Homeಮುಖಪುಟಲಕ್ನೋ: ಯೋಗಿ ಆದಿತ್ಯನಾಥ್‌ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ವಿದ್ಯಾರ್ಥಿ ನಾಯಕಿ ಗೆಲುವಿನತ್ತ ದಾಪುಗಾಲು

ಲಕ್ನೋ: ಯೋಗಿ ಆದಿತ್ಯನಾಥ್‌ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ವಿದ್ಯಾರ್ಥಿ ನಾಯಕಿ ಗೆಲುವಿನತ್ತ ದಾಪುಗಾಲು

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿ ನಾಯಕಿ ಪೂಜಾ ಶುಕ್ಲಾ ಲಕ್ನೋ ಉತ್ತರ ಕ್ಷೇತ್ರದಿಂದ ಸಮಾಜವಾದಿ ಪಾರ್ಟಿಯಿಂದ ಚುನಾವಣೆ ಎದುರಿಸುತ್ತಿದ್ದು, ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಲಕ್ನೋ ಉತ್ತರ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು,  ಬಿಜೆಪಿಯ ಹಾಲಿ ಶಾಸಕ ನೀರಜ್ ಬೋರಾಗೆ ಎಸ್‌ಪಿಯ ಪೂಜಾ ಶುಕ್ಲಾ ಪ್ರಭಲ ಪೈಪೋಟಿ ನೀಡುತ್ತಿದ್ದಾರೆ.

ಲಕ್ನೋ ಉತ್ತರವು ಲಕ್ನೋ (ಲೋಕಸಭಾ ಕ್ಷೇತ್ರ) ದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರಸ್ತುತ ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನೀರಜ್ ಬೋರಾ ಶಾಸಕರಾಗಿದ್ದಾದೆ. ಕಳೆದ 2017 ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅಭಿಷೇಕ್ ಮಿಶ್ರಾ ಅವರನ್ನು 27,276 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಸಮಾಜವಾದಿ ಪಾರ್ಟಿ ವಿದ್ಯಾರ್ಥಿ ನಾಯಕಿ, ಹೋರಾಟಗಾರ್ತಿ ಪೂಜಾ ಶುಕ್ಲಾ ಅವರಿಗೆ ಟಿಕೆಟ್ ನೀಡಿತ್ತು.

ಇದನ್ನೂ ಓದಿ: ಪಂಜಾಬ್‌: ಎರಡು ಕ್ಷೇತ್ರಗಳಲ್ಲೂ ಪಂಜಾಬ್‌ ಸಿಎಂಗೆ ಸೋಲು; ಸಿಧು, ಅಮರಿಂದರ್‌ಗೂ ಸೋಲು

ಸಮಾಜವಾದಿ ಪಕ್ಷದ ಸದಸ್ಯೆಯಾಗಿರುವ ಪೂಜಾ ಶುಕ್ಲಾ, ಲಕ್ನೋ ವಿಶ್ವವಿದ್ಯಾಲಯವು ಆಯೋಜಿಸುವ ಹಿಂದುತ್ವದ ಕಾರ್ಯಕ್ರಮಗಳ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ವಿಶ್ವವಿದ್ಯಾಲಯವು ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿ ಸರ್ಕಾರವನ್ನು ಮೆಚ್ಚಿಸಲು ತೆರಿಗೆದಾರರ ಹಣವನ್ನು ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ್ದರು.

ಪೂಜಾ ಶುಕ್ಲಾ ಅವರು 2017 ರಲ್ಲಿ ಲಕ್ನೋದಲ್ಲಿ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬೆಂಗಾವಲು ಪಡೆಗೆ ಕಪ್ಪು ಬಾವುಟವನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಆಗ, ಪೂಜಾ ಶುಕ್ಲಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿರಲಿಲ್ಲ. ಅದೇ ಘಟನೆ ಹಿನ್ನೆಲೆ ಶುಕ್ಲಾ ಮತ್ತು ಇತರರು ಒಂದು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದರು. ಆಕೆಯ ಮೇಲೆ ಕೊಲೆ ಯತ್ನದ ಆರೋಪವನ್ನು ಕೂಡ ದಾಖಲಿಸಲಾಗಿತ್ತು.

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಕ್ನೋ ಉತ್ತರ ಕ್ಷೇತ್ರದಿಂದ ಒಟ್ಟು 13 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಅರವಿಂದ್ ಶುಕ್ಲಾ, ಪಂಕಜ್ ಶರ್ಮಾ, ಸರ್ವೇಶ್ ಸಾಯಿ, ಅಜಯ್ ಕುಮಾರ್ ಶ್ರೀವಾಸ್ತವ (INC), ಡಾ. ನೀರಜ್ ಬೋರಾ (ಬಿಜೆಪಿ), ಪೂಜಾ ಶುಕ್ಲಾ (ಎಸ್‌ಪಿ), ಮೊಹಮ್ಮದ್ ಸರ್ವರ್ ಮಲಿಕ್ (ಬಿಎಸ್‌ಪಿ), ಅಮಿತ್ ಶ್ರೀವಾಸ್ತವ್ (ಎಎಪಿ), ಕೌಶಲ್ ಕಿಶೋರ್ (ಎಂಎಪಿ), ನೂರ್ ಮೊ ವರ್ಸಿ (ಜಿಪಿಪಿಎ), ಬ್ರಿಜೇಶ್ ಚಂದ್ರ ಅವಸ್ತಿ (ಎಂಎಆರ್‌ಡಿ), ರಾಣಿ ಸಿದ್ದಿಕಿ (SPI), ಸಂಜಯ್ ಸಿಂಗ್ ರಾಣಾ (BSPA) ಸ್ಪರ್ಧಿಗಳು.

ಈವರೆಗೆ ವಿದ್ಯಾರ್ಥಿ ನಾಯಕಿ ಪೂಜಾ ಶುಕ್ಲಾ 61,936 ಮತಗಳನ್ನು ಪಡೆದಿದ್ದರೇ, ಬಿಜೆಪಿಯ ಡಾ.ನೀರಜ್ ಬೋರಾ ಅವರು 49,713 ಮತಗಳನ್ನು ಪಡೆದಿದ್ದಾರೆ. ಇಬ್ಬರ ನಡುವೆ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರವಿದೆ.


ಇದನ್ನೂ ಓದಿ: Uttar Pradesh Elections Result | ಉತ್ತರ ಪ್ರದೇಶ: ರೈತ ಹೋರಾಟದ ಕೇಂದ್ರ ಲಖಿಂಪುರದ 8 ಕ್ಷೇತ್ರದಲ್ಲಿ 6 BJP ಮುನ್ನಡೆ | Live

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...