Homeಮುಖಪುಟಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಕ್ಷೇತ್ರದಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ ಇರುವುದು ಒಳ್ಳೆಯದೆ. ಏಕೆಂದರೆ, ಯೋಗಿ ಆದಿತ್ಯನಾಥ್ ಅವರು ಇಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಬೇಕಾಗುತ್ತಿತ್ತು ಎಂದು ಇಲ್ಲಿನ ರಾಮ ಮಂದಿರದ ಪ್ರಧಾನ ಅರ್ಚಕರು ಸೋಮವಾರ ಹೇಳಿದ್ದಾರೆ.

“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಂದಾಗಿ ಇಲ್ಲಿನ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ. ಇದರಿಂದ ಆದಿತ್ಯನಾಥ್ ಅವರು ಜನರ ವಿರೋಧವನ್ನು ಎದುರಿಸಬೇಕಾಗುತ್ತದೆ ಹೀಗಾಗಿ ಗೋರಖ್‌ಪುರದಿಂದ ಸ್ಪರ್ಧಿಸಬೇಕು ಎಂದು ನಾನು ಈ ಹಿಂದೆ ಸಲಹೆ ನೀಡಿದ್ದೆ” ಎಂದು ತಾತ್ಕಾಲಿಕ ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಸ್ಪರ್ಧಿಸಬಾರದು ಎಂದು ಹೇಗೆ ಸೂಚಿಸಿದ್ದಿರಿ ಎಂಬ ಪ್ರಶ್ನೆಗೆ, ರಾಮ ಲಲ್ಲಾ ಅವರನ್ನು ಕೇಳಿದ ನಂತರ ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಆದಿತ್ಯನಾಥ್‌‌ ಅಯೋಧ್ಯೆಯಲ್ಲಿ ಸ್ಪರ್ಧಿಸುವ ಕನಸು ಭಗ್ನವಾಗಿದ್ದೇಕೆ?

’ಇಲ್ಲಿನ ದಾರ್ಶನಿಕರು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಮನೆಗಳು ಮತ್ತು ಅಂಗಡಿಗಳನ್ನು ನೆಲಸಮ ಮಾಡಿರುವುದರಿಂದ ಮನೆ, ಅಂಗಡಿ ಕಳೆದುಕೊಂಡವರು ಆದಿತ್ಯನಾಥ್ ವಿರುದ್ಧವಾಗಿದ್ದಾರೆ. ಹೀಗಾಗಿ ಅವರು ಗೋರಖ್‌ಪುರ್‌ ಹೋಗುವುದು ಉತ್ತಮ ಎಂದು ನಾನು ಹೇಳಿದೆ. ಇಲ್ಲಿಂದ ಅವರು ಗೆಲ್ಲುತ್ತಿದ್ದು. ಆದರೆ, ಸಾಕಷ್ಟು ಸಮಸ್ಯೆ ಎದುರಿಸಬೇಕಾಗಿತ್ತು’ ಎಂದು 84 ವರ್ಷದ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸರುವ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದಾರೆ.

ಪವನ್ ಪಾಂಡೆ ಅವರು 2012 ರ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ ಗೆದ್ದ, ಹಿಂದಿನ ಅಖಿಲೇಶ್ ಯಾದವ್ ಸರ್ಕಾರದಲ್ಲಿ ಸಚಿವರಾಗಿದ್ದರು. 2017 ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ಅಯೋಧ್ಯೆ ಕ್ಷೇತ್ರವನ್ನು ಗೆದ್ದಿದ್ದರು.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಕಣಕ್ಕೆ ಇಳಿಯುತ್ತಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಡಿತ್ತು. ಆದರೆ ಬಿಜೆಪಿ ನಾಯಕತ್ವವು ಅವರನ್ನು ಗೋರಖ್‌ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದೆ.

ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳು – ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಗೋರಖ್‌ಪುರದಿಂದ ಆದಿತ್ಯನಾಥ್‌‌ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಮ್ಯೂನಿಸ್ಟ್,ಮಾವೋವಾದಿಗಳ ಕಪೋಲ ಕಲ್ಪಿತಾ ಮಾಹಿತಿಗೆ ದಿಕ್ಕಾರವಿರಲಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...