Homeಮುಖಪುಟಯುಪಿ ಚುನಾವಣೆ: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಮೇನಕಾ ಗಾಂಧಿ, ವರುಣ್ ಗಾಂಧಿ ಔಟ್

ಯುಪಿ ಚುನಾವಣೆ: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಮೇನಕಾ ಗಾಂಧಿ, ವರುಣ್ ಗಾಂಧಿ ಔಟ್

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಗಾಂಧಿ ಕುಟುಂಬದ ಬಿಜೆಪಿ ನಾಯಕರಾದ ಮೇನಕಾ ಗಾಂಧಿ ಮತ್ತು ವರುಣ್ ಗಾಂಧಿ ಅವರನ್ನು ಕೈಬಿಡಲಾಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ 30 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಜನವರಿ 19 ರಂದು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರ ಹೆಸರುಗಳು ಪಟ್ಟಿಯಲ್ಲಿ ಮೊದಲಿವೆ.

ಈ ಹಿಂದೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ತಾಯಿ ಮಗನನ್ನು ಕೈಬಿಟ್ಟ ನಂತರ ಪಕ್ಷದ ಸದಸ್ಯರ ನಡುವೆ ಎಲ್ಲವು ಸರಿಯಿಲ್ಲ ಎಂಬ ಬಗ್ಗೆ ವದಂತಿ ಹಬ್ಬಿತ್ತು. ಈಗ ಇಬ್ಬರನ್ನು ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಹೊರಗಿಟ್ಟಿರುವುದು ಈ ವದಂತಿಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಮೇನಕಾ ಮತ್ತು ವರುಣ್ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಸುಲ್ತಾನ್‌ಪುರ ಮತ್ತು ಪಿಲಿಭಿತ್‌ನಿಂದ ಜಯ ಗಳಿಸಿದ್ದಾರೆ.

ಇದನ್ನೂ ಓದಿ: ರೈತರ ಪರ ಟ್ವೀಟ್: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ವರುಣ್ ಗಾಂಧಿ, ಮೇನಕಾ ಗಾಂಧಿ ಔಟ್

ರೈತರ ಸಮಸ್ಯೆ ಮತ್ತು ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಘಟನೆಗಳನ್ನು ಖಂಡಿಸಿ ಬಿಜೆಪಿ ಸಂಸದ ವರುಣ್ ಗಾಂಧೀ ಪದೇ ಪದೇ ಟ್ವೀಟ್ ಮಾಡುತ್ತಿದ್ದರು. ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಕಾರಣ ಎನ್ನಲಾಗಿರುವ ಲಖಿಂಪುರ್‌ ಖೇರಿ ಹತ್ಯಾಕಾಂಡದ ಬಗ್ಗೆ ಹಲವು ಬಾರಿ ಪ್ರಶ್ನಿಸಿದ್ದಾರೆ.

ಆರೋಪಿ ಆಶಿಶ್ ಮಿಶ್ರಾ ಬಂಧನಕ್ಕೆ ತ್ವರಿತ ಕ್ರಮ ಕೈಗೊಳ್ಳದ ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರವನ್ನು ಸೂಕ್ಷ್ಮವಾಗಿ ದೂಷಿಸಿದ್ದರು.  ಈ ಕಾರಣದಿಂದ ಅವರನ್ನು ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ ಎನ್ನುವ ವದಂತಿಗಳು ಹರಡಿದ್ದವು. ಈಗ ಮತ್ತೆ ಸ್ಟಾರ್‍ ಪ್ರಚಾರಕರ ಪಟ್ಟಿಯಿಂದಲೂ ಕೈಬಿಡಲಾಗಿದೆ.

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮೊದಲ ಹೆಸರು ಪ್ರಧಾನಿ ನರೇಂದ್ರ ಮೋದಿ, ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇದ್ದಾರೆ. ಇವರ ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಗೋರಖ್‌ಪುರದ ಬಿಜೆಪಿ ಅಭ್ಯರ್ಥಿ ಯೋಗಿ ಆದಿತ್ಯನಾಥ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಸೇರಿದ್ದಾರೆ.

ಯುಪಿ ವಿಧಾನಸಭಾ ಚುನಾವಣೆ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ.  ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಟ್ಟಾ ಹಿಂದೂ.ಧರ್ಮದ ದಪರವಾಗಿ ಹೋರಾಡುತ್ತಿದ್ದ ಮಹಾ ಸಾಂಮ್ರಟ ಶಿವಾಜಿಮಹಾರಾಜರು ಸಿಂಹಾಸನವನ್ನೇರವ ಸಮಯದಲ್ಲಿ ಮಹಾರಾಷ್ಟ್ರದ ಯಾವ ಬ್ರಾಹ್ಮಣರು ಮುಂದೆಬರಲಿಲ್ಲವೆಂದು ತಿಳಿಯಿತು.
    ಈ ಪಟ್ಟಾಳಭಿಷೇಕ ಕಾರ್ಯಕ್ರಮಕ್ಕೆ ಕಲ್ಕತ್ತಾ ನಗರದಿಂದಾ ಬ್ರಾಹ್ಮಣರನ್ನು ಕರೆಸಿದ್ದರು ಅವರೂ ಕೂಡ ಅತ್ಯಂತ ಹೀನವಾಗಿ ಮರಾಠರೊಡನೆ ನಡೆದು ಕೊಂಡರು ಎಂದು ತಿಳಿಯಿತು.
    ಇದರ ಬಗೆಗಿನ ಇತರೆವಿಶಯವನ್ನು ಸಂಪೂರ್ಣ ತಿಳಿಸಲು ತಮ್ಮಿಂದ ಸಾದ್ಯವಾರೆ ಬಹಳ ಕಾಲದಿಂದ ಹಾತೊರೆಯುವ ಮನಗಳಿಗೆ ಸಂತೋಷವಾಗುತ್ತದೆ.
    ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...