Homeಮುಖಪುಟಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ:...

ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

- Advertisement -
- Advertisement -

’ಹಿಂದಿನ ಚುನಾವಣೆಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ಪಕ್ಷವು ತನ್ನ ರಾಜಕೀಯಕ್ಕಾಗಿ ರೈತರನ್ನು ಶೋಷಣೆ ಮಾಡಿದೆ. ಯೋಗಿ ಸರ್ಕಾರದ ಧೋರಣೆಯ ಬಗ್ಗೆ ರೈತರು ಎಚ್ಚೆತ್ತುಕೊಂಡಿದ್ದಾರೆ’ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

“ಒಂದು ವರ್ಷ ನಡೆದ ರೈತರ ಪ್ರತಿಭಟನೆಯು ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಪಾಠ ಕಲಿಸಲಿದೆ. ಬಿಜೆಪಿ ನಷ್ಟವನ್ನು ಅನುಭವಿಸಲಿದೆ” ಎಂದು ರೈತ ನಾಯಕ ನರೇಶ್ ಟಿಕಾಯತ್ ಹೇಳಿದ್ದಾರೆ.

ದಿ ಕ್ವಿಂಟ್‌ ವೆಬ್‌ಸೈಟ್‌ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ’ಈ ಹಿಂದೆ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ನಮ್ಮ ಸಂಘಟನೆಯು ವಿಷಾಧಿಸುತ್ತದೆ. 2014 ರ ಲೋಕಸಭಾ ಚುನಾವಣೆ, ಬಿಜೆಪಿ ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುತ್ತದೆ ಎಂಬ ಕಾರಣಕ್ಕೆ 2017 ರ ಯುಪಿ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ರೈತರ ಬೆಂಬಲವನ್ನು ತಮ್ಮ ಸ್ವಂತ ರಾಜಕೀಯಕ್ಕಾಗಿ ಬಳಸಿಕೊಂಡಿತ್ತು’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ’ಈ ಚುನಾವಣೆಯಲ್ಲಿ ನಾವು ಯಾರನ್ನೂ ಬೆಂಬಲಿಸುವುದಿಲ್ಲ’: ರಾಕೇಶ್ ಟಿಕಾಯತ್

“13 ತಿಂಗಳು ನಡೆದ ರೈತರ ಸುದೀರ್ಘ ಹೋರಾಟದಲ್ಲಿ ನಾವು 700 ಕ್ಕಿಂತ ಹೆಚ್ಚು ರೈತರನ್ನು ಕಳೆದುಕೊಂಡಿದ್ದೇವೆ. ರೈತ ಸಮುದಾಯವು ಈ ಸಾವುಗಳನ್ನು ಅಷ್ಟು ಸುಲಭವಾಗಿ ಮರೆಯುವುದಿಲ್ಲ. ರೈತರ ಹೃದಯದಲ್ಲಿ ಇನ್ನೂ ಸಾಕಷ್ಟು ಕೋಪವಿದೆ ಮತ್ತು ಬಿಜೆಪಿ ಖಂಡಿತವಾಗಿಯೂ ಇದರಿಂದ ನಷ್ಟ ಅನುಭವಿಸಲಿದೆ. ಬಿಜೆಪಿ ಸರ್ಕಾರವು ಕಾನೂನನ್ನು ಹಿಂತೆಗೆದುಕೊಂಡಿತು. ಆದರೆ ರೈತರ ಹೃದಯಗಳನ್ನು ಗೆಲ್ಲವಲ್ಲಿ ಯಶಸ್ವಿ ಆಗಲಿಲ್ಲ” ಎಂದು ಟಿಕಾಯತ್ ಹೇಳಿದ್ದಾರೆ.

’ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೆವೆ ಎಂದು ಇನ್ನು ನಿರ್ಧರಿಸಿಲ್ಲ. ಭಾರತಿಯ ಕಿಸಾನ್ ಮೋರ್ಚಾದ ಇತರ ಸದಸ್ಯರು ಈ ಬಗ್ಗೆ ಜಂಟಿ ಚರ್ಚೆ ನಡೆಸಬೇಕು. ನಂತರವೇ ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ನಿರ್ಧರಿಸಲು ಸಾಧ್ಯ. ಮುಸ್ಲಿಮರು ಮತ್ತು ಜಾಟ್‌ಗಳ ನಡುವೆ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯು ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ತೀವ್ರವಾಗಿ ಹಾಳುಮಾಡಿದೆ, ಇದರಿಂದ ಮುಸ್ಲಿಮರು ಮತ್ತು ಜಾಟ್‌ಗಳ ನಡುವಿನ ಸಂಬಂಧವು ಘಾಸಿಗೊಂಡಿದೆ. ಇದನ್ನು ಬಿಜೆಪಿ ಸರ್ಕಾರ ಬಳಸಿಕೊಳ್ಳುವುದರ ಮೂಲಕ ಎರಡು ಸಮುದಾಯಗಳ ನಡುವೆ ತಡೆ ಗೋಡೆಯನ್ನೇ ನಿರ್ಮಿಸಿಬಿಟ್ಟಿದೆ” ಎಂದಿದ್ದಾರೆ.

’ಕೆಲವು ವರ್ಷಗಳಿಂದ ಆ ಗೋಡೆಯನ್ನು ಒಡೆದು ಬಾಂಧವ್ಯವನ್ನು ಬೆಸೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅಂದು ನಡೆದ ಗಲಭೆಯ ನಂತರ ಜಾಟ್ ಸಮುದಾಯದ ಯುವಕರು ಬಿಜೆಪಿಯ ಹುಸಿ ದೇಶ ಪ್ರೇಮದ ರಾಜಕೀಯದಿಂದ ಪ್ರಭಾವಿತರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಯಾವುದೇ ಹಿಂದೂ-ಮುಸ್ಲಿಂ ಘರ್ಷಣೆಗೆ ಮತ್ತೆ ಅವಕಾಶ ನೀಡಬಾರದು ಮತ್ತು ಶಾಂತಿಯನ್ನು ಕಾಪಾಡಬೇಕಿದೆ ಎಂದು ಟಿಕಾಯತ್ ಹೇಳಿದ್ದಾರೆ’ ಎಂದು ಟಿಕಾಯತ್ ತಿಳಿಸಿದ್ದಾರೆ.

’ನಾವು ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಮಾತನಾಡಿದ್ದೇವೆ. ಯುವ ಹಿಂದೂಗಳಿಗೆ ಅವರ ಬಗೆಗಿನ ಆತಂಕಗಳನ್ನು ಸಹ ತಿಳಿಸಿದ್ದೇವೆ. ಅವರು ತಮ್ಮ ಗಮನವನ್ನ ಓದು ಮತ್ತು ಅಧ್ಯಯನದ ಮೇಲೆ ಕೇಂದ್ರೀಕರಿಸಬೇಕೆಂದು ಅವರಿಗೆ ಅರ್ಥಮಾಡಿಸುವ ಪ್ರಯತ್ನ ಮಾಡುತ್ತೆವೆ’ ಎಂದು ಸಂದರ್ಶನದಲ್ಲಿ ನರೇಶ್ ಟಿಕಾಯತ್ ತಿಳಿಸಿದ್ದಾರೆ.


ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರೈತ ನಾಯಕ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...