Homeಮುಖಪುಟಯುಪಿ ಚುನಾವಣೆ: ರೈತ ಆಕ್ರೋಶದ ಜಿಲ್ಲೆ ಲಖಿಂಪುರ್‌ ಖೇರಿಯಲ್ಲಿ ಪ್ರಚಾರ ನಡೆಸಲಿರುವ ರಾಜನಾಥ್ ಸಿಂಗ್

ಯುಪಿ ಚುನಾವಣೆ: ರೈತ ಆಕ್ರೋಶದ ಜಿಲ್ಲೆ ಲಖಿಂಪುರ್‌ ಖೇರಿಯಲ್ಲಿ ಪ್ರಚಾರ ನಡೆಸಲಿರುವ ರಾಜನಾಥ್ ಸಿಂಗ್

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಬಿಜೆಪಿಯ ಸ್ಟಾರ್ ಪ್ರಚಾರಕ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಫೆಬ್ರವರಿ 2) ಲಖಿಂಪುರ್‌ ಖೇರಿ ಮತ್ತು ಪಿಲಿಭಿತ್‌ನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಅಂದಿನಿಂದ ಬಿಜೆಪಿ ಮತ್ತು ಇತರ ರಾಜಕೀಯ ಪಕ್ಷಗಳ ನಾಯಕರ ಮೇಲೆ ರೈತರು ಆಕ್ರೋಶಗೊಂಡಿದ್ದಾರೆ.

ರೈತ ಸಂಘಟನೆಗಳ ಒತ್ತಡಗಳ ಬಳಿಕ ರೈತ ಹತ್ಯಾಕಾಂಡ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿದೆ. ಆದರೆ, ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂಬ ರೈತರ ಬೇಡಿಕೆಗೆ ಬಿಜೆಪಿ ಸರ್ಕಾರ ಸ್ಪಂದಿಸಿಲ್ಲ. ಇದರ ಬಗ್ಗೆ ರೈತರಲ್ಲಿ ತೀವ್ರ ಆಕ್ರೋಶವಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ಇಂತಹ ಸಮಯದಲ್ಲಿ ರಕ್ಷಣಾ ಮುಖ್ಯಮಂತ್ರಿ ಲಖಿಂಪುರ ಖೇರಿ ಮತ್ತು ಪಿಲಿಭಿತ್ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೇನೆ ಮತ್ತು  ಮತದಾರರೊಂದಿಗೆ ಸಂವಾದ ನಡೆಸಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

 

“ನಾಳೆ, ಫೆಬ್ರವರಿ 2 ರಂದು, ನಾನು ಉತ್ತರ ಪ್ರದೇಶದ ಲಖಿಂಪುರ ಖೇರಿ ಮತ್ತು ಪಿಲಿಭಿತ್‌ನಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಮತದಾರರೊಂದಿಗೆ ಸಂವಾದ ನಡೆಸುತ್ತೇನೆ” ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಲಖೀಂಪುರ್‌ ಖೇರಿಯ ರೈತರು ವಿಧಾನಸಭಾ ಚುನಾವಣೆಯಲ್ಲಿ ‘ನೋಟಾ’ ಬಟನ್ ಒತ್ತಲು ಮನಸ್ಸು ಮಾಡಿದ್ದಾರೆ. ರಾಜ್ಯ ಬಿಜೆಪಿ ಮತ್ತು ಎಸ್‌ಪಿಯ ಎರಡು ದೊಡ್ಡ ಪಕ್ಷಗಳು ನಮಗೆ ದ್ರೋಹ ಬಗೆದಿವೆ ಎಂದು ಆರೋಪಿಸಿರುವ ರೈತರು, ನಾವು ಬಿಜೆಪಿಗೆ ಅಥವಾ ಎಸ್‌ಪಿಗೆ ಮತ ಹಾಕುವುದಿಲ್ಲ ಎಂದಿದ್ದಾರೆ.

ಇನ್ನು, ಪಶ್ಚಿಮ ಉತ್ತರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ತೆರಳುವ ಬಿಜೆಪಿ ನಾಯಕರಿಗೆ ರೈತರು ಘೇರಾವ್ ಹಾಕಿರುವ, ಅವರನ್ನು ಪ್ರಚಾರ ಸ್ಥಳಗಳಿಂದ ವಾಪಸ್‌ ಕಳುಹಿಸಿರುವ ಘಟನೆಗಳು ವರದಿಯಾಗಿವೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಲಖಿಂಪುರ್ ಖೇರಿಯಲ್ಲಿ ಮತದಾನ ನಡೆಯಲಿದೆ. ಆದರೆ, ಫೆಬ್ರವರಿ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ: ಬಿಜೆಪಿ ಕಾರ್ಯಕರ್ತರ ಹತ್ಯೆ- ಚಾರ್ಜ್‌ಶೀಟ್‌ನಲ್ಲಿ ರೈತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....