆಪಿ ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುತ್ತದೆ ಎಂಬ ಕಾರಣಕ್ಕೆ 2017 ರ ಯುಪಿ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ರೈತರ ಬೆಂಬಲವನ್ನು ತಮ್ಮ ಸ್ವಂತ ರಾಜಕೀಯಕ್ಕಾಗಿ ಬಳಸಿಕೊಂಡಿತ್ತು’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ’ಈ ಚುನಾವಣೆಯಲ್ಲಿ ನಾವು ಯಾರನ್ನೂ ಬೆಂಬಲಿಸುವುದಿಲ್ಲ’: ರಾಕೇಶ್ ಟಿಕಾಯತ್

“13 ತಿಂಗಳು ನಡೆದ ರೈತರ ಸುದೀರ್ಘ ಹೋರಾಟದಲ್ಲಿ ನಾವು 700 ಕ್ಕಿಂತ ಹೆಚ್ಚು ರೈತರನ್ನು ಕಳೆದುಕೊಂಡಿದ್ದೇವೆ. ರೈತ ಸಮುದಾಯವು ಈ ಸಾವುಗಳನ್ನು ಅಷ್ಟು ಸುಲಭವಾಗಿ ಮರೆಯುವುದಿಲ್ಲ. ರೈತರ ಹೃದಯದಲ್ಲಿ ಇನ್ನೂ ಸಾಕಷ್ಟು ಕೋಪವಿದೆ ಮತ್ತು ಬಿಜೆಪಿ ಖಂಡಿತವಾಗಿಯೂ ಇದರಿಂದ ನಷ್ಟ ಅನುಭವಿಸಲಿದೆ. ಬಿಜೆಪಿ ಸರ್ಕಾರವು ಕಾನೂನನ್ನು ಹಿಂತೆಗೆದುಕೊಂಡಿತು. ಆದರೆ ರೈತರ ಹೃದಯಗಳನ್ನು ಗೆಲ್ಲವಲ್ಲಿ ಯಶಸ್ವಿ ಆಗಲಿಲ್ಲ” ಎಂದು ಟಿಕಾಯತ್ ಹೇಳಿದ್ದಾರೆ.

’ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೆವೆ ಎಂದು ಇನ್ನು ನಿರ್ಧರಿಸಿಲ್ಲ. ಭಾರತಿಯ ಕಿಸಾನ್ ಮೋರ್ಚಾದ ಇತರ ಸದಸ್ಯರು ಈ ಬಗ್ಗೆ ಜಂಟಿ ಚರ್ಚೆ ನಡೆಸಬೇಕು. ನಂತರವೇ ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ನಿರ್ಧರಿಸಲು ಸಾಧ್ಯ. ಮುಸ್ಲಿಮರು ಮತ್ತು ಜಾಟ್‌ಗಳ ನಡುವೆ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯು ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ತೀವ್ರವಾಗಿ ಹಾಳುಮಾಡಿದೆ, ಇದರಿಂದ ಮುಸ್ಲಿಮರು ಮತ್ತು ಜಾಟ್‌ಗಳ ನಡುವಿನ ಸಂಬಂಧವು ಘಾಸಿಗೊಂಡಿದೆ. ಇದನ್ನು ಬಿಜೆಪಿ ಸರ್ಕಾರ ಬಳಸಿಕೊಳ್ಳುವುದರ ಮೂಲಕ ಎರಡು ಸಮುದಾಯಗಳ ನಡುವೆ ತಡೆ ಗೋಡೆಯನ್ನೇ ನಿರ್ಮಿಸಿಬಿಟ್ಟಿದೆ” ಎಂದಿದ್ದಾರೆ.

’ಕೆಲವು ವರ್ಷಗಳಿಂದ ಆ ಗೋಡೆಯನ್ನು ಒಡೆದು ಬಾಂಧವ್ಯವನ್ನು ಬೆಸೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅಂದು ನಡೆದ ಗಲಭೆಯ ನಂತರ ಜಾಟ್ ಸಮುದಾಯದ ಯುವಕರು ಬಿಜೆಪಿಯ ಹುಸಿ ದೇಶ ಪ್ರೇಮದ ರಾಜಕೀಯದಿಂದ ಪ್ರಭಾವಿತರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಯಾವುದೇ ಹಿಂದೂ-ಮುಸ್ಲಿಂ ಘರ್ಷಣೆಗೆ ಮತ್ತೆ ಅವಕಾಶ ನೀಡಬಾರದು ಮತ್ತು ಶಾಂತಿಯನ್ನು ಕಾಪಾಡಬೇಕಿದೆ ಎಂದು ಟಿಕಾಯತ್ ಹೇಳಿದ್ದಾರೆ’ ಎಂದು ಟಿಕಾಯತ್ ತಿಳಿಸಿದ್ದಾರೆ.

’ನಾವು ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಮಾತನಾಡಿದ್ದೇವೆ. ಯುವ ಹಿಂದೂಗಳಿಗೆ ಅವರ ಬಗೆಗಿನ ಆತಂಕಗಳನ್ನು ಸಹ ತಿಳಿಸಿದ್ದೇವೆ. ಅವರು ತಮ್ಮ ಗಮನವನ್ನ ಓದು ಮತ್ತು ಅಧ್ಯಯನದ ಮೇಲೆ ಕೇಂದ್ರೀಕರಿಸಬೇಕೆಂದು ಅವರಿಗೆ ಅರ್ಥಮಾಡಿಸುವ ಪ್ರಯತ್ನ ಮಾಡುತ್ತೆವೆ’ ಎಂದು ಸಂದರ್ಶನದಲ್ಲಿ ನರೇಶ್ ಟಿಕಾಯತ್ ತಿಳಿಸಿದ್ದಾರೆ.


ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರೈತ ನಾಯಕ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...