Homeಮುಖಪುಟಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಕ್ಷೇತ್ರದಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ ಇರುವುದು ಒಳ್ಳೆಯದೆ. ಏಕೆಂದರೆ, ಯೋಗಿ ಆದಿತ್ಯನಾಥ್ ಅವರು ಇಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಬೇಕಾಗುತ್ತಿತ್ತು ಎಂದು ಇಲ್ಲಿನ ರಾಮ ಮಂದಿರದ ಪ್ರಧಾನ ಅರ್ಚಕರು ಸೋಮವಾರ ಹೇಳಿದ್ದಾರೆ.

“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಂದಾಗಿ ಇಲ್ಲಿನ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ. ಇದರಿಂದ ಆದಿತ್ಯನಾಥ್ ಅವರು ಜನರ ವಿರೋಧವನ್ನು ಎದುರಿಸಬೇಕಾಗುತ್ತದೆ ಹೀಗಾಗಿ ಗೋರಖ್‌ಪುರದಿಂದ ಸ್ಪರ್ಧಿಸಬೇಕು ಎಂದು ನಾನು ಈ ಹಿಂದೆ ಸಲಹೆ ನೀಡಿದ್ದೆ” ಎಂದು ತಾತ್ಕಾಲಿಕ ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಸ್ಪರ್ಧಿಸಬಾರದು ಎಂದು ಹೇಗೆ ಸೂಚಿಸಿದ್ದಿರಿ ಎಂಬ ಪ್ರಶ್ನೆಗೆ, ರಾಮ ಲಲ್ಲಾ ಅವರನ್ನು ಕೇಳಿದ ನಂತರ ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಆದಿತ್ಯನಾಥ್‌‌ ಅಯೋಧ್ಯೆಯಲ್ಲಿ ಸ್ಪರ್ಧಿಸುವ ಕನಸು ಭಗ್ನವಾಗಿದ್ದೇಕೆ?

’ಇಲ್ಲಿನ ದಾರ್ಶನಿಕರು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಮನೆಗಳು ಮತ್ತು ಅಂಗಡಿಗಳನ್ನು ನೆಲಸಮ ಮಾಡಿರುವುದರಿಂದ ಮನೆ, ಅಂಗಡಿ ಕಳೆದುಕೊಂಡವರು ಆದಿತ್ಯನಾಥ್ ವಿರುದ್ಧವಾಗಿದ್ದಾರೆ. ಹೀಗಾಗಿ ಅವರು ಗೋರಖ್‌ಪುರ್‌ ಹೋಗುವುದು ಉತ್ತಮ ಎಂದು ನಾನು ಹೇಳಿದೆ. ಇಲ್ಲಿಂದ ಅವರು ಗೆಲ್ಲುತ್ತಿದ್ದು. ಆದರೆ, ಸಾಕಷ್ಟು ಸಮಸ್ಯೆ ಎದುರಿಸಬೇಕಾಗಿತ್ತು’ ಎಂದು 84 ವರ್ಷದ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸರುವ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದಾರೆ.

ಪವನ್ ಪಾಂಡೆ ಅವರು 2012 ರ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ ಗೆದ್ದ, ಹಿಂದಿನ ಅಖಿಲೇಶ್ ಯಾದವ್ ಸರ್ಕಾರದಲ್ಲಿ ಸಚಿವರಾಗಿದ್ದರು. 2017 ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ಅಯೋಧ್ಯೆ ಕ್ಷೇತ್ರವನ್ನು ಗೆದ್ದಿದ್ದರು.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಕಣಕ್ಕೆ ಇಳಿಯುತ್ತಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಡಿತ್ತು. ಆದರೆ ಬಿಜೆಪಿ ನಾಯಕತ್ವವು ಅವರನ್ನು ಗೋರಖ್‌ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದೆ.

ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳು – ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಗೋರಖ್‌ಪುರದಿಂದ ಆದಿತ್ಯನಾಥ್‌‌ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಮ್ಯೂನಿಸ್ಟ್,ಮಾವೋವಾದಿಗಳ ಕಪೋಲ ಕಲ್ಪಿತಾ ಮಾಹಿತಿಗೆ ದಿಕ್ಕಾರವಿರಲಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...