Homeಮುಖಪುಟಉತ್ತರ ಪ್ರದೇಶ ಚುನಾವಣೆ: ಜೈಲಿನಲ್ಲಿರುವ ಎಸ್‌ಪಿ ಅಭ್ಯರ್ಥಿ ಅಜಂ ಖಾನ್ ಭರ್ಜರಿ ಮುನ್ನಡೆ

ಉತ್ತರ ಪ್ರದೇಶ ಚುನಾವಣೆ: ಜೈಲಿನಲ್ಲಿರುವ ಎಸ್‌ಪಿ ಅಭ್ಯರ್ಥಿ ಅಜಂ ಖಾನ್ ಭರ್ಜರಿ ಮುನ್ನಡೆ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಏಣಿಕೆ ನಡೆಯುತ್ತಿದ್ದು, ರಾಮ್‌ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಾಜಿ ಸಚಿವ ಅಜಂ ಖಾನ್ ಮತ್ತು ಅವರ ಪುತ್ರ ಅಬ್ದುಲ್ಲಾ ತಮ್ಮ ತಮ್ಮ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪ್ರಸ್ತುತ ಸೀತಾಪುರ ಜೈಲಿನಲ್ಲಿರುವ ಅಜಂ ಖಾನ್ ಅವರು ಯುಪಿಯ ರಾಮ್‌ಪುರ ವಿಧಾನಸಭಾ ಕ್ಷೇತ್ರದಿಂದ ಈವರೆಗೆ 41608 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಆಕಾಶ್ ಸಕ್ಸೆನಾ ವಿರುದ್ದ ಸುಮಾರು 36 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ, ಆರೆಸ್ಸೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಸಂಸದ ಅಜಂ ಖಾನ್‌ಗೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೂ ಅವರ ವಿರುದ್ಧ ದಾಖಲಾಗಿರುವ ಇನ್ನೆರಡು ಪ್ರಕರಣಗಳ ವಿಚಾರಣೆ ಬಾಕಿಯರುವ ಕಾರಣ ಅವರು ಜೈಲಿನಲ್ಲಿಯೇ ಇರಲಿದ್ದಾರೆ.

ಇದನ್ನೂ ಓದಿ: ಯುಪಿ: ಹಿಂದುತ್ವದೊಂದಿಗೆ ನಮಗೆ ಸಂಬಂಧವಿಲ್ಲ ಎಂದ BJPಯ ಮೈತ್ರಿ ಪಕ್ಷ ‘ಆಪ್ನಾ ದಳ (ಎಸ್)’

ಅಜಂ ಖಾನ್ ಪುತ್ರ ಮೊಹಮ್ಮದ್ ಅಬ್ದುಲ್ಲಾ ಅಜಂ ಖಾನ್‌ ಕೂಡ ಸುವಾರ್ ಸೀಟಿನಲ್ಲಿ ಮುನ್ನಡೆಯಲ್ಲಿದ್ದಾರೆ. ಸಮೀಪದ ಅಪ್ನಾ ದಳದ ಅಭ್ಯರ್ಥಿಗಿಂತ 22 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಎಸ್‌ಪಿ ಸೇರಿದ್ದ ಸಮಾಜವಾದಿ ಪಕ್ಷದ ಮತ್ತೊಬ್ಬ ಅಭ್ಯರ್ಥಿ ಸ್ವಾಮಿ ಪ್ರಸಾದ್ ಮೌರ್ಯ ಅವರು ಫಾಜಿಲ್ ನಗರ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ.

ಜನಸಂಖ್ಯೆಯ ದೃಷ್ಟಿಯಿಂದ, ದೇಶದ ಅತಿದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶ ಮತ್ತೊಂದು ಬಾರಿಗೆ ಬಿಜೆಪಿಗೆ ದಕ್ಕಲಿದ್ದು, ಇದುವರೆಗೆ ರಾಜ್ಯದ 403 ಸ್ಥಾನಗಳಲ್ಲಿ ಬಿಜೆಪಿ 260ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಬಹುಮತಕ್ಕೆ ಬೇಕಾದ 202 ಸ್ಥಾನಗಳಿಗಿಂತ ಹೆಚ್ಚು. ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ 125 ಸ್ಥಾನಗಳಲ್ಲಿ ಮುಂದಿದೆ. ಬಿಎಸ್‌ಪಿ ಏಳು ಮತ್ತು ಕಾಂಗ್ರೆಸ್ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.


ಇದನ್ನೂ ಓದಿ: Uttar Pradesh Elections Result | ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಸೋಲಿನತ್ತ | Live

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...